ಚಳಿಗಾಲದ ಅಧಿವೇಶನದಲ್ಲಿ ಹಗರಣಗಳ ಬಿಸಿ

ಕಾಮನ್ವೆಲ್ತ್ ಕ್ರೀಡಾಕೂಟದಲ್ಲಿ ಕೋಟ್ಯಂತರ ರುಪಾಯಿ ಹಗರಣದ ಆರೋಪದಿಂದಾಗಿ ಸಂಘಟನಾ ಸಮಿತಿ ಅಧ್ಯಕ್ಷರಾಗಿದ್ದ ಸುರೇಶ್ ಕಲ್ಮಾಡಿ ತಲೆದಂಡಕ್ಕೆ ಬಿಜೆಪಿ ನೇತೃತ್ವದ ಪ್ರತಿಪಕ್ಷಗಳು ಆಗ್ರಹಿಸುತ್ತಿದ್ದವು. ಕಲ್ಮಾಡಿ ನೀಡಿದ ರಾಜೀನಾಮೆ ಅಂಗೀಕರಿಸಲಾಗಿದೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಜನಾರ್ದನ ದ್ವಿವೇದಿ ಮಂಗಳವಾರ ತಿಳಿಸಿದ್ದಾರೆ.
ಚರ್ಚೆ ವಿಷಯಗಳು: ಚಳಿಗಾಲ ಅಧಿವೇಶನಕ್ಕೂ ಮುನ್ನಾದಿನ ಅಮೆರಿಕ ಅಧ್ಯಕ್ಷ ಒಬಾಮ ಸಂಸತ್ತನ್ನುದ್ದೇಶಿಸಿ ಮಾಡಿದ ಭಾಷಣ, ಕಾಮನ್ವೆಲ್ತ್, ಆದರ್ಶ, 2ಜಿ ಸ್ಪೆಕ್ಟ್ರಮ್ ಸೇರಿದಂತೆ ಹಲವು ಹಗರಣಗಳನ್ನು ಮೊದಲ ದಿನವೇ ಪ್ರಸ್ತಾಪಿಸಿ ಸರಕಾರವನ್ನು ಮುಜುಗರಕ್ಕೀಡುಮಾಡಲು ವಿರೋಧ ಪಕ್ಷಗಳು ಸಿದ್ಧವಾಗಿವೆ.
ಈ ಹಿನ್ನೆಲೆಯಲ್ಲಿಯೇ ಲೋಕಸಭಾಧ್ಯಕ್ಷೆ ಮೀರಾ ಕುಮಾರ್ ಸರ್ವಪಕ್ಷಗಳ ನಾಯಕರ ಸಭೆಯನ್ನು ಕರೆದು ಅಧಿವೇಶನದ ಮೊದಲ ದಿನ ಕಲಾಪ ಸರಾಗವಾಗಿ ನಡೆಯುವಂತೆ ಸಹಕರಿಸಲು ಮಾಡಿಕೊಂಡ ಮನವಿ ವಿಫಲವಾಗಿದೆ.
ಅಂಗೀಕಾರಕ್ಕೆ ಕಾದಿರುವ ವಿಧೇಯಕಗಳು: ಡಿ.13ರ ವರೆಗೂ ನಡೆಯಲಿರುವ ಚಳಿಗಾಲದ ಅಧಿವೇಶನದ ಸಂದರ್ಭದಲ್ಲಿ ಕೆಲ ಪ್ರಮುಖ ವಿಧೇಯಕಗಳನ್ನು ಸದನ ಮುಂದಿಡಲು ಯುಪಿಎ ಸರ್ಕಾರ ಸಜ್ಜಾಗಿದೆ. ಅವುಗಳಲ್ಲಿ
ಮಹಿಳಾ ಮೀಸಲಾತಿ ವಿಧೇಯಕ 2008(108 ತಿದ್ದುಪಡಿ):- ಲೋಕಸಭೆ ಹಾಗೂ ವಿಧಾನಸಭೆಗಳ ಒಟ್ಟು ಸ್ಥಾನಗಳಲ್ಲಿ ಮೂರನೇ ಒಂದು ಭಾಗ ಮಹಿಳೆಯರಿಗೆ ಮೀಸಲಿರುವಂತೆ ತಿದ್ದುಪಡಿ ತರಲಾಗಿದೆ.
