Get Updates
Get notified of breaking news, exclusive insights, and must-see stories!

ರಾಜ್ಯೋತ್ಸವ ಬಹಿಷ್ಕರಿಸಲು ಎಂಇಎಸ್ ತೀರ್ಮಾನ

Belgaum map
ಬೆಳಗಾವಿ, ಅ. 31 : ನವೆಂಬರ್ ಒಂದರಂದು ಕರ್ನಾಟಕದಾದ್ಯಂತ ನಡೆಯಲಿರುವ ರಾಜ್ಯೋತ್ಸವ ದಿನದಂದು ಮಹಾರಾಷ್ಟ್ರ ಏಕೀಕರಣ ಸಮಿತಿ ಅಂದು ಕರಾಳ ದಿನ ಆಚರಿಸಲು ನಿರ್ಧರಿಸಿದೆ. ಎಂಇಎಸ್ ಕರಾಳ ದಿನಾಚರಣೆಯನ್ನಾಗಿ ಆಚರಿಸಲು ಬೆಳಗಾವಿ ಜಿಲ್ಲಾಡಳಿತ ಅನುಮತಿ ನೀಡಿರುವುದಕ್ಕೆ ಕನ್ನಡಪರ ಸಂಘಟನೆಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿವೆ.

ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಎಂಇಎಸ್ ಮುಖಂಡ ವಿಕೆ ಪಾಟೀಲ್, ರಾಜ್ಯೋತ್ಸವವನ್ನು ನಾವು ಕರಾಳ ದಿನವನ್ನಾಗಿ ಆಚರಿಸಲು ನಿರ್ಧರಿಸಿದ್ದೇವೆ. ಜಿಲ್ಲಾಡಳಿತ ಕೂಡಾ ನವೆಂಬರ್ 1 ರಂದು ಕರಾಳ ದಿನ ಆಚರಿಸಲು ಅನುಮತಿ ನೀಡಿದೆ. ಹೀಗಾಗಿ ಅಂದು ನಾವುಗಳು ಬೃಹತ್ ಪ್ರಮಾಣದಲ್ಲಿ ಪ್ರತಿಭಟನೆ ಮಾಡಲು ಮುಂದಾಗಿದ್ದೇವೆ ಎಂದು ಹೇಳಿದ್ದಾರೆ.

ಬೆಳಗಾವಿ ಜಿಲ್ಲಾಡಳಿದ ಕ್ರಮಕ್ಕೆ ಕರ್ನಾಟಕ ರಕ್ಷಣೆ ವೇದಿಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಕರ್ನಾಟಕದ ಭಾಗವಾಗಿರುವ ಬೆಳಗಾವಿಯಲ್ಲಿ ಎಂಇಎಸ್ ಕರಾಳ ದಿನ ಆಚರಿಸುವುದನ್ನು ಸಹಿಸಲು ಸಾಧ್ಯವಿಲ್ಲ. ಬೆಳಗಾವಿ ಜಿಲ್ಲಾಡಳಿತ ಕರಾಳ ಆಚರಿಸಲು ಅನುಮತಿ ನೀಡಿದ್ದಾದರೂ ಹೇಗೆ ? ಇದರ ವಿರುದ್ಧ ವೇದಿಕೆ ಹೋರಾಟ ನಡೆಸಲಿದೆ ಎಂದು ಕರವೇ ಅಧ್ಯಕ್ಷ ಟಿಎ ನಾರಾಯಣಗೌಡ ಎಚ್ಚರಿಕೆ ನೀಡಿದ್ದಾರೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+