ಬದನವಾಳು ಹತ್ಯಾಕಾಂಡ : 20 ಜನರಿಗೆ ಜೀವಾವಧಿ

1993ರ ಮಾರ್ಚ್ 25ರಂದು ವೀರಶೈವ ಮತ್ತು ದಲಿತರ ನಡುವೆ ನಡೆದ ಕೋಮು ಸಂಘರ್ಷದಲ್ಲಿ ನಂಜನಗೂಡು ತಾಲೂಕಿನ ಬದನವಾಳು ಗ್ರಾಮದ 3 ದಲಿತರು ಹತ್ಯೆಯಾಗಿದ್ದರು. ಈ ಘಟನೆಯಲ್ಲಿ ಒಟ್ಟು 23 ಜನರನ್ನು ಬಂಧಿಸಲಾಗಿತ್ತು. ಅವರಲ್ಲಿ ಮೂವರು ಈಗಾಗಲೆ ಮೃತರಾಗಿದ್ದಾರೆ. ಉಳಿದ 20 ಜನ ಈಗ ಶಿಕ್ಷೆಗೆ ಗುರಿಯಾಗಿದ್ದಾರೆ. ಜೀವಾವಧಿ ಶಿಕ್ಷೆಯ ಜೊತೆಗೆ 15 ಸಾವಿರ ರು. ದಂಡ ನೀಡಬೇಕೆಂದು ಆದೇಶಿಸಲಾಗಿದೆ.
ಹಿನ್ನೆಲೆ : ಬದನವಾಳು ಗ್ರಾಮದಲ್ಲಿರುವ ಸಿದ್ದೇಶ್ವರ ಸ್ವಾಮಿ ದೇವಾಲಯದ ಜೀರ್ಣೋದ್ಧಾರಕ್ಕಾಗಿ ಗ್ರಾಮದ ಎಲ್ಲರೂ ದೇಣಿಗೆ ನೀಡಬೇಕೆಂದು ಆಗ್ರಹಿಸಲಾಗಿತ್ತು. ಆದರೆ, ದೇವಸ್ಥಾನದಲ್ಲಿ ಪ್ರವೇಶ ನೀಡದ ಕಾರಣ ದಲಿತರು ದೇಣಿಗೆ ನೀಡಲು ವಿರೋಧ ವ್ಯಕ್ತಪಡಿಸಿದ್ದರು. ಮತ್ತು ದೇವಸ್ಥಾನದೊಳಗೆ ಪ್ರವೇಶ ನೀಡಿದರೆ ಮಾತ್ರ ದೇಣಿಗೆ ನೀಡುವುದಾಗಿ ಷರತ್ತು ಹಾಕಿದ್ದರು.
ಷರತ್ತಿಗೆ ಒಪ್ಪಿದ ವೀರಶೈವ ಜನಾಂಗದವರು ದೇವಸ್ಥಾನದ ಮರುಉದ್ಘಾಟನಾ ಸಮಾರಂಭದ ಹೊತ್ತಿಗೆ ದಲಿತರಿಗೆ ಪ್ರವೇಶ ನಿರಾಕರಿಸಿದರು. ಇದರಿಂದ ರೊಚ್ಚಿಗೆದ್ದ ದಲಿತರು ಸಮಾರಂಭ ರದ್ದಾಗುವಂತೆ ಮಾಡಿದ್ದರು. ಸೇಡು ತೀರಿಸಿಕೊಳ್ಳಲು ಹವಣಿಸುತ್ತಿದ್ದ ವೀರಶೈವರು 1993ರ ಮಾರ್ಚ್ 25ರಂದು ಕ್ರಿಕೆಟ್ ಪಂದ್ಯಾವಳಿ ನಂತರ ಮರಳುತ್ತಿದ್ದ ದಲಿತರ ಮೇಲೆ ವೀರಶೈವರು ಮುಗಿಬಿದ್ದು ನಾರಾಯಣ ಸ್ವಾಮಿ, ಮಧುಕರ ಮತ್ತು ನಟರಾಜು ಎಂಬ ಮೂವರನ್ನು ಹತ್ಯೆ ಮಾಡಿದ್ದರು.
ಈ ಘಟನೆ ಮುಂದೆ ರಾಜಕೀಯ ಬಣ್ಣವನ್ನೂ ಪಡೆದುಕೊಂಡಿತು. ಎಲ್ಲೆಡೆಯಿಂದ ಬಂದ ವಿರೋಧ ಮತ್ತು ಒತ್ತಾಯಕ್ಕೆ ಮಣಿದಿದ್ದ ಅಂದಿನ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ ಸಿಬಿಐ ತನಿಖೆಗೆ ಆದೇಶಿಸಿದ್ದರು. ನ್ಯಾಯಾಲಯದಲ್ಲಿ ಪ್ರಕರಣ ದಾಖಲಾಗಿ ಸತತ 17 ವರ್ಷಗಳ ಕಾಲ ವಿಚಾರಣೆ ನಡೆದು ನ್ಯಾಯಾಧೀಶ ಎಮ್ಎಫ್ ಮಳವಳ್ಳಿ ಅವರು ಈಗ ತೀರ್ಪು ಪ್ರಕಟಿಸಿದ್ದಾರೆ. ಕೆಳ ನ್ಯಾಯಾಲಯದ ತೀರ್ಪನ್ನು ಪ್ರಶ್ನಿಸಿ ಕರ್ನಾಟಕ ಹೈಕೋರ್ಟಿಗೆ ಮೇಲ್ಮನವಿ ಸಲ್ಲಿಸುವುದಾಗಿ ಅಪರಾಧಿಗಳ ಪರ ವಕೀಲರು ಹೇಳಿದ್ದಾರೆ.
