ಮಳವಳ್ಳಿಯಲ್ಲಿ ಭಾಗ್ಯಲಕ್ಷ್ಮಿಗಳಿಗೆ ಜೆಡಿಎಸ್ ತಡೆ

15 ಸಾವಿರ ಜನರ ನಿರೀಕ್ಷೆ: ಮಂಡ್ಯ ಜಿಲ್ಲೆಯಲ್ಲಿ ಭಾಗ್ಯಲಕ್ಷ್ಮಿ ಯೋಜನೆಯ 39 ಸಾವಿರ ಫಲಾನುಭವಿಗಳಿದ್ದು, ಆ ಪೈಕಿ ನಾಳಿನ ಕಾರ್ಯಕ್ರಮದಲ್ಲಿ 15 ಸಾವಿರ ಫಲಾನುಭವಿಗಳಿಗೆ ಸೀರೆ ವಿತರಿಸುವ ಸಾಧ್ಯತೆಯಿದೆ. ಉಳಿದವರಿಗೆ ಅಂಗನವಾಡಿ ಕೇಂದ್ರಗಳ ಮೂಲಕ ತಲುಪಿಸಲಾಗುವುದು ಎಂದು ಜಿಲ್ಲಾಧಿಕಾರಿ ಡಾ.ಪಿ.ಸಿ.ಜಾರ್ ಹೇಳಿದ್ದಾರೆ.
ಆರೋಗ್ಯ ಶಿಬಿರ: ಸಮಾವೇಶದ ವೇಳೆ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನೂ ಏರ್ಪಡಿಸಲಾಗಿದ್ದು, ತಾಯಂದಿರಿಗೆ ಊಟ ಹಾಗೂ ಮಕ್ಕಳಿಗೆ ಹಾಲಿನ ಸೌಲಭ್ಯವನ್ನು ಕಲ್ಪಿಸಲಾಗಿದೆ. ತಾಯಂದಿರನ್ನು ಕರೆತರಲು 200 ಬಸ್ಸುಗಳ ವ್ಯವಸ್ಥೆ ಮಾಡಲಾಗಿದೆ ಎಂದು ಅವರು ತಿಳಿಸಿದರು. ಜ್ಯಾತ್ಯಾತೀತ ಜನತಾದಳ ಕಾರ್ಯಕರ್ತರು ಸಮಾವೇಶ ಸುಗಮವಾಗಿ ನಡೆಯಲು ಸಹಕರಿಸಬೇಕೆಂದು ಮನವಿ ಮಾಡಿರುವ ಜಾರ್, ಜಿಲ್ಲೆ ಪ್ರತಿನಿಧಿಸುವ ಎಲ್ಲ್ಲ ಸಚಿವರು, ಸಂಸದರು, ಶಾಸಕರು ಹಾಗೂ ಇತರ ಜನಪ್ರತಿನಿಧಿಗಳಿಗೆ ಆಹ್ವಾನ ನೀಡಿದ್ದಾರೆ.
ಬಿಗಿ ಬಂದೋಬಸ್ತ್: ಶಾಂತಿ ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ತಾಯಂದಿರನ್ನು ಕರೆತರುವ ಪ್ರತಿ ಬಸ್ಸಿಗೆ ಇಬ್ಬರು ಹೆಡ್ಕಾನ್ ಸ್ಟೇಬಲ್ಗಳನ್ನು ನೇಮಿಸಲಾಗಿದೆ. 25 ಮೊಬೈಲ್ ವ್ಯಾನ್ಗಳಲ್ಲಿ ಗಸ್ತು ಪೊಲೀಸರನ್ನು ನಿಯೋಜಿಸಲಾಗಿದೆ ಎಂದು ಎಸ್ಪಿ ಕೌಶಲೇಂದ್ರಕುವಾರ್ ಹೇಳಿದರು.
2000 ಪೊಲೀಸರು, 28 ಡಿಎಆರ್, 20 ಕೆಎಸ್ಆರ್ಪಿ ತುಕಡಿ, 600 ಹೆಡ್ಕಾನ್ಸ್ಟೇ ಬಲ್, 15 ಸಿ.ಪಿ.ಐ, 50 ಪಿಎಸ್ಸೈಗಳನ್ನು ನಿಯೋ ಜಿಸಲಾಗಿದೆ. ಅಗತ್ಯಬಿದ್ದರೆ ನೆರೆ ಜಿಲ್ಲೆಗಳಿಂದ ಹೆಚ್ಚುವರಿ ಪೊಲೀಸರನ್ನು ಕರೆಸಿ ಕೊಳ್ಳಲಾಗುವುದು ಎಂದು ಅವರು ತಿಳಿಸಿದರು.
ಜಿಲ್ಲೆಯಾದ್ಯಂತ ನಿಷೇಧಾಜ್ಞೆ: ಭಾಗ್ಯಲಕ್ಷ್ಮಿತಾಯಂದಿರ ಸಮಾವೇಶದಲ್ಲಿ ಸೀರೆ ವಿತರಣೆ ವಿರೋಧಿಸಿ ಜೆಡಿಎಸ್ ಜಿಲ್ಲೆಯಾದ್ಯಂತ ರಸ್ತೆ ತಡೆ ನಡೆಸುವ ಬೆದರಿಕೆಯನ್ನು ಹಾಕಿರುವ ಹಿನ್ನೆಲೆಯಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ನ.7ರಂದು ಮಧ್ಯರಾತ್ರಿಯಿಂದ ನ.8ರಂದು ಮಧ್ಯ ರಾತ್ರಿವರೆಗೆ ಜಿಲ್ಲಾದ್ಯಂತ ರಸ್ತೆ ತಡೆಯಂತಹ ಪ್ರತಿಭಟನೆಗಳನ್ನು ನಿಷೇಧಿಸಿ ಭಾರತೀಯ ದಂಡ ಸಂಹಿತೆ ಕಲಂ 144ರನ್ವಯ ನಿಷೇಧಾಜ್ಞೆಯನ್ನು ಜಾರಿಗೊಳಿಸಿ ಜಿಲ್ಲಾಧಿಕಾರಿ ಡಾ.ಪಿ.ಸಿ.ಜಾಫರ್ ಆದೇಶ ಹೊರಡಿಸಿದ್ದಾರೆ.
ಸಂಚಾರ ವ್ಯವಸ್ಥೆ: ದ್ವಿಮುಖ ಸಂಚಾರ ಭಾಗ್ಯಲಕ್ಷ್ಮಿಯೋಜನೆಯಡಿ ಆರೋಗ್ಯ ತಪಾಸಣೆ ಮತ್ತು ಸೀರೆ ವಿತರಣೆ ಸಮಾರಂಭಕ್ಕೆ ಮುಖ್ಯಮಂತ್ರಿಗಳು ಹಾಗೂ ಸಚಿವರುಗಳು ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರ ಹಿತದೃಷ್ಟಿಯಿಂದ ನಗರದ ಸಂಜಯ ಚಿತ್ರಮಂದಿರದಿಂದ ಡಿಡಿಪಿಐ ಕಚೇರಿವರೆಗೆ ಆರ್.ಪಿ. ರಸ್ತೆ ಮತ್ತು ವಿನೋಭ ರಸ್ತೆಯಲ್ಲಿನ ಏಕಮುಖ ಸಂಚಾರ ವ್ಯವಸ್ಥೆಯನ್ನು ನ.7ರಿಂದ 8ರ ಸಂಜೆ 6 ಗಂಟೆಯವರೆಗೆ ಮಾತ್ರ ದ್ವಿಮುಖ ಸಂಚಾರಕ್ಕೆ ಉಪಯೋಗಿಸಿಕೊಳ್ಳಲು ಅನುವು ಮಾಡಿಕೊಡಲಾಗಿದ್ದು, ನ.8ರಂದು ಸಂಜೆ 6 ಗಂಟೆಯ ನಂತರ ಏಕಮುಖ ಸಂಚಾರ ವ್ಯವಸ್ಥೆ ಮುಂದು ವರಿಯುತ್ತದೆ ಎಂದು ಜಾಫರ್ ಹೇಳಿದರು.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications