ನ.3 ರಂದು ಸಂಪುಟ ವಿಸ್ತರಣೆ : ಯಡಿಯೂರಪ್ಪ

Yeddyurappa
ಬೆಂಗಳೂರು, ಅ. 31 : ಬಿಜೆಪಿ ಅನರ್ಹ ಶಾಸಕರ ವಿರುದ್ಧವಾಗಿ ಹೈಕೋರ್ಟ್‌ನಲ್ಲಿ ತೀರ್ಪು ಪ್ರಕಟಗೊಳ್ಳುತ್ತಿದ್ದಂತೆ ಸರಕಾರ ಸಂಪುಟ ವಿಸ್ತರಣೆಗೆ ಮುಂದಾಗಿದ್ದು, ನ.4ರಂದು ಮುಹೂರ್ತ ಸಿದ್ಧವಾಗಿದೆ. ತೀರ್ಪು ಸರಕಾರಕ್ಕೆ ಆನೆಬಲ ನೀಡಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ನ.4 ರಂದು ಸಂಪುಟ ವಿಸ್ತರಣೆಗೆ ಒಲವು ವ್ಯಕ್ತಪಡಿಸಿದ್ದಾರೆ ಎಂದು ಹೇಳಲಾಗಿದೆ.

ಕಳೆದ ಬಾರಿ ಸಂಪುಟ ವಿಸ್ತರಣೆಯ ವೇಳೆ ಭುಗಿಲೆದ್ದ ಬಂಡಾಯದ ಬೇಗೆ ಸರಕಾರವನ್ನು ಪತನಗೊಳಿಸುವತ್ತ ಸಾಗಿತ್ತು. ಈ ಸಂದರ್ಭದಲ್ಲಿ ಇಲ್ಲಸಲ್ಲದ ಕಸರತ್ತು ನಡೆಸಿದ ಮುಖ್ಯಮಂತ್ರಿ ಯಡಿಯೂರಪ್ಪ ಕೊನೆಗೂ ತಮ್ಮ ಸ್ಥಾನವನ್ನು ಉಳಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಖಾಲಿ ಇರುವ 6 ಸ್ಥಾನಗಳನ್ನು ಭರ್ತಿ ಮಾಡಲು ಸರಕಾರ ಇದೀಗ ಮುಂದಾಗಿದೆ.

ಸರಕಾರ ಇಕ್ಕಟ್ಟಿಗೆ ಸಿಲುಕಿದ್ದಾಗ ಸರಕಾರಕ್ಕೆ ಸಾಥ್ ನೀಡಿದ್ದ ಪಕ್ಷೇತರ ಶಾಸಕ ವರ್ತೂರು ಪ್ರಕಾಶ್, ರಾಜೂಗೌಡರಿಗೆ ಈಗಾಗಲೇ ಸಂಪುಟದಲ್ಲಿ ಸ್ಥಾನ ನೀಡಲು ಯಡಿಯೂರಪ್ಪ ನಿರ್ಧರಿಸಿದ್ದು, ಉಳಿದಂತೆ ಸಂಭವನೀಯರ ಪಟ್ಟಿಯಲ್ಲಿ ಸಿ.ಟಿ.ರವಿ, ಅಪ್ಪಚ್ಚು ರಂಜನ್, ಸೊಗಡು ಶಿವಣ್ಣ ಹಾಗೂ ಅಪ್ಪುಪಟ್ಟಣ ಶೆಟ್ಟಿಯವರ ಹೆಸರು ಕೇಳಿ ಬರುತ್ತಿವೆ. ಚಿಕ್ಕಮಗಳೂರು ಜಿಲ್ಲೆಯ ಸಿ.ಟಿ.ರವಿ ಅಥವಾ ಜೀವರಾಜ್‌ರಲ್ಲಿ ಒಬ್ಬರು ಸಚಿವರಾಗಿ ಆಯ್ಕೆಯಾಗುವುದು ಖಚಿತವಾಗಿದೆ.

ನ.3 ಕ್ಕೆ ಸಂಪುಟ ವಿಸ್ತರಣೆ : ಚಿಕ್ಕಬಳ್ಳಾಪುರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಯಡಿಯೂರಪ್ಪ, ವರಿಷ್ಠರೊಂದಿಗೆ ಚರ್ಚಿಸಿ ನ.3ರಂದು ಸಂಪುಟ ವಿಸ್ತರಣೆ ಮಾಡಲಾಗುವುದು ಎಂದು ಹೇಳಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+