ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ರಾಜ್ಯೋತ್ಸವ ಬಹಿಷ್ಕರಿಸಲು ಎಂಇಎಸ್ ತೀರ್ಮಾನ

By Mrutyunjaya Kalmat
|
Google Oneindia Kannada News

Belgaum map
ಬೆಳಗಾವಿ, ಅ. 31 : ನವೆಂಬರ್ ಒಂದರಂದು ಕರ್ನಾಟಕದಾದ್ಯಂತ ನಡೆಯಲಿರುವ ರಾಜ್ಯೋತ್ಸವ ದಿನದಂದು ಮಹಾರಾಷ್ಟ್ರ ಏಕೀಕರಣ ಸಮಿತಿ ಅಂದು ಕರಾಳ ದಿನ ಆಚರಿಸಲು ನಿರ್ಧರಿಸಿದೆ. ಎಂಇಎಸ್ ಕರಾಳ ದಿನಾಚರಣೆಯನ್ನಾಗಿ ಆಚರಿಸಲು ಬೆಳಗಾವಿ ಜಿಲ್ಲಾಡಳಿತ ಅನುಮತಿ ನೀಡಿರುವುದಕ್ಕೆ ಕನ್ನಡಪರ ಸಂಘಟನೆಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿವೆ.

ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಎಂಇಎಸ್ ಮುಖಂಡ ವಿಕೆ ಪಾಟೀಲ್, ರಾಜ್ಯೋತ್ಸವವನ್ನು ನಾವು ಕರಾಳ ದಿನವನ್ನಾಗಿ ಆಚರಿಸಲು ನಿರ್ಧರಿಸಿದ್ದೇವೆ. ಜಿಲ್ಲಾಡಳಿತ ಕೂಡಾ ನವೆಂಬರ್ 1 ರಂದು ಕರಾಳ ದಿನ ಆಚರಿಸಲು ಅನುಮತಿ ನೀಡಿದೆ. ಹೀಗಾಗಿ ಅಂದು ನಾವುಗಳು ಬೃಹತ್ ಪ್ರಮಾಣದಲ್ಲಿ ಪ್ರತಿಭಟನೆ ಮಾಡಲು ಮುಂದಾಗಿದ್ದೇವೆ ಎಂದು ಹೇಳಿದ್ದಾರೆ.

ಬೆಳಗಾವಿ ಜಿಲ್ಲಾಡಳಿದ ಕ್ರಮಕ್ಕೆ ಕರ್ನಾಟಕ ರಕ್ಷಣೆ ವೇದಿಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಕರ್ನಾಟಕದ ಭಾಗವಾಗಿರುವ ಬೆಳಗಾವಿಯಲ್ಲಿ ಎಂಇಎಸ್ ಕರಾಳ ದಿನ ಆಚರಿಸುವುದನ್ನು ಸಹಿಸಲು ಸಾಧ್ಯವಿಲ್ಲ. ಬೆಳಗಾವಿ ಜಿಲ್ಲಾಡಳಿತ ಕರಾಳ ಆಚರಿಸಲು ಅನುಮತಿ ನೀಡಿದ್ದಾದರೂ ಹೇಗೆ ? ಇದರ ವಿರುದ್ಧ ವೇದಿಕೆ ಹೋರಾಟ ನಡೆಸಲಿದೆ ಎಂದು ಕರವೇ ಅಧ್ಯಕ್ಷ ಟಿಎ ನಾರಾಯಣಗೌಡ ಎಚ್ಚರಿಕೆ ನೀಡಿದ್ದಾರೆ.

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X