ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಶಿವಮೊಗ್ಗ ಜನತೆಗೆ ಕುಡಿಯಲು ಕೊಳಚೆ ನೀರೇ ಗತಿ!

By * ಕೆಆರ್ ಸೋಮನಾಥ್, ಶಿವಮೊಗ್ಗ
|
Google Oneindia Kannada News

Drinking water or drainage water
ಶಿವಮೊಗ್ಗ, ನ. 3 : ನಗರದ ಸಾರ್ವಜನಿಕರು ಅಸ್ವಚ್ಚತೆಯಿಂದ ಹಲವು ಸಾಂಕ್ರಾಮಿಕ ರೋಗಗಳಿಗೆ ತುತ್ತಾಗುತ್ತಿದ್ದಾರೆ. ಎಚ್1ಎನ್1, ಡೆಂಗ್ಯೂನಂತ ಮಹಾಮಾರಿಗಳು ಕಾಣಿಸಿಕೊಂಡಿವೆ. ಈ ನಡುವೆ ನಗರಸಭೆಯ ನಿರ್ಲಕ್ಷ್ಯದಿಂದ ಕುಡಿಯುವ ನೀರಿಗೆ ಕೊಳಚೆ ನೀರು ಸೇರುತ್ತಿರುವ ಆತಂಕಕಾರಿ ಘಟನೆ ಬೆಳಕಿಗೆ ಬಂದಿದೆ.

ಖಾಸಗಿ ಬಸ್ ನಿಲ್ದಾಣ ಸಮೀಪದ ದೊಡ್ಡಪೇಟೆ ಪೊಲೀಸ್ ಠಾಣೆ ಮುಂಭಾಗದಲ್ಲಿಯೇ ಕುಡಿಯುವ ನೀರಿನ ಪೈಪ್‌ನೊಂದಿಗೆ ಕೊಳಚೆ ನೀರು ಸೇರುತ್ತಿದೆ. ನಗರಸಭೆ ಸಿಬ್ಬಂದಿಗಳು ಕಣ್ಣಿದ್ದು ಕುರುಡರಂತೆ ವರ್ತಿಸುತ್ತಿರುವುದು ನಿಜಕ್ಕೂ ಆಶ್ಚರ್ಯಕರ ಸಂಗತಿಯಾಗಿದೆ.

ತುಂಗಾ ನದಿಯಿಂದ ಕುಡಿಯುವ ನೀರಿನ ಮುಖ್ಯ ಪೈಪ್ ದೊಡ್ಡಪೇಟೆ ಪೊಲೀಸ್ ಠಾಣೆಯ ಮುಂಭಾಗದಲ್ಲಿ ಹಾದು ಹೋಗಿದೆ. ಇಲ್ಲಿ ಸಿಮೆಂಟ್ ಛೇಂಬರ್‌ವೊಂದನ್ನು ನಿರ್ಮಿಸಿ, ಕಂಟ್ರೋಲ್ ವಾಲ್‌ವೊಂದನ್ನು ಅಳವಡಿಸಲಾಗಿದೆ. ಆದರೆ ಇಲ್ಲಿ ಚರಂಡಿ ವ್ಯವಸ್ಥೆ ಸಮರ್ಪಕವಾಗಿ ಇರದೆ ಇರುವುದರಿಂದ, ಕೊಳಚೆ ನೀರು ಸಿಮೆಂಟ್ ಛೇಂಬರ್‌ಗೆ ಹರಿದು ಬರುತ್ತಿದೆ. ಕುಡಿಯುವ ನೀರಿನೊಂದಿಗೆ ಬೆರೆಯುತ್ತಿದೆ ಎಂದು ಸುತ್ತಮುತ್ತಲಿನ ನಿವಾಸಿಗಳು ಆರೋಪಿಸಿದ್ದಾರೆ.

ಕೂಡಲೇ ನಗರಸಭೆ ಅಧಿಕಾರಿಗಳು ಇತ್ತ ಗಮನಹರಿಸಬೇಕು. ಕೊಳಚೆ ನೀರು ಶುದ್ದ ನೀರಿಗೆ ಸೇರುವುದನ್ನು ತಪ್ಪಿಸಬೇಕಾಗಿದೆ. ಅಶುದ್ದ ನೀರು ಕುಡಿದು ಸಾರ್ವಜನಿಕರು ರೋಗಗಳಿಗೆ ತುತ್ತಾಗುವ ಮುನ್ನವೇ ಎಚ್ಚರ ವಹಿಸಬೇಕಾಗಿದೆ.

ಇಂಗ್ಲಿಷ್ ಲಿಪಿಯಲ್ಲಿ ಕನ್ನಡ ಎಸ್ಎಮ್ಎಸ್ | ದಟ್ಸ್ ಕನ್ನಡ ಫ್ಯಾನ್ ಕ್ಲಬ್ ಸೇರಿರಿ | ಮೊಬೈಲಲ್ಲಿ ಕನ್ನಡ ಸುದ್ದಿ ಓದಿರಿ | ಹೂವಿನಂಗಡಿ 24/7

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X