ತ್ವರಿತ ಅಲರ್ಟ್ ಗಳಿಗಾಗಿ
For Daily Alerts
ಮತ್ತೆ ಬಂಡಾಯ, ಸಚೇತಕ ಜೀವರಾಜ್ ರಾಜೀನಾಮೆ?
ಚಿಕ್ಕಮಗಳೂರು ಶಾಸಕ ಸಿಟಿ ರವಿ, ತುಮಕೂರು ನಗರ ಶಾಸಕ ಸೊಗಡು ಶಿವಣ್ಣ, ಕೋಲಾರದ ಪಕ್ಷೇತರ ಶಾಸಕ ವರ್ತೂರು ಪ್ರಕಾಶ್ ಮತ್ತು ಸುರಪುರ ಶಾಸಕ ರಾಜೂಗೌಡ ಅವರಿಗೆ ಮಂತ್ರಿ ಸ್ಥಾನ ನೀಡುವುದು ಬಹುತೇಕ ಖಚಿತವಾಗಿದೆ. ಸಿಟಿ ರವಿ ಅವರಿಗೆ ಸಚಿವ ಸ್ಥಾನ ನೀಡುವುದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ ಸಚೇತಕ ಜೀವರಾಜ್ ಅವರು ಮುಖ್ಯಮಂತ್ರಿಗಳ ಕ್ರಮ ವಿರೋಧಿಸಿ ಸಚೇತಕ ಸ್ಥಾನಕ್ಕೆ ಸಂಜೆ ವೇಳೆಗೆ ರಾಜೀನಾಮೆ ನೀಡುವುದು ಖಾತ್ರಿಯಾಗಿದೆ.
ನ.3 ರಂದು ಬೆಳಗ್ಗೆ 9.30ಕ್ಕೆ ರಾಜಭವನದಲ್ಲಿ ಈ ನಾಲ್ವರು ಮಂತ್ರಿಗಳಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಅಪ್ಪಚ್ಚು ರಂಜನ್ ಅವರಿಗೆ ಮಂತ್ರಿ ಸ್ಥಾನ ನೀಡಿ ಎಂದು ಜೆಡಿಎಸ್ ಮುಖಂಡ ಎಂಸಿ ನಾಣಯ್ಯ ಅವರ ವಕಾಲತ್ತು ನಡೆಸಿದ್ದು, ಸಂಪುಟ ವಿಸ್ತರಣೆ ನಂತರ ರಾಜ್ಯ ರಾಜಕಾರಣದಲ್ಲಿ ಮತ್ತೆ ಭಿನ್ನಮತ ಭುಗಿಲೆದ್ದರೆ ಅಚ್ಚರಿಯೇನಿಲ್ಲ.
Comments
ಯಡಿಯೂರಪ್ಪ ಸಂಪುಟ ವಿಸ್ತರಣೆ ಸಿಟಿ ರವಿ ಸೊಗಡು ಶಿವಣ್ಣ ಡಿಎನ್ ಜೀವರಾಜ್ ವರ್ತೂರು ಪ್ರಕಾಶ್ yediyurappa cabinet expansion ct ravi sogadu shivanna dn jeevaraj varthur prakash
Story first published: Monday, November 1, 2010, 12:49 [IST]