ಭೂ ಕಬಳಿಕೆ (ತಿದ್ದುಪಡಿ)ವಿಧೇಯಕ 2010: ಗಣಿಗಾರಿಕೆ ಹೆಸರಿನಲ್ಲಿ ಮನೆ ಕಳೆದುಕೊಂಡ ನಿರ್ಗತಿಕರಿಗೆ(ಮುಖ್ಯವಾಗಿ ಬುಡಕಟ್ಟು ಜನಾಂಗ) ಪುನರ್ವಸತಿ ಕಲ್ಪಿಸುವ ಬಗ್ಗೆ ಮಸೂದೆ ಮಂಡನೆ.
ಅಭಿವೃದ್ಧಿಗಾಗಿ ಭೂ ಕಬಳಿಕೆ ಹಾಗೂ ಪುನರ್ವಸತಿ ಕಲ್ಪಿಸುವ ಪ್ರಕ್ರಿಯೆಯಲ್ಲಿ ಸಮತೋಲನ ಕಾಯ್ದುಕೊಳ್ಳಲಾಗುವುದು. ಸಾರ್ವಜನಿಕರ ಹಿತಕ್ಕಾಗಿ ಭೂ ಸ್ವಾದೀನಕ್ಕೆ ಒಪ್ಪಿಗೆ ಸೂಚಿಸುವುದು ಇವೇ ಮುಂತಾದ ತಿದ್ದುಪಡಿಗಳನ್ನು 1894ರ ಭೂ ಸ್ವಾಧೀನ ಕಾಯಿದೆಗೆ ಅನ್ವಯವಾಗುವಂತೆ ಮಾಡಲಾಗಿದೆ.
ಗಣಿ ಹಾಗೂ ಖನಿಜ ಕಾಯಿದೆ(ಅಭಿವೃದ್ಧಿ ಹಾಗೂ ನಿಯಂತ್ರಣ ತಿದ್ದುಪಡಿ) 2009: ಗಣಿಗಾರಿಕೆಗೆ ಲೈಸನ್ ಒದಗಿಸುವುದು, ಲೈಸನ್ ರದ್ದು ಪಡಿಸುವುದು ಅಥವಾ ಭೋಗ್ಯಕ್ಕೆ ಇರುವ ಗಣಿಗಾರಿಕೆ ಭೂಮಿಯನ್ನು ಸರ್ಕಾರ ನೀಡುವುದು ಮುಂತಾದ ವಿಷಯಗಳನ್ನು ಒಳಗೊಂಡಿದೆ.
ಶಸ್ತ್ರಾಸ್ತ್ರ (ತಿದ್ದುಪಡಿ) ಕಾಯಿದೆ, 2010 : ಶಸ್ತ್ರಾಸ್ತ್ರ ಹೊಂದಲು ಬೇಕಾದ ಅಗತ್ಯ ಲೈಸನ್ಸ್ ನೀಡಿಕೆಗೆ ನಿಯಮಾವಳಿಗಳನ್ನು ರೂಪಿಸುವುದು ಇದರ ಪ್ರಮುಖ ಅಂಶವಾಗಿದೆ.
-
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
ಭಾರತದ ಹಡಗುಗಳಿಗೆ ಭರ್ಜರಿ ಸುದ್ದಿ ನೀಡಿದ ಇರಾನ್, ಗ್ಯಾಸ್ ಸಮಸ್ಯೆ ಇತ್ಯರ್ಥ ಸಾಧ್ಯತೆ | Operation Roaring Lion -
Swamijis: ಬಹುತೇಕ ಕಾವಿಧಾರಿ ಸ್ವಾಮೀಜಿಗಳು ಅವಿವಾಹಿತರು, ಆದರೆ ಅವರೆಲ್ಲರೂ ಬ್ರಹ್ಮಚಾರಿಗಳಲ್ಲ: ರವಿಕೃಷ್ಣ ರೆಡ್ಡಿ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ! -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion -
LPG Gas: ಗೃಹ-ವಾಣಿಜ್ಯ ಸಿಲಿಂಡರ್ ಬುಕಿಂಗ್ ಮಿತಿ, ದಾಸ್ತಾನು ನಿಯಮಗಳೇನು? ಗ್ಯಾಸ್ ದರಪಟ್ಟಿ












Click it and Unblock the Notifications