ಯುಪಿಎಯ ಹಿಂದೂ ವಿರೋಧಿ ನೀತಿ ಖಂಡಿಸಿ ಪ್ರತಿಭಟನೆ

ನಕ್ಸಲರು, ಗಿಲಾನಿ, ಆರುಂಧತಿರಾಯ್ ಅವರಂತಹ ರಾಷ್ಟ್ರ ವಿರೋಧಿಗಳ ವಿರುದ್ದ ಅಸಹಾಯಕ ವರ್ತನೆ ತೋರುತ್ತಿರುವ ಕೇಂದ್ರ ಸರಕಾರ ಆರ್ಎಸ್ಎಸ್ ನಂತಹ ದೇಶಭಕ್ತ ಸಂಘಟನೆಗೆ ಕಿರುಕುಳ ನೀಡುತ್ತಿದೆ. ಹಿಂದುತ್ವ ಮತ್ತು ಹಿಂದೂ ಸಂಘಟನೆಗಳ ಬಗ್ಗೆ ದುರುದ್ದೇಶಪೂರಿತ ಅಪಪ್ರಚಾರವನ್ನು ಖಂಡಿಸಿ ಇದೆ ತಿಂಗಳು 10ರಂದು ದೇಶಾದ್ಯಂತ ಎಲ್ಲಾ ರಾಜ್ಯದ ರಾಜಧಾನಿ ಹಾಗೂ ಜಿಲ್ಲಾ ಕೇಂದ್ರಗಳಲ್ಲಿ ಧರಣಿ ನಡೆಸಲು ರಾಷ್ಟ್ರೀಯ ಸ್ವಯಂ ಸೇವಕ ಸಂಘ ನಿರ್ಧರಿಸಿದೆ.
ಕೇಂದ್ರದ ಅಪಪ್ರಚಾರ ಖಂಡಿಸಿ ಅಂದು ರಾಷ್ಟ್ರವ್ಯಾಪಿ ಎರಡು ತಾಸುಗಳ ಕಾಲ ಧರಣಿ ನಡೆಯಲಿದ್ದು, ಸಂಘಟನೆಯ ಆಯಾ ಭಾಗದ ಪ್ರಮುಖರು ಧರಣಿಯಲ್ಲಿ ಪಾಲ್ಗೊಳ್ಳುತ್ತಾರೆ. ಇತ್ತೀಚಿಗೆ ಸಂಘಟನೆಯ ಕಾರ್ಯಕಾರಿ ಮಂಡಳಿ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ. ಕೇಂದ್ರ ಸರಕಾರದ ಮೂಗಿನ ನೇರಕ್ಕೆ ಭಯೋತ್ಪಾದನೆ ನಡೆಯುತ್ತಿದ್ದರೂ, ಮತ ಬ್ಯಾಂಕ್ ಉಳಿಸಿಕೊಳ್ಳುವ ಉದ್ದೇಶದಿಂದ ಅಲ್ಪಸಂಖ್ಯಾತರನ್ನು ಓಲೈಸಲು ದೇಶಪ್ರೇಮಿ ಸಂಘಟನೆ ಬಗ್ಗೆ ಅಪಪ್ರಚಾರಕ್ಕೆ ಕೇಂದ್ರ ಕೈಹಾಕಿರುವುದು ಖಂಡನೀಯ ಎಂದು ಸಂಘಟನೆಯ ಕಾರ್ಯಕಾರಿಣಿ ಸದಸ್ಯ ರಾಮ್ ಮಾದವ್ ಹೇಳಿಕೆ ನೀಡಿದ್ದಾರೆ.
ಹಿಂದೂ ಭಯೋತ್ಪಾದನೆ ಎನ್ನುವುದು ಇದ್ದರೆ ದಾಖಲೆ ಸಮೇತ ಕಾಂಗ್ರೆಸ್ ಅದನ್ನು ಬಹಿರಂಗ ಪಡಿಸಲಿ. ಸಂಘಟನೆ ದೇಶದ ಒಳಿತು ಮತ್ತು ಒಗ್ಗಟ್ಟಿಗೆ ದುಡಿಯುತಿದ್ದು, ಭಯೋತ್ಪಾದನೆ ಮುಕ್ತ ಭಾರತದ ಆಶಯ ಹೊಂದಿದೆ. ಸಂಘಟನೆಯ ಅಂತಃ ಶಕ್ತಿಯನ್ನು ಕುಗ್ಗಿಸುವ ಕೆಲಸಕ್ಕೆ ಕಾಂಗ್ರೆಸ್ ಕೈಹಾಕುತ್ತಿದೆ. ಅಯೋಧ್ಯೆಯಲ್ಲಿ ಮಂದಿರ ನಿರ್ಮಾಣಕ್ಕೆ ಮುಸಲ್ಮಾನರು ಸೇರಿದಂತೆ ಎಲ್ಲಾ ಜನತೆಯ ಸಹಕಾರ ಮತ್ತು ಬೆಂಬಲವನ್ನು ಅಪೇಕ್ಷಿಸಿ ಡಿಸೆಂಬರ್ ನಲ್ಲಿ ದೇಶಾದ್ಯಂತ ಆರ್ಎಸ್ಎಸ್ ದೊಡ್ಡ ಪ್ರಮಾಣದಲ್ಲಿ ಕಾರ್ಯಕ್ರಮ ನಡೆಸಲಿದೆ ಎಂದು ರಾಮ್ ಮಾಧವ ತಿಳಿಸಿದ್ದಾರೆ.
-
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ -
Kannada: ಕರ್ನಾಟಕದಲ್ಲಿರುವ ಬ್ಯಾಂಕ್ಗಳಲ್ಲಿ ಸ್ಪಷ್ಟ ಕನ್ನಡ; ತುಳು, ಕೊಂಕಣಿ ಭಾಷೆಯ ಕಲರವ ಈಗ ಉಳಿದಿಲ್ಲ: ಕವಿರಾಜ್












Click it and Unblock the Notifications