ವಿಶ್ವ ಕನ್ನಡ ಸಮ್ಮೇಳನಕ್ಕೆ ಮಹೂರ್ತ ಫಿಕ್ಸ್
ಬೆಂಗಳೂರು,
ನ.10: ಅಂತೂ ಇಂತೂ 'ವಿಶ್ವ ಕನ್ನಡ ಸಮ್ಮೇಳನ' ನಡೆಸಲು ಮಹೂರ್ತ ನಿಗದಿಯಾಗಿದೆ. ಕುಂದಾ ನಗರಿ ಬೆಳಗಾವಿಯಲ್ಲಿ ಫೆ.25ರಿಂದ ಮೂರು ದಿನಗಳ ಕಾಲ ನಡೆಯಲಿರುವ ವಿಶ್ವ ಕನ್ನಡ ಸಮ್ಮೇಳನಕ್ಕೆ 30 ಕೋಟಿ ರೂ. ಅನುದಾನ ನೀಡಲು ರಾಜ್ಯ ಸರಕಾರ ನಿರ್ಧರಿಸಿದೆ. ಮಂಗಳವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಯಿತು ಎಂದು ಉನ್ನತ ಶಿಕ್ಷಣ ಸಚಿವ ವಿಎಸ್ ಆಚಾರ್ಯ ಸುದ್ದಿಗಾರರಿಗೆ ತಿಳಿಸಿದರು. id="toptextpromo">ಬೆಳಗಾವಿಯಲ್ಲಿ
ಫೆ. 25, 26 ಮತ್ತು 27ರಂದು ಮೂರು ದಿನಗಳ ಕಾಲ ಸಮ್ಮೇಳನ ನಡೆಸಲಾಗುವುದು. ಸಮ್ಮೇಳನಕ್ಕೆ ಯಾವುದೇ ಕೊರತೆ ಉಂಟಾಗದಂತೆ ಅದ್ದೂರಿಯಾಗಿ ನಡೆಸಲಾಗುವುದು. ಸಮ್ಮೇಳನ ನಡೆಸಲು ಬೇಕಾದ ಅನುದಾನದ ಮೊದಲ ಕಂತನ್ನು ಈಗಾಗಲೇ ಬೆಳಗಾವಿ ಜಿಲ್ಲಾಡಳಿತಕ್ಕೆ ನೀಡಲಾಗಿದೆ. ಸಮ್ಮೇಳನ ಎಲ್ಲರ ಮೆಚ್ಚುಗೆಗೆ ಪಾತ್ರವಾಗಲಿದೆ ಎಂದು ಆಚಾರ್ಯ ವಿಶ್ವಾಸ ವ್ಯಕ್ತಪಡಿಸಿದರು. id='are-slot-1' class='oiad oi-axt oiadv'> id='top-searched-articles'>ಜೆಡಿಎಸ್-
ಬಿಜೆಪಿ ಟ್ವೆಂಟಿ 20 ಸಮ್ಮಿಶ್ರ ಸರ್ಕಾರ ಅಧಿಕಾರದಲ್ಲಿದ್ದಾಗ ಬೆಳಗಾವಿಯಲ್ಲಿ ವಿಶ್ವ ಕನ್ನಡ ಸಮ್ಮೇಳನ ನಡೆಸಲು ನಿರ್ಧಾರ ಕೈಗೊಳ್ಳಲಾಗಿತ್ತು. ಆದರೆ, ಕಾರಣಾಂತರದಿಂದ ಸಮ್ಮೇಳನ ಮುಂದಕ್ಕೆ ಹೋಗಿತ್ತು. ಈ ಹಿಂದೆ ರಾಮಕೃಷ್ಣ ಹೆಗಡೆ ಸರ್ಕಾರದ ಅವಧಿಯಲ್ಲಿ ಮೈಸೂರಿನಲ್ಲಿ 1986 ರಲ್ಲಿ ವಿಶ್ವ ಕನ್ನಡ ಸಮ್ಮೇಳನ ಆಯೋಜಿಸಲಾಗಿತ್ತು. ಈಗ ಎರಡನೇ ಬಾರಿಗೆ ಸಮ್ಮೇಳನಕ್ಕೆ ಸಿದ್ಧತೆ ನಡೆಸಲಾಗುತ್ತಿದೆ.











Click it and Unblock the Notifications