ಪರಿಸರ ಸ್ನೇಹಿ ಯೋಜನೆಗಳಿಗೆ ಸಚಿವ ಸುರೇಶ್ ಚಾಲನೆ

ಸಿಎಫ್ಎಲ್ ಹಾಗೂ ಎಲ್ಇಡಿ ಬಲ್ಬ್ಗಳ ಬಳಕೆಯನ್ನು ಕಡ್ಡಾಯಗೊಳಿಸಲಾಗುವುದು. ಈಗಾಗಲೆ ಸಿಎಫ್ ಎಲ್ ಬಲ್ಬ್ ಅಳವಡಿಕೆಯನ್ನು ಯಶವಿಯಾಗಿ ಜಾರಿಗೊಳಿಸಿರುವ ಬೆಳಗಾವಿ ಮಹಾನಗರ ಪಾಲಿಕೆಯನ್ನು ಸಚಿವರು ಶ್ಲಾಘಿಸಿದರು. ಸಿಎಫ್ಎಲ್ ಹಾಗೂ ಎಲ್ ಇಡಿ ಬಲ್ಬ್ ಗಳ ಬಳಕೆಯಿಂದ ಶೇ. 50 ರಿಂದ 60 ರಷ್ಟು ವಿದ್ಯುತ್ ಉಳಿತಾಯ ಸಾಧ್ಯ. ಬಡವರಿಗೆ ಸಬ್ಸಿಡಿ ದರದಲ್ಲಿ ಸಿಎಫ್ ಎಲ್ ಬಲ್ಬ್ ವಿತರಿಸುವ ಕೇಂದ್ರದ ಯೋಜನೆಗೆ ಪೂರಕವಾಗಿ ಈ ಯೋಜನೆ ಕಾರ್ಯ ನಿರ್ವಹಿಸಲಿದೆ ಎಂದು ಸುರೇಶ್ ಕುಮಾರ್ ಹೇಳಿದರು.
ಮುಖ್ಯಮಂತ್ರಿಯವರ ಅನುದಾನ ಯೋಜನೆಯ ಎರಡನೇ ಹಂತದ ಕಾಮಗಾರಿಗಳಿಗೆ ಪ್ರತಿ ಪಾಲಿಕೆಗೆ ರೂ. 100 ಕೋಟಿ ಅನುದಾನಕ್ಕೆ 800 ಕೋಟಿ ರೂ.ಗಳ ಕ್ರಿಯಾಯೋಜನೆ ರೂಪಿಸಲಾಗುತ್ತಿದೆ ಎಂದು ಅವರು ಸ್ಪಷ್ಟಪಡಿಸಿದರು. ಪ್ರತಿ ಪಾಲಿಕೆ ವ್ಯಾಪ್ತಿಯಲ್ಲಿ ಸಂಚಾರ ನಿರ್ವಹಣೆಗೆ 2 ಕೋಟಿ ರೂ.ಗಳ ಯೋಜನೆ ರೂಪಿಸಲಾಗುವುದು ಎಂದರು.
ಹುಬ್ಬಳ್ಳಿ-ಧಾರವಾಡ, ಮಂಗಳೂರು ಹಾಗೂ ಮೈಸೂರು ಮಹಾನಗರ ಪಾಲಿಕೆಗಳ ವ್ಯಾಪ್