ಶುಭಾ ಜೀವಾವಧಿ ಶಿಕ್ಷೆ ಎತ್ತಿಹಿಡಿದ ಹೈಕೋರ್ಟ್

ತಾನು ಅಮಾಯಕಿ, ಗಿರೀಶ್ ಹತ್ಯೆಗೆ ಸಂಚು ರೂಪಿಸಿರಲಿಲ್ಲ ಎಂದು ಹೇಳಿದ್ದ ಶುಭಾಗೆ ಉಚ್ಚ ನ್ಯಾಯಾಲಯದಲ್ಲಿಯೂ ಸೋಲುಂಟಾಗಿದೆ. ನ್ಯಾಯಮೂರ್ತಿ ಎನ್ ಕುಮಾರ್ ಮತ್ತು ನ್ಯಾ. ಪಾಚ್ಚಾಪುರೆ ಅವರನ್ನೊಳಗೊಂಡ ವಿಭಾಗೀಯ ಪೀಠ ಗುರುವಾರ ಈ ತೀರ್ಪನ್ನು ನೀಡಿದೆ. ಈ ಬಗೆಯ ಅಪರಾಧ ಎಸಗುವವರಿಗೆ ಈ ತೀರ್ಪು ತಕ್ಕ ಪಾಠವಾಗಬೇಕು ಎಂದು ನ್ಯಾಯಮೂರ್ತಿಗಳು ತೀರ್ಪಿನಲ್ಲಿ ತಿಳಿಸಿದ್ದಾರೆ.
ಈ ಪ್ರಕರಣದಲ್ಲಿ ಭಾಗಿಯಾಗಿರುವ ಗಿರೀಶ್ ನನ್ನು ಮದುವೆಯಾಗಬೇಕಿದ್ದ ಶುಭಾ, ಆಕೆಯ ಪ್ರಿಯತಮ ಅರುಣ್ ವರ್ಮಾ, ದಿನೇಶ್ ಮತ್ತು ವೆಂಕಟೇಶ್ ಗೆ ಕೆಳ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿ ಆದೇಶ ಹೊರಡಿಸಿತ್ತು. ಕರ್ನಾಟಕ ಹೈಕೋರ್ಟಿನಲ್ಲಿ ಶುಭಾ ಪರವಾಗಿ ಖ್ಯಾತ ಕ್ರಿಮಿನಲ್ ವಕೀಲ ಸಿವಿ ನಾಗೇಶ್ ಮೇಲ್ಮನವಿ ಸಲ್ಲಿಸಿ ಆಕೆಯ ಬಿಡುಗಡೆಗಾಗಿ ಹೋರಾಟ ನಡೆಸಿದ್ದರು.
ಭಾರತೀಯ ದಂಡ ಸಂಹಿತೆಯ ಸೆಕ್ಷನ್ 302 (ಕೊಲೆ) ಮತ್ತು ಸೆಕ್ಷನ್ 120ಬಿ (ಸಂಚು) ಅಡಿಯಲ್ಲಿ ಬರ್ಬರವಾಗಿ ಕೊಲೆ ಮಾಡಿದ್ದನ್ನು ಮತ್ತು ಸಂಚು ರೂಪಿಸಿದ್ದಕ್ಕೆ ಪ್ರತಿಯಾಗಿ ಕೆಳ ನ್ಯಾಯಲಯ ಶಿಕ್ಷೆ ನೀಡಿದ್ದನ್ನು ಕರ್ನಾಟಕ ಹೈಕೋರ್ಟ್ ಕಾಯಂ ಮಾಡಿದೆ. ವೆಂಕಟೇಶ್ ಎಂಬಾತನಿಗೆ ಜೀವಾವಧಿ ಬದಲಿಗೆ ಮರಣ ದಂಡನೆ ನೀಡಬೇಕೆಂದು ಆಗ್ರಹಿಸಿ ಸರಕಾರಿ ವಕೀಲರು ಕೋರ್ಟಿ ಮೇಲ್ಮನವಿ ಸಲ್ಲಿಸಿದ್ದರು.
2003ರ ನವೆಂಬರ್ 30ರಂದು ಗಿರೀಶ್ ಮತ್ತು ಶುಭಾ ನಡುವೆ ನಿಶ್ಚಿತಾರ್ಥ ನಡೆದಿತ್ತು. ಆದರೆ, ಅರುಣ್ ವರ್ಮಾ ಎಂಬಾತನನ್ನು ಪ್ರೀತಿಸುತ್ತಿದ್ದ ಶುಭಾ ತನ್ನ ಪ್ರೀತಿ ಉಳಿಸಿಕೊಳ್ಳಬೇಕೆಂದು ಸಂಚು ಹೂಡಿ ಇನ್ನಿಬ್ಬರ ಸಹಾಯದಿಂದ ರಿಂಗ್ ರಸ್ತೆಯಲ್ಲಿ ಡಿಸೆಂಬರ್ 3ರಂದು ಹತ್ಯೆ ಮಾಡಿಸಿದ್ದಳು. ಹತ್ಯೆಯ ನಂತರ ಯಾರೋ ಕೊಲೆ ಮಾಡಿದ್ದಾರೆ ಎಂಬಂತೆ ವರ್ತಿಸಿದ್ದಳು. ಆದರೆ, ಆಕೆ ಪ್ರಿಯತಮನಿಗೆ ಮಾಡಿದ್ದ ಫೋನ್ ಮತ್ತು ಎಸ್ಎಮ್ಎಸ್ ಗಳ ಸಹಾಯದಿಂದ ಆಕೆಯನ್ನು ಪೊಲೀಸರು ಬಲೆಗೆ ಬೀಳಿಸಿದ್ದರು.
ಇಂಗ್ಲಿಷ್ ಲಿಪಿಯಲ್ಲಿ ಕನ್ನಡ ಎಸ್ಎಮ್ಎಸ್ | ದಟ್ಸ್ ಕನ್ನಡ ಫ್ಯಾನ್ ಕ್ಲಬ್ ಸೇರಿರಿ | ಮೊಬೈಲಲ್ಲಿ ಕನ್ನಡ ಸುದ್ದಿ ಓದಿರಿ | ಹೂವಿನಂಗಡಿ 24/7
-
Gold Rate: ಆಭರಣ ಪ್ರಿಯರ ಗಮನಕ್ಕೆ; ಮಾರುಕಟ್ಟೆಯಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ ಗೊತ್ತಾ? ಇಲ್ಲಿದೆ ಮಾಹಿತಿ -
ಮಕ್ಕಳನ್ನ ಫ್ಯಾಕ್ಟರಿಯಂತೆ ಹೆರುತ್ತಾರೆ, ಪೋಷಿಸುವ ತಾಕತ್ತಿದ್ರೆ ಮಾತ್ರ ಮಕ್ಕಳು ಮಾಡ್ಕೊಳ್ಳಿ: ನಟಿ ವರಲಕ್ಷ್ಮಿ ಶರತ್ಕುಮಾರ್ -
Viral Video: ಶಾಲಾ ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿಯರ ಟವಲ್ ಡ್ಯಾನ್ಸ್: ಚರ್ಚೆ ಹುಟ್ಟುಹಾಕಿದ ವೈರಲ್ ವಿಡಿಯೋ -
Viral Video: ಪೋಷಕರಿಗೆ ಹೊಸ ಕಾರು ಗಿಫ್ಟ್ ಮಾಡಿದ ಹೆಣ್ಣುಮಕ್ಕಳು, ನೆಟ್ಟಿಗರ ಹೃದಯ ಗೆದ್ದ ಈ ವಿಡಿಯೋ -
Anushka Shetty Marriage: ಬೆಂಗಳೂರಿನ ಖ್ಯಾತ ಉದ್ಯಮಿ ಜೊತೆ ನಟಿ ಅನುಷ್ಕಾ ಶೆಟ್ಟಿ ಮದುವೆ, ಈ ವರ್ಷದಲ್ಲೇ ಮುಹೂರ್ತ: ವರದಿ -
1 ರೂಪಾಯಿಗೆ 1 ಲೀಟರ್ ಹಾಲು: ಫ್ಲಿಪ್ಕಾರ್ಟ್ ವಿರುದ್ಧ ಸಿಡಿದೆದ್ದ ಡಿ.ಕೆ. ಸುರೇಶ್; ಪ್ರಧಾನಿ ಮೋದಿಗೆ ದೂರು -
ಬಿಜೆಪಿಯಿಂದ ನಟ ವಿಜಯ್ಗೆ ಡಿಸಿಎಂ ಹುದ್ದೆ, 80 ಸೀಟುಗಳ ಆಫರ್; ತಮಿಳುನಾಡು ಚುನಾವಣೆಗೆ ಹೊಸ ಮೈತ್ರಿ ಲೆಕ್ಕಾಚಾರ -
Karnataka Weather: ಸಿಲಿಕಾನ್ ಸಿಟಿಯಲ್ಲಿ ಹೆಚ್ಚಿದ ತಾಪಮಾನ; ಕರಾವಳಿ, ಮಲೆನಾಡಿನಲ್ಲಿ ಇಂದು ಮಳೆಯಾಗುವ ಸಾಧ್ಯತೆ -
LPG New Rule: ಎಲ್ಪಿಜಿ ಹೊಸ ನಿಯಮ: ಪಿಎನ್ಜಿ ಸಂಪರ್ಕ ಇದ್ದರೆ ಇನ್ನು ಮುಂದೆ ಸಿಲಿಂಡರ್ ಸಿಗಲ್ಲ -
Government Employees: ಪಶ್ಚಿಮ ಬಂಗಾಳ ಸರ್ಕಾರಿ ನೌಕರರಿಗೆ ಸಿಎಂ ಮಮತಾ ಬ್ಯಾನರ್ಜಿ ಬಂಪರ್ ಕೊಡುಗೆ -
ರಾಜ್ಯದಲ್ಲಿ ಕಮರ್ಷಿಯಲ್ ಉದ್ದೇಶಕ್ಕೆ ಗೃಹಬಳಕೆ LPG ಸಿಲಿಂಡರ್ ಬಳಸಿದವರ ಮೇಲೆ ಅಧಿಕಾರಿಗಳ ಖಡಕ್ ದಾಳಿ -
ಬೆಂಗಳೂರು 2ನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ vs ಹೊಸೂರು ಏರ್ಪೋರ್ಟ್: ಯೋಜನೆ ಯಾವ ಹಂತದಲ್ಲಿದೆ












Click it and Unblock the Notifications