ಭಾರೀ ಮಳೆಗೆ ದಾವಣಗೆರೆ ಜಿಲ್ಲೆ ಜನತೆ ತತ್ತರ

ಮಂಗಳವಾರ ಸುರಿದ ಮಳೆ ಸಾಕಷ್ಟು ಹಾನಿ ಉಂಟುಮಾಡಿತ್ತು. ಬುಧವಾರ ರಾತ್ರಿ ಕೂಡ ಬಿದ್ದ ಭಾರೀ ಮಳೆಗೆ ದಾವಣಗೆರೆಯಲ್ಲಿ 60ಕ್ಕೂ ಹೆಚ್ಚಿನ ಮನೆಗಳು ಕುಸಿದು ನೆಲಸಮವಾಗಿವೆ. ಕೆರೆಕಟ್ಟೆಗಳು ಒಡೆದ ಕಾರಣ ಸಾವಿರಾರು ಎಕರೆ ಬೆಳೆ ಮಳೆಯಲ್ಲಿ ಕೊಚ್ಚಿಹೋಗಿದೆ. ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆಯಲ್ಲಿ ಮನೆ ಕುಸಿದು ಜಯಮ್ಮ ಎಂಬ ಮಹಿಳೆ ಮೃತರಾಗಿದ್ದಾರೆ. ನಿನ್ನೆ ಇದೇ ಜಿಲ್ಲೆಯಲ್ಲಿ ಒಂದೇ ಕುಟುಂಬದ ಮೂವರು ಮೃತ್ಯುವಿಗೀಡಾಗಿದ್ದರು.
ದಾವಣಗೆರೆಯ ಚನ್ನಗಿರಿ, ಹರಪನಹಳ್ಳಿ ಮುಂತಾದ ಪ್ರದೇಶದಲ್ಲಿ ಹೆಚ್ಚಿನ ಹಾನಿ ಸಂಭವಿಸಿದೆ. ಸುಮಾರು 6 ಸೆಂ.ಮೀ. ಮಳೆ ಸುರಿದ ಕಾರಣ ಎಲ್ಲೆಡೆ ನೀರು ಆವರಿಸಿಕೊಂಡಿದ್ದು ಜನ ಮನೆಮಠ ಕಳೆದುಕೊಂಡಿರುವುದು ಮಾತ್ರವಲ್ಲ ರೋಗರುಜಿನಗಳಿಗೆ ತುತ್ತಾಗುವ ಅಪಾಯ ಎದುರಿಸುತ್ತಿದ್ದಾರೆ.
ಚನ್ನಗಿರಿಯಲ್ಲಿ 18, ಹರಪನಹಳ್ಳಿಯಲ್ಲಿ 32 ಮತ್ತು ಹರಿಹರದಲ್ಲಿ 12 ಮನೆಗಳು ಸಂಪೂರ್ಣವಾಗಿ ನೆಲಕಚ್ಚಿವೆ. ಚನ್ನಗಿರಿ ತಾಲೂಕಿನಲ್ಲಿರುವ ಸೂಳೆಕೆರೆ (ಶಾಂತಿಸಾಗರ) ಕೋಡಿಹರಿದಿದ್ದರಿಂದ ಸುತ್ತಮುತ್ತಲಿನ ಬೆಳೆಗಳು ನಾಶವಾಗಿವೆ. ಕಟಾವಿನ ನಿರೀಕ್ಷೆಯಲ್ಲಿದ್ದ ರೈತರು ಕಂಗಾಲಾಗಿದ್ದಾರೆ.
ಜಿಲ್ಲಾಡಳಿತ ಕೂಡ ಸಂತ್ರಸ್ತರಿಗೆ ನೆಲೆ ಒದಗಿಸಲು ಮತ್ತು ಆಹಾರ ಒದಗಿಸಲು ಕಾರ್ಯನಿರತವಾಗಿದೆ. ಅನೇಕ ಪ್ರದೇಶಗಳಲ್ಲಿ ಗಂಜಿ ಕೇಂದ್ರಗಳನ್ನು ತೆರೆಯಲಾಗಿದ್ದು, ಶಾಲೆಗಳಲ್ಲಿ ಮನೆ ಕಳೆದುಕೊಂಡವರಿಗೆ ಆಶ್ರಯ ನೀಡಲಾಗಿದೆ. ಕಳೆದ ವರ್ಷ ಉತ್ತರ ಕರ್ನಾಟಕದಲ್ಲಿ ಸಂಭವಿಸಿದ ಜಲಪ್ರಳಯದ ರೀತಿಯಲ್ಲಿ ಈ ಜಿಲ್ಲೆಯಲ್ಲಿಯೂ ಅತಿವೃಷ್ಟಿ ಸಂಭವಿಸಿದೆ. ಇಡೀ ಕನ್ನಡ ನಾಡಿಗೆ ನಾಡೇ ದೀಪಾವಳಿಯ ಸಂಭ್ರಮದಲ್ಲಿದ್ದರೆ ದಾವಣಗೆರೆ ಜಿಲ್ಲೆಯ ಜನ ಮಾತ್ರ ಸಹಾಯಹಸ್ತ ಚಾಚಿ ನಿಂತಿದ್ದಾರೆ.
-
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Bengaluru Property Tax: ಆಸ್ತಿ ತೆರಿಗೆ ಸ್ವೀಕಾರಕ್ಕಾಗಿ ರಾತ್ರಿ 10ಗಂಟೆವರೆಗೆ ಪಾಲಿಕೆ ಕಚೇರಿ ಓಪನ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಮಾರ್ಚ್ 30ರ ದರಪಟ್ಟಿ -
Hardik Pandya: ಕೇವಲ 35 ದಿನಗಳಲ್ಲಿ ಕೋಟಿ.. ಕೋಟಿ ಖರ್ಚು ಮಾಡಿದ ಹಾರ್ದಿಕ್ ಪಾಂಡ್ಯ; ಇಲ್ಲಿದೆ ಪಟ್ಟಿ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ












Click it and Unblock the Notifications