ತ್ವರಿತ ಅಲರ್ಟ್ ಗಳಿಗಾಗಿ
For Daily Alerts
ರಾಜ್ಯೋತ್ಸವ ಬಹಿಷ್ಕರಿಸಲು ಎಂಇಎಸ್ ತೀರ್ಮಾನ
ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಎಂಇಎಸ್ ಮುಖಂಡ ವಿಕೆ ಪಾಟೀಲ್, ರಾಜ್ಯೋತ್ಸವವನ್ನು ನಾವು ಕರಾಳ ದಿನವನ್ನಾಗಿ ಆಚರಿಸಲು ನಿರ್ಧರಿಸಿದ್ದೇವೆ. ಜಿಲ್ಲಾಡಳಿತ ಕೂಡಾ ನವೆಂಬರ್ 1 ರಂದು ಕರಾಳ ದಿನ ಆಚರಿಸಲು ಅನುಮತಿ ನೀಡಿದೆ. ಹೀಗಾಗಿ ಅಂದು ನಾವುಗಳು ಬೃಹತ್ ಪ್ರಮಾಣದಲ್ಲಿ ಪ್ರತಿಭಟನೆ ಮಾಡಲು ಮುಂದಾಗಿದ್ದೇವೆ ಎಂದು ಹೇಳಿದ್ದಾರೆ.
ಬೆಳಗಾವಿ ಜಿಲ್ಲಾಡಳಿದ ಕ್ರಮಕ್ಕೆ ಕರ್ನಾಟಕ ರಕ್ಷಣೆ ವೇದಿಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಕರ್ನಾಟಕದ ಭಾಗವಾಗಿರುವ ಬೆಳಗಾವಿಯಲ್ಲಿ ಎಂಇಎಸ್ ಕರಾಳ ದಿನ ಆಚರಿಸುವುದನ್ನು ಸಹಿಸಲು ಸಾಧ್ಯವಿಲ್ಲ. ಬೆಳಗಾವಿ ಜಿಲ್ಲಾಡಳಿತ ಕರಾಳ ಆಚರಿಸಲು ಅನುಮತಿ ನೀಡಿದ್ದಾದರೂ ಹೇಗೆ ? ಇದರ ವಿರುದ್ಧ ವೇದಿಕೆ ಹೋರಾಟ ನಡೆಸಲಿದೆ ಎಂದು ಕರವೇ ಅಧ್ಯಕ್ಷ ಟಿಎ ನಾರಾಯಣಗೌಡ ಎಚ್ಚರಿಕೆ ನೀಡಿದ್ದಾರೆ.
Comments
ಬೆಳಗಾವಿ ಎಂಇಎಸ್ ಮಹಾರಾಷ್ಟ್ರ ಏಕೀಕರಣ ಸಮಿತಿ ಕರವೇ ಕರ್ನಾಟಕ ರಕ್ಷಣಾ ವೇದಿಕೆ mes maharashtra ekikarana samithi karave karnataka rakshana vedike
Story first published: Sunday, October 31, 2010, 15:07 [IST]