ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕೃಷಿ ಉತ್ತೇಜನಕ್ಕೆ ಶೇ.1 ಬಡ್ಡಿ ದರ ಬೆಳೆ ಸಾಲ

By Mrutyunjaya Kalmat
|
Google Oneindia Kannada News

Yeddyurappa
ಬೆಂಗಳೂರು, ನ. 1 : ರೈತರಿಗೆ ಶೇ.೩ರ ಬಡ್ಡಿ ದರದಲ್ಲಿ ಬೆಳೆ ಸಾಲ ನೀಡುತ್ತಿರುವ ರಾಜ್ಯ ಸರಕಾರ ಈಗ ಕೃಷಿಕರಿಗೆ ಇನ್ನಷ್ಟು ಉತ್ತೇಜನ ನೀಡಲು ಶೇ.1ರ ಬಡ್ಡಿ ದರದಲ್ಲಿ ಸಾಲ ನೀಡಲು ಆಲೋಚಿಸಿದೆ.

ಮುಂದಿನ ಬಜೆಟ್‌ನಲ್ಲಿ ಈ ಯೋಜನೆ ಪ್ರಕಟಿಸಲು ನಿರ್ಧರಿಸಲಾಗಿದೆ. ಸಕಾಲದಲ್ಲಿ ಸಾಲ ಮರು ಪಾವತಿ ಮಾಡುವ ರೈತರಿಗೆ ಈ ಸೌಲಭ್ಯ ಸಿಗಲಿದೆ. ಅವಧಿ ಯೊಳಗೆ ಸಾಲ ಮರು ಪಾವತಿಸದ ರೈತರು ಮಾಮೂಲಿ ಬಡ್ಡಿ ದರದಲ್ಲಿ ಸಾಲ ಮರು ಪಾವತಿ ಮಾಡಬೇಕಾಗಿದೆ. ಮುಖ್ಯಮಂತ್ರಿ ಯಡಿಯೂರಪ್ಪ ಚಿಕ್ಕಬಳ್ಳಾಪುರಕ್ಕೆ ತೆರಳುವ ಮುನ್ನ ತಮ್ಮ ನಿವಾಸದಲ್ಲಿ ಭಾನುವಾರ ಸುದ್ದಿಗಾರರಿಗೆ ಈ ವಿಷಯ ತಿಳಿಸಿದರು.

ಸಹಕಾರ ಬ್ಯಾಂಕ್‌ಗಳಲ್ಲಿ ಶೇ.3ರ ಬಡ್ಡಿ ದರದಲ್ಲಿ ಬೆಳೆ ಸಾಲ ನೀಡಲಾಗುತ್ತಿದ್ದು, ರೈತರ ಹಿತದೃಷ್ಟಿಯಿಂದ ಬಡ್ಡಿ ದರವನ್ನು ಶೇ.1ಕ್ಕೆ ಇಳಿಸಲಾಗುವುದು ಎಂದು ಅವರು ಹೇಳಿದರು. ಬಿಜೆಪಿ ಸರಕಾರ ಅಧಿಕಾರಕ್ಕೆ ಬಂದ ನಂತರ ರೈತರಿಗೆ ಕಡಿಮೆ ಬಡ್ಡಿ ದರದಲ್ಲಿ ಸಾಲ ವಿತರಿಸುತ್ತಿದೆ. ದೇಶದಲ್ಲೇ ಇಷ್ಟು ಕಡಿಮೆ ಬಡ್ಡಿ ದರದಲ್ಲಿ ಸಾಲ ವಿತರಿಸುತ್ತಿರುವ ರಾಜ್ಯ ಕರ್ನಾಟಕ. ರೈತನ ಮಗನಾಗಿರುವ ತಮಗೆ ಕೃಷಿಕ ಎದುರಿಸುತ್ತಿರುವ ಸಮಸ್ಯೆಗಳೇನೆಂಬುದು ಗೊತ್ತಿದೆ. ಕಡಿಮೆ ಬಡ್ಡಿ ದರದಲ್ಲಿ ಲ ವಿತರಿಸುವುದಕ್ಕೆ ಹಣಕಾಸಿನ ತೊಂದರೆ ಇಲ್ಲ ಎಂದು ಸ್ಪಷ್ಟಪಡಿಸಿದರು.

ಜಿಲ್ಲಾ ಹಾಗೂ ತಾಲೂಕು ಪಂಚಾಯಿತಿ ಚುನಾವಣೆಗೆ ಪಕ್ಷ ಸಕಲ ಸಿದ್ಧತೆ ನಡೆಸಿದೆ. ಪ್ರತಿ ಜಿಲ್ಲೆ ಹಾಗೂ ತಾಲೂಕಿನಲ್ಲಿಯೂ ಕಾರ್ಯಕರ್ತರ ಸಭೆಗಳನ್ನು ನಡೆಸಲಾಗುವುದು. ಚುನಾವಣೆ ಮುಂದೂಡುವ ಯಾವುದೇ ಪ್ರಯತ್ನವಿಲ್ಲ ಎಂದು ಅವರು ಹೇಳಿದರು.

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X