ರವಿ ಪೂಜಾರಿಯ ಏಳು ಸಹಚರರ ಬಂಧನ

ಇದರಲ್ಲಿ ಮುಖ್ಯವಾಗಿ ಮಂತ್ರಿ ಡೆವಲಪರ್ಸ್ ಕಚೇರಿ ಮೇಲೆ ಗುಂಡು ಹಾರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಉಡುಪಿ ಜಿಲ್ಲೆ, ಪುಂಜಿಪೆಟ್ಟು ಪೋಸ್ಟ್, ದೊಡ್ಡನಗುಡ್ಡೆ ನಿವಾಸಿ ಸಿರಾಜ್ (32), ಧರ್ಮರಾಜ ಅಲಿಯಾಸ್ ಧರ್ಮೇಂದ್ರ (34), ರಂಜಿತ್ ಜೆ. ಕುಂದರ್ ಅಲಿಯಾಸ್ ರಂಜಿತ್ (27) ಹಾಗೂ ಬೆಂಗಳೂರಿನ ಗೌರವನಗರದ ಶಿವಕುಮಾರ್ ಅಲಿಯಾಸ್ ಗುಂಡ (28) ಬಂಧಿತರು.
ಮತ್ತೊಂದು ಪ್ರಕರಣದಲ್ಲಿ ಶಿವಮೊಗ್ಗ ಜಿಲ್ಲೆ, ಎಸ್.ಎನ್. ನಗರದ ಲಕ್ಷ್ಮಣ (34), ಸೊರಬ ರಸ್ತೆ, ಗೋಪಾಲಗೌಡನಗರದ ಮೋಹನ್ರಾವ್ (35) ಹಾಗೂ ಲಿಂಗರಾಜಪುರ ತಮ್ಮಣ್ಣ ಗಾರ್ಡನ್ನ ನಿಜಾಮುದ್ದೀನ್ ಅಲಿಯಾಸ್ ನಿಜಾಮ (26) ಬಂಧಿತ ಆರೋಪಿಗಳು.
ಖ್ಯಾತ ಉದ್ಯಮಿಗಳು ಹಾಗೂ ಲ್ಯಾಂಡ್ ಡೆವಲಪರ್ಸ್ ಗಳಿಗೆ ಬೆದರಿಕೆ ಹಾಕಿ ಹಫ್ತಾ ವಸೂಲಿ ಮಾಡಲು ರವಿಪೂಜಾರಿ ತನ್ನ ಸಹಚರರನ್ನು ಬಳಸಿಕೊಳ್ಳುತ್ತಿದ್ದು, ಅದರಂತೆ ಆರೋಪಿ ಸಿರಾಜ್ ಮತ್ತಿತರರು ಉದ್ಯಮಿಗಳ ಮೊಬೈಲ್ ಹಾಗೂ ಸ್ಥಿರ ದೂರವಾಣಿ ಸಂಖ್ಯೆಗಳನ್ನು ಸಂಗ್ರಹಿಸಿ ರವಿಪೂಜಾರಿಗೆ ಕಳುಹಿಸುತ್ತಿದ್ದರು. ಕಬ್ಬನ್ಪಾರ್ಕ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿರುವ ಮಂತ್ರಿ ಡೆವಲಪರ್ಸ್ ಕಚೇರಿಗೆ ಸೆ.25 ರಂದು ರಾತ್ರಿ ತನ್ನ ಇಬ್ಬರು ಸಹಚರರನ್ನು ಹಫ್ತಾ ವಸೂಲಿಗೆ ಕಳುಹಿಸಿದ್ದ.
ಬೈಕ್ನಲ್ಲಿ ಬಂದ ಇಬ್ಬರು ಕಚೇರಿಗೆ ಗುಂಡು ಹಾರಿಸಿ ರವಿಪೂಜಾರಿಗೆ ಹಣ ನೀಡಬೇಕು ಎಂದು ಫೋನ್ ನಂಬರ್ಗಳನ್ನು ಕೃತ್ಯದ ಸ್ಥಳದಲ್ಲಿ ಎಸೆದು ಹೋಗಿದ್ದರು. ತಕ್ಷಣ ಕಾರ್ಯಾಚರಣೆ ನಡೆಸಿದ ಪೊಲೀಸರು, ಮರುದಿನ ಬೆಳಗಿನಜಾವ ಚಂದ್ರು ಎಂಬ ಸಹಚರನನ್ನು ಎನ್ ಕೌಂಟರ್ ಮಾಡಿದರು. ಆದರೆ, ಮತ್ತೊಬ್ಬ ತಪ್ಪಿಸಿಕೊಂಡ. ಈ ಪ್ರಕರಣದ ತನಿಖೆಯನ್ನು ಸಿಸಿಬಿಗೆ ವಹಿಸಲಾಗಿತ್ತು. ಜಂಟಿ ಪೊಲೀಸ್ ಆಯುಕ್ತ ಅಲೋಕ್ಕುಮಾರ್ ನೇತೃತ್ವದಲ್ಲಿ ತನಿಖಾ ತಂಡ ಮಾಹಿತಿ ಸಂಗ್ರಹಿಸಿ ಮತ್ತಷ್ಟು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications