ಬಿಜೆಪಿ ಅಧಿಕಾರ ಅವಧಿ ಶೋಕಾಚರಣೆಗೆ ಮೀಸಲು

ಮುಂಬರುವ ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ ಚುನಾವಣೆಗಳ ಮೀಸಲಾತಿ ಪಟ್ಟಿಯಲ್ಲಿ ಅಕ್ರಮ ಎಸಗಿದರೆ ರಾಜ್ಯ ಸರ್ಕಾರದ ವಿರುದ್ಧ ನ್ಯಾಯಾಲಯದಲ್ಲಿ ಹೋರಾಟ ನಡೆಸಲಾಗುವುದು ಎಂದು ವಿಧಾನ ಪರಿಷತ್ನ ವಿರೋಧ ಪಕ್ಷದ ನಾಯಕಿ ಮೋಟಮ್ಮ ಗುಡುಗಿದ್ದಾರೆ.
ಸೋಮವಾರ ಹಾಸನಾಂಬೆ ದೇವಿಯ ದರ್ಶನ ಪಡೆದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಮ್ಮ ಪಕ್ಷದ ಚೇಲಾಗಳನ್ನು ಗೆಲ್ಲಿಸಿಕೊಳ್ಳಲು ಮೀಸಲಾತಿ ಪಟ್ಟಿಯಲ್ಲಿ ಅಕ್ರಮ ಎಸಗುವ ಸಾಧ್ಯತೆಗಳಿವೆ. ಇದನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದೇನೆ. ಇದರ ವಿರುದ್ಧ ನ್ಯಾಯಾಲಯದ ಮೊರೆ ಹೋಗುವುದು ಅನಿವಾರ್ಯವಾಗಲಿದೆ ಎಂದು ಹೇಳಿದರು.
ಭಾಗ್ಯಲಕ್ಷ್ಮೀ ಯೋಜನೆಯ ಫಲಾನುಭವಿಗಳ ತಾಯಂದಿರಿಗೆ ಸೀರೆ ವಿತರಿಸುವ ಕಾರ್ಯಕ್ರಮದ ವಿರುದ್ಧ ತಮ್ಮ ಅಸಮಾಧಾನ ವ್ಯಕ್ತಪಡಿಸಿದ ಅವರು, ಯೋಜನೆಯನ್ನು ಪ್ರಾರಂಭಿಸಿದಾಗಲೇ ಸೀರೆ ವಿತರಿಸುತ್ತೇವೆಂದು ಪ್ರಕಟಿಸಬಹುದಿತ್ತು. ಇದೆಲ್ಲಾ ಜಿಲ್ಲಾ ಪಂಚಾಯಿತಿ ಚುನಾವಣೆಗಾಗಿ ಮಾಡಿರುವ ಗಿಮಿಕ್ ಎಂದು ವ್ಯಂಗ್ಯವಾಡಿದರು.
ಮಾಟ, ಮಂತ್ರ, ಕುತಂತ್ರ: ಭಿನ್ನಮತವನ್ನು ತಗ್ಗಿಸಲು ಸಚಿವ ಸಂಪುಟ ವಿಸ್ತರಣೆ ಮಾಡುತ್ತೇನೆ ಎಂಬ ಕುಂಟು ನೆಪವೊಡ್ಡಿ, ರಾಜ್ಯದ ಜನತೆಯನ್ನು ಯಡಿಯೂರಪ್ಪ ದಿಕ್ಕು ತಪ್ಪಿಸುತ್ತಿದ್ದಾರೆ. ಕಾಂಗ್ರೆಸ್ನ ನಾಯಕರುಗಳು ಮಾಟ, ಮಂತ್ರ ಮಾಡಿಸಿದ್ದಾರೆಂಬ ಮುಖ್ಯಮಂತ್ರಿಯ ಆರೋಪಕ್ಕೆ ಉತ್ತರಿಸಿದ ಅವರು, ನಾನು ದೇವರನ್ನು ನಂಬುತ್ತೇನೆ. ಅದನ್ನು ಹೊರತುಪಡಿಸಿ ನನಗೇನೂ ತಿಳಿದಿಲ್ಲ. ಪಕ್ಷದ ಮುಖಂಡರಾದ ಸಿದ್ದರಾಮಯ್ಯ ಅವರು ದೇವರನ್ನೇ ನಂಬುವುದಿಲ್ಲ. ಮಠ-ಮಾನ್ಯಗಳಿಗೂ ಹೋಗುವುದಿಲ್ಲ ಎಂದ ಮೇಲೆ ಮಾಟ-ಮಂತ್ರ ಮಾಡಿಸಲು ಪುರುಸೊತ್ತು ಎಲ್ಲಿದೆ ಪ್ರಶ್ನಿಸಿದರು.
ಚಿಕ್ಕಮಗಳೂರು ಜಿಲ್ಲೆಗೆ ಪ್ರಾತಿನಿಧ್ಯ: ಸಚಿವ ಸಂಪುಟದಲ್ಲಿ ಚಿಕ್ಕಮಗಳೂರು ಜಿಲ್ಲೆಗೆ ಪ್ರಾತಿನಿಧ್ಯ ನೀಡಿ ಎಂದು ಮುಖ್ಯಮಂತ್ರಿಗಳಲ್ಲಿ ಬೇಡಿಕೆಯಿಟ್ಟ ಅವರು, ಮೂಡಿಗೆರೆ ಕ್ಷೇತ್ರದ ಕುಮಾರಸ್ವಾಮಿ ಅವರನ್ನು ಸಚಿವರನ್ನಾಗಿ ಮಾಡಿದರೆ ನನ್ನ ದೇನೂ ಅಭ್ಯಂತರವಿಲ್ಲ ಎಂದು ಹೇಳಿದರು.
ಮೀಸಲಾತಿ ಪಟ್ಟಿ ಪ್ರಕಟ: ಈ ನಡುವೆ ರಾಜ್ಯದ 31 ಜಿಲ್ಲೆಗಳ 1013 ಕ್ಷೇತ್ರಗಳಿಗೆ ಸಂಬಂಧಿಸಿದಂತೆ ಕ್ಷೇತ್ರವಾರು ಮೀಸಲಾತಿ ಪಟ್ಟಿಯನ್ನು ರಾಜ್ಯ ಚುನಾವಣಾ ಆಯೋಗ ಇಂದು ಪ್ರಕಟಿಸಿದೆ. ಮಹಿಳೆಯರಿಗೆ ಶೇ.53, ಪರಿಶಿಷ್ಟ ವರ್ಗಕ್ಕೆ ಶೇ.18 ಹಾಗೂ ಪರಿಶಿಷ್ಟ ಪಂಗಡಕ್ಕೆ ಶೇ.5 ರಷ್ಟು ಎಂದು ನಿಗದಿ ಮಾಡಲಾಗದೆ.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ












Click it and Unblock the Notifications