ಇಂಗ್ಲಿಷ್ ಲಿಪಿಯಲ್ಲಿ ಕನ್ನಡ ಎಸ್ಎಮ್ಎಸ್ | ದಟ್ಸ್ ಕನ್ನಡ ಫ್ಯಾನ್ ಕ್ಲಬ್ ಸೇರಿರಿ | ಮೊಬೈಲಲ್ಲಿ ಕನ್ನಡ ಸುದ್ದಿ ಓದಿರಿ | ಹೂವಿನಂಗಡಿ 24/7
-
ಬೆಂಗಳೂರು ನಾಯಂಡಳ್ಳಿಯಲ್ಲಿ ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಕಂದಮ್ಮ -
SSLC Hindi: ಅಂಕ ಬದಲು ಗ್ರೇಡಿಂಗ್ ವಿರೋಧಿಸಿ ಅರ್ಜಿ ಸಲ್ಲಿಸಿದ ಅರ್ಜಿದಾರರಿಗೆ 1 ಲಕ್ಷ ರೂ. ದಂಡ: ಕರವೇ ಹೇಳಿದ್ದೇನು -
Bengaluru: ಬೆಂಗಳೂರು ನಗರದಲ್ಲಿ ಸ್ವಿಗ್ಗಿ, ಜೊಮ್ಯಾಟೋ ಡೆಲಿವರಿ ಬಾಯ್ಸ್ಗೆ ಸಂಕಷ್ಟ, ಅಮಾನವೀಯ ಲಿಫ್ಟ್ ಸಂಸ್ಕೃತಿ -
ಚಿಕ್ಕಮಗಳೂರಲ್ಲಿ ನಾಪತ್ತೆಯಾಗಿದ್ದ ಕೇರಳದ ಬಾಲಕಿ ಶ್ರಿನಂದಾ ಸಾವು: 2 ಸಾವಿರ ಅಡಿ ಪ್ರಪಾತದಲ್ಲಿ ಶವ ಪತ್ತೆ -
Copra: ತಿಪಟೂರು ಎಪಿಎಂಸಿ ಮಾರುಕಟ್ಟೆಯಲ್ಲಿ ಮತ್ತೆ ದಾಖಲೆ ಬೆಲೆಗೆ ಮಾರಾಟವಾದ ಕೊಬ್ಬರಿ: ನಿರ್ಮಾಣವಾಯ್ತು ಹೊಸ ಇತಿಹಾಸ -
Mona Lisa: ಮಹಾಕುಂಭ ಮೇಳದ ಫೇಮಸ್ ಮೊನಾಲಿಸಾ ಪತಿಗೆ ಕಾನೂನು ಸಂಕಷ್ಟ: ಫರ್ಮಾನ್ ಖಾನ್ ಮೇಲೆ ಪೋಕ್ಸೋ ಪ್ರಕರಣ -
2nd PUC: ಬೆಂಗಳೂರು - ಪಿಯುಸಿಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ 260 ವಿದ್ಯಾರ್ಥಿಗಳಿಗೆ 35,000 ರೂ. -
RBI New Rule: ಇನ್ಮುಂದೆ ಆನ್ಲೈನ್ ವಹಿವಾಟಿನಲ್ಲಿ ದೊಡ್ಡ ಬದಲಾವಣೆ: 10,000 ರೂ. ಹಣ ವರ್ಗಾವಣೆಗೂ ಹೊಸ ನಿಯಮ -
Gold Rate April 10: ಚಿನ್ನ - ಬೆಳ್ಳಿ ಬೆಲೆಯಲ್ಲಿ ಅಚ್ಚರಿಯ ಬೆಳವಣಿಗೆ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
ದ್ವಿತೀಯ PUC ರಿಪೀಟರ್ಸ್ ಗಮನಕ್ಕೆ: ತಾಂತ್ರಿಕ ದೋಷ ಸರಿಪಡಿಸಿ ಪರಿಷ್ಕೃತ ಫಲಿತಾಂಶ ಪ್ರಕಟಿಸಿದ ಮಂಡಳಿ -
ಸಾಮಾಜಿಕ ಜಾಲತಾಣದ ಕರೆಗೆ ಓಗೊಟ್ಟ ಹೆಚ್.ಡಿ.ಕುಮಾರಸ್ವಾಮಿ: ನಂಜನಗೂಡಿನ ಹುಲ್ಲಳ್ಳಿಯ ನೊಂದ ಕುಟುಂಬಕ್ಕೆ ಅಭಯ -
ಡಿವಿಜಿ ಒಡನಾಡಿ,ರಾಷ್ಟ್ರೋತ್ಥಾನದ ಮಾಜಿ ಅಧ್ಯಕ್ಷ ಎಸ್ಆರ್ ರಾಮಸ್ವಾಮಿ ನಿಧನ












Click it and Unblock the Notifications