ಕಲ್ಮಾಡಿಗೂ ಗೇಟ್ ಪಾಸ್ ನೀಡಿದ ಕಾಂಗ್ರೆಸ್

ಕಾಮನ್ವೆಲ್ತ್ ಕ್ರೀಡಾಕೂಟದಲ್ಲಿ ಕೋಟ್ಯಂತರ ರುಪಾಯಿ ಹಗರಣದ ಆರೋಪ ಎದುರಿಸುತ್ತಿರುವ ಕಲ್ಮಾಡಿ ಅವರ ತಲೆದಂಡಕ್ಕೆ ಬಿಜೆಪಿ ಪಟ್ಟು ಹಿಡಿದಿತ್ತು. ಇದರಿಂದ ಚಳಿಗಾಲದ ಅಧಿವೇಶನ ಆರಂಭವಾಗುತ್ತಿದ್ದಂತೆ ಚವ್ಹಾಣ್ ಮತ್ತು ಕಲ್ಮಾಡಿ ಅವರನ್ನು ವಜಾಗೊಳಿಸಿ ಪ್ರತಿಪಕ್ಷಗಳನ್ನು ತಣ್ಣಗಾಗಿಸಲು ಕಾಂಗ್ರೆಸ್ ಸೂಕ್ತ ಕ್ರಮ ಕೈಗೊಂಡಿದೆ.
ಈ ಇಬ್ಬರನ್ನು ವಜಾಗೊಳಿಸುವ ಮೂಲಕ ಕಾಂಗ್ರೆಸ್ ಭ್ರಷ್ಟಾಚಾರವನ್ನು ಒಪ್ಪಿಕೊಂಡಂತಾಗಿದೆ ಎಂದು ಬಿಜೆಪಿ ಅಧ್ಯಕ್ಷ ನಿತಿನ್ ಗಡ್ಕರಿ ಹೇಳಿಕೆ ನೀಡಿದ್ದಾರೆ. 2ಜಿಹಗರಣದಲ್ಲಿ ಭಾಗಿಯಾಗಿರುವ ದೂರಸಂಪರ್ಕ ಖಾತೆ ಸಚಿವ 'ಸ್ಪೆಕ್ಟ್ರಂ' ರಾಜ ತಲೆದಂಡಕ್ಕೆ ಈಗ ಪ್ರತಿಪಕ್ಷಗಳು ಪಟ್ಟು ಹಿಡಿದಿವೆ.












Click it and Unblock the Notifications