ಮಹಾರಾಷ್ಟ್ರ ಮುಖ್ಯಮಂತ್ರಿಯಾಗಿ ಪೃಥ್ವಿರಾಜ್ ಚೌಹಾಣ್

ಆದರ್ಶ್ ಹೌಸಿಂಗ್ ಸೊಸೈಟಿ ಫ್ಲ್ಯಾಟ್ ಹಗರಣದಲ್ಲಿ ಸಿಲುಕಿದ್ದ ಅಶೋಕ್ ಚವಾಣ್ ಅವರು ಸಿಎಂ ಸ್ಥಾನಕ್ಕೆ ಮಂಗಳವಾರ ರಾಜೀನಾಮೆ ನೀಡಿದ್ದರು. ತಮ್ಮ ಅತ್ತೆ ಹಾಗೂ ಇಬ್ಬರು ಸಂಬಂಧಿಕರಿಗೆ ಆದರ್ಶ ಸೊಸೈಟಿ ಫ್ಲ್ಯಾಟ್ ಗಳನ್ನು ಕೊಡಿಸಿರುವ ಹಗರಣ ಬೆಳಕಿಗೆ ಬಂದ ನಂತರ, ಮಹಾ ಸಿಎಂ ತಲೆದಂಡಕ್ಕೆ ಕಾಂಗ್ರೆಸ್ ಹೈಕಮಾಂಡ್ ಸೂಚನೆ ನೀಡಿತ್ತು. ಆದರೆ, ಒಬಾಮಾ ಅವರ ಭಾರತ ಪ್ರವಾಸದ ಹಿನ್ನೆಲೆಯಲ್ಲಿ ಅಶೋಕ್ ಚವಾಣ್ ಅವರ ರಾಜೀನಾಮೆ ಅಂಗೀಕಾರ ಪ್ರಕ್ರಿಯೆ ತಡವಾಗಿತ್ತು.
ದಕ್ಷಿಣ ಮುಂಬೈನ ಕೊಲಾಬಾ ಪ್ರದೇಶದಲ್ಲಿರುವ 31 ಮಹಡಿಯ ಆದರ್ಶ್ ಸೊಸೈಟಿ ಫ್ಲ್ಯಾಟ್ ಗಳನ್ನು ಕಾರ್ಗಿಲ್ ಸಮರದ ಹೀರೋಗಳು ಹಾಗೂ ಮೃತ ಯೋಧರ ಪತ್ನಿಯರಿಗೆ ನೀಡುವ ಸಲುವಾಗಿ ನಿರ್ಮಿಸಲಾಗಿತ್ತು, ಆದರೆ, ಇದನ್ನು ರಾಜಕಾರಣಿಗಳು ಹಾಗೂ ಅವರ ಸಂಬಂಧಿಗಳು, ನಿವೃತ್ತ ಸೇನಾಧಿಕಾರಿಗಳು ಬಳಸುತ್ತಿದ್ದರು. ಇದರಿಂದ ವಿವಾದ ಹುಟ್ಟಿಕೊಂಡಿತ್ತು.
ಸೇನೆಯ ಹಿರಿಯ ಅಧಿಕಾರಿಗಳಾದ ಎನ್ ಸಿ ವಿಜ್, ದೀಪಕ್ ಕಪೂರ್, ಮಾಧವೇಂದ್ರ ಸಿಂಗ್, ರಾಜಕಾರಣಿ ಶರದ್ ಪವಾರ್ ಸೇರಿದಂತೆ ಸುಮಾರು 103ಕ್ಕೂ ಅಧಿಕ ಗಣ್ಯರ ಹೆಸರು ಈ ಹಗರಣದಲ್ಲಿ ಸಿಲುಕಿಕೊಂಡಿದೆ. ಇಲ್ಲಿ ಫ್ಲ್ಯಾಟ್ ಹೊಂದಿದ್ದ ಸೇನೆಯ ನಿವೃತ್ತ ಅಧಿಕಾರಿಗಳು, ಕಾರ್ಗಿಲ್ ಹುತಾತ್ಮರ ಕುಟುಂಬಗಳಿಗೆ ಮರಳಿಸಿದ್ದಾರೆ. ಈ ನಡುವೆ ಫ್ಲ್ಯಾಟ್ ಹಗರಣದ ತನಿಖೆಯನ್ನು ಸಿಬಿಐಗೆ ಒಪ್ಪಿಸಲಾಗಿದೆ.
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications