ತ್ವರಿತ ಅಲರ್ಟ್ ಗಳಿಗಾಗಿ
For Daily Alerts
ರೆಡ್ಡಿಗಳೇನು ಇಂಟರ್ ನ್ಯಾಷನಲ್ ಲೀಡರ್ಸಾ?
ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ವಿವಿಧ ಕಾಮಗಾರಿಗಳಿಗೆ ಶಂಕು ಸ್ಥಾಪನೆ ನೆರವೇರಿಸಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ, ಈಶ್ವರಪ್ಪ ಮಾಧ್ಯಮದವರು ಜವಾಬ್ದಾರಿಯುತ ಪ್ರಶ್ನೆ ಕೇಳಬೇಕು. ಅದು ಬಿಟ್ಟು ಬರೀ ರೆಡ್ಡಿಗಳ ಬಗ್ಗೆ ಪ್ರಶ್ನೆ ಕೇಳುವುದು ತಪ್ಪು. ಸದ್ಯವೇ ಸಚಿವ ಸಂಪುಟ ವಿಸ್ತರಣೆಯಾಗಲಿದೆ. ಅದಕ್ಕೂ ಮುನ್ನ ರಾಷ್ಟ್ರೀಯ ಮುಖಂಡರೊಂದಿಗೆ ಚರ್ಚಿಸಲಾಗುವುದು ಎಂದು ಮಾತನ್ನು ಬೇರೆ ಕಡೆ ಹೊರಳಿಸಿದರು.
ಎಷ್ಟು ಜನರನ್ನು ಸಂಪುಟಕ್ಕೆ ತೆಗೆದುಕೊಳ್ಳ ಬೇಕೆಂದು ಇನ್ನೂ ತೀರ್ಮಾನವಾಗಿಲ್ಲ. ಎಲ್ಲರೊಂದಿಗೆ ಚರ್ಚಿಸಿ ಒಮ್ಮತದ ನಿರ್ಧಾರ ತೆಗೆದು ಕೊಳ್ಳಲಾಗುವುದು. ಸರಕಾರವನ್ನು ಅಸ್ಥಿರಗೊಳಿಸಲು ಜೆಡಿಎಸ್ ಮತ್ತು ಕಾಂಗ್ರೆಸ್ ಮುಖಂಡರು ಇನ್ನಿಲ್ಲದ ಪ್ರಯತ್ನ ನಡೆಸುತ್ತಿದ್ದಾರೆ. ಇದಕ್ಕೆ ಅಕ್ರಮ ಗಣಿಗಾರಿಕೆ ಹಣ ಬಳಸುತ್ತಿದ್ದಾರೆ. ಏನೇ ಕುತಂತ್ರ ಮಾಡಿದರೂ ಸರಕಾರ ಉರುಳಿಸಲು ಅವರಿಂದ ಸಾಧ್ಯವಿಲ್ಲ ಎಂದರು.
Comments
ಕೆಎಸ್ ಈಶ್ವರಪ್ಪ ರೆಡ್ಡಿ ಸಹೋದರರು ಶಿವಮೊಗ್ಗ ಭಿನ್ನಮತ ಜೆಡಿಎಸ್ ಕಾಂಗ್ರೆಸ್ ks eshwarappa reddy brothers cabinet expansion
Story first published: Friday, November 5, 2010, 14:21 [IST]