ಮಲೇರಿಯಾ : ಮಾಧ್ಯಮಗಳೊಂದಿಗೆ ಸೆಟಗೊಂಡ ರೆಡ್ಡಿ

ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮಾಧ್ಯಮಗಳು ಪ್ರಕರಣವನ್ನು ವೈಭವೀಕರಿಸುತ್ತಿವೆ. ಮಲೇರಿಯಾದಿಂದ ಮೃತಪಟ್ಟವರು ಕೇವಲ 8 ಜನ. ಹೀಗಿದ್ದಾಗಲೂ ಬಾಯಿ ಬಂದ ಹಾಗೆ ಸಾವಿನ ಸಂಖ್ಯೆ ಏರಿಸತೊಡಗಿವೆ. ಆದ್ದರಿಂದ ಮಾಧ್ಯಮಗಳ ಜೊತೆ ನಾನಿನ್ನು ಮಾತನಾಡುವುದಿಲ್ಲ ಎಂದು ರೆಡ್ಡಿ ಮುನಿಸಿನ ಮಾತುಗಳನ್ನಾಡಿದ್ದಾರೆ.
ಗಾದಿಗನೂರು ಗ್ರಾಮದಲ್ಲಿ ಮಂಗಳವಾರ ನಡೆದ ಮಲೇರಿಯಾ, ಇಲಿಜ್ವರ ಸೇರಿ ಸಾಂಕ್ರಾಮಿಕ ರೋಗಗಳಿಂದ ಸಂತ್ರಸ್ತ ಕುಟುಂಬಗಳ ವಾರಸುದಾರರಿಗೆ ಚೆಕ್ ವಿತರಿಸಿ ಮಾತನಾಡುತ್ತಿದ್ದರು. ಈ ಪ್ರಕರಣದಲ್ಲಿ ಮೃತಪಟ್ಟವರು ಒಟ್ಟು 14 ಜನ. ಅದರಲ್ಲೂ ಮಲೇರಿಯಾದಿಂದ ಮೃತಪಟ್ಟವರು ಕೇವಲ 8 ಜನ. ಜಿಲ್ಲಾಡಳಿತ 18 ಜನರ ವಾರಸುದಾರರಿಗೆ ಪರಿಹಾರ ನೀಡುತ್ತಿದೆ ಎಂದರು.
ಮಾಧ್ಯಮಗಳು ಮೃತರ ಸಂಖ್ಯೆಯನ್ನು ತಪ್ಪು ತಪ್ಪಾಗಿ ಪ್ರಕಟಿಸುತ್ತಿವೆ. ಇಡೀ ಪ್ರಕರಣ ಕುರಿತು ಮಾಧ್ಯಮಗಳು ವೈಭವೀಕರಣಕ್ಕೆ ನಿಂತಿವೆ. ಮಾಧ್ಯಮಗಳು ನೈರ್ಮಲ್ಯ, ಸ್ವಚ್ಛತೆ, ಆರೋಗ್ಯ ಕುರಿತು ಜನರಲ್ಲಿ ಜಾಗೃತಿ ಮೂಡಿಸುವ ಕೆಲಸ ಮಾಡುತ್ತಿಲ್ಲ. ಬದಲಾಗಿ ವೈಭವೀಕರಿಸಿದ ವರದಿಗಳ ಮೂಲಕ ಜನರಲ್ಲಿ ಆತಂಕದ ವಾತಾವರಣ ನಿರ್ಮಾಣ ಮಾಡುತ್ತಿವೆ ಎಂದು ಕಿಡಿಕಾರಿದರು.
ಶಾಲೆಗಳಿಗೆ ರಜೆ : ಹೊಸಪೇಟೆ ತಾಲೂಕಿನ ಭುವನಹಳ್ಳಿ, ಗಾದಿಗನೂರು, ಬೈಲುವದ್ದಿಗೇರಿ, ಕುಟುಗಿನಾಳ್, ಧರ್ಮಸಾಗರ, ಕಾಕುಬಾಳು, ಗುಂಡ್ಲ ವದ್ದಿಗೇರಿ, ಪಾಪಿನಾಯಕನಹಳ್ಳಿ ಹಾಗು ವಡ್ಡರಹಳ್ಳಿ ಗ್ರಾಮದಲ್ಲಿರುವ ತೀವ್ರವಾಗಿ ಕಾಣಿಸಿಕೊಂಡಿರುವ ಸಾಂಕ್ರಾಮಿಕ ರೋಗಗಳನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತ ಪ್ರಾಥಮಿಕ - ಪ್ರೌಢಶಾಲೆಗಳಿಗೆ ನವೆಂಬರ್ 3 ರಿಂದ 8 ರವರೆಗೆ ರಜೆ ಘೋಷಿಸಲಾಗಿದೆ.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಶ್ರೀಕಾಂತ್ ಬಾಸೂರ ಅವರ ಶಿಫಾರಸ್ಸಿನ ಮೇರೆಗೆ ಜಿಲ್ಲಾಧಿಕಾರಿ ಬಿ. ಶಿವಪ್ಪ ಅವರ ನಿರ್ದೇಶನದ ಮೇರೆಗೆ ನವೆಂಬರ್ 3 ರಿಂದ 8 ರವರೆಗೆ ರಜೆಯನ್ನು ಘೋಷಿಸಲಾಗಿದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಡಾ.ಬಾಲರಾಜು ಅವರು ತಿಳಿಸಿದ್ದಾರೆ.
ಮೃತರ ಸಂಬಂಧಿಕರಿಗೆ ಚೆಕ್ ವಿತರಣೆ : ಗಾದಿಗನೂರು, ಭುವನಹಳ್ಳಿ ಸೇರಿ ವಿವಿಧ ಗ್ರಾಮಗಳಲ್ಲಿ ಸಾಂಕ್ರಾಮಿಕ ರೋಗಗಳಿಂದಾಗಿ ಮೃತಪಟ್ಟ 18 ಜನರ ವಾರಸುದಾರರಿಗೆ ಬಳ್ಳಾರಿ ಅಜೆಂಡಾ ಟಾಸ್ಕ್ಫೋರ್ಸ್ನಿಂದ ತಲಾ ಒಂದು ಲಕ್ಷ ರುಪಾಯಿ ಮೊತ್ತದ ಚೆಕ್ ಅನ್ನು ಜಿಲ್ಲಾಡಳಿತ ಮಂಗಳವಾರ ವಿತರಣೆ ಮಾಡಿದೆ. ಗಾದಿಗನೂರು ಪ್ರಾಥಮಿಕ ಆರೋಗ್ಯ ಕೇಂದ್ರದ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಚಿವ ಜಿ. ಜನಾರ್ದನ ರೆಡ್ಡಿ ಹಾಗೂ ಸಚಿವ ಬಿ. ಶ್ರೀರಾಮುಲು ಅವರು ಚೆಕ್ಗಳನ್ನು ವಿತರಿಸಿದ್ದಾರೆ.
-
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Gold Rate Today: ಬೆಂಗಳೂರಿನಲ್ಲಿ ಚಿನ್ನದ ದರ ಮತ್ತೆ ಏರಿಕೆ: 15,000 ರೂಪಾಯಿ ಗಡಿ ದಾಟಿದ 24 ಕ್ಯಾರೆಟ್ ಚಿನ್ನ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
Rishab Shetty: ಅಧ್ಯಾಯ ಎರಡು ಇಲ್ಲಿಂದ ಶುರು; ಸ್ಯಾಂಡಲ್ವುಡ್ನಲ್ಲಿ ಸಂಚಲನ ಮೂಡಿಸಿದ ರಿಷಬ್ ಶೆಟ್ಟಿ ಪೋಸ್ಟ್ -
ಹೊಸತೊಡಕು: ಮಧ್ಯರಾತ್ರಿಯಿಂದಲೇ ಮಾಂಸ ಖರೀದಿ ಭರಾಟೆ, ಎಷ್ಟಿದೆ ಇಂದಿನ ಚಿಕನ್-ಮಟನ್ ದರ? -
World Happiness Report 2026: ಫಿನ್ಲೆಂಡ್ ಜಗತ್ತಿನ ಅತ್ಯಂತ ಸಂತೋಷದಾಯಕ ದೇಶ: ನಮ್ಮ ಭಾರತಕ್ಕೆ ಸಿಕ್ಕ ಸ್ಥಾನವೆಷ್ಟು? -
ಈ ಸಂವತ್ಸರಕ್ಕೇಕೆ ಈ ಹೆಸರು? ‘ಪರಾಭವ’ ಅಂದ್ರೆ ‘ಸೋಲು’ ಎಂಬ ಅರ್ಥವಲ್ಲವೇ? -
Rashmika Mandanna: ಮನೆಮಗಳಾಗಿ ಇಲ್ಲಿಗೆ ಬಂದೆ, ಈಗ ಸೊಸೆಯಾಗಿ ನಿಂತಿದ್ದೇನೆ: ರಶ್ಮಿಕಾ ಮಂದಣ್ಣ ಭಾವುಕ -
ಕೇಂದ್ರೀಯ ವಿದ್ಯಾಲಯ 1ನೇ ತರಗತಿ ಪ್ರವೇಶಾತಿ 2026: ಇಂದಿನಿಂದಲೇ ಅರ್ಜಿ ಸಲ್ಲಿಕೆ ಶುರು, ಪೋಷಕರೇ ಈಗಲೇ ಗಮನಿಸಿ












Click it and Unblock the Notifications