ತ್ವರಿತ ಅಲರ್ಟ್ ಗಳಿಗಾಗಿ
For Daily Alerts
ನಾನು ಸಿಎಂ ಹುದ್ದೆ ಆಕಾಂಕ್ಷಿಯಲ್ಲ: ಶೆಟ್ಟರ್
ಬಂಡಾಯವೆದ್ದು ಅನರ್ಹಗೊಂಡಿರುವ ಭಿನ್ನರ ನೇತೃತ್ವ ವಹಿಸಿಕೊಂಡಿರುವ ಮಾಜಿ ಸಚಿವ ಬಾಲಚಂದ್ರ ಜಾರಕಿಹೊಳಿ, ತಾವು ಸುಪ್ರೀಂ ಕೋರ್ಟ್ನಲ್ಲಿ ಗೆದ್ದರೇ, ಶೆಟ್ಟರ್ ಸಿಎಂ ಎಂದು ಹೇಳಿಕೆ ನೀಡಿದ ಹಿನ್ನೆಲೆಯಲ್ಲಿ ಶೆಟ್ಟರ್ ಅವರು ಈ ರೀತಿ ಪ್ರತಿಕ್ರಿಯೆ ನೀಡಿದ್ದಾರೆ. ಅನರ್ಹ ಶಾಸಕರನ್ನು ನಾನು ಸಂಪರ್ಕಿಸಿಲ್ಲ. ಯಡಿಯೂರಪ್ಪ ಅವರ ನಾಯಕತ್ವದಲ್ಲಿ ನಮಗೆ ವಿಶ್ವಾಸವಿದೆ. ನಾಯಕತ್ವ ಬದಲಾವಣೆ ಪ್ರಶ್ನೆಯೇ ಇಲ್ಲ ಎಂದರು.
ಸಂಪುಟ ವಿಸ್ತರಣೆ ಹಾಗೂ ಸಚಿವ ಸ್ಥಾನಕ್ಕೆ ನಡೆದಿರುವ ಲಾಬಿಯ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಶೆಟ್ಟರ್, ಈ ಬಗ್ಗೆ ಯಡಿಯೂರಪ್ಪ ಹಾಗೂ ಪಕ್ಷದ ವರಿಷ್ಠರು ತೀರ್ಮಾನ ಕೈಗೊಳ್ಳುತ್ತಾರೆ. ಸಮರ್ಥರಿಗೆ ಸಂಪುಟದಲ್ಲಿ ಸ್ಥಾನ ಸಿಕ್ಕೇ ಸಿಗುತ್ತದೆ. ಉಪ ಮುಖ್ಯಮಂತ್ರಿ ಹುದ್ದೆ ಸೃಷ್ಟಿಗಾಗಿ ಸಿಎಂ ಮೇಲೆ ಒತ್ತಡ ಹೇರಿಲ್ಲ ಎಂದರು.
Comments
ಬಾಲಚಂದ್ರ ಜಾರಕಿಹೊಳಿ ಭಾಗ್ಯಲಕ್ಷ್ಮಿ ಯೋಜನೆ ಜಗದೀಶ್ ಶೆಟ್ಟರ್ ಮುಖ್ಯಮಂತ್ರಿ ಬೆಳಗಾವಿ ಯಡಿಯೂರಪ್ಪ ಬಿಜೆಪಿ chief minister bhagyalakshmi scheme yediyurappa balachandra jarkiholi
Story first published: Tuesday, November 9, 2010, 12:51 [IST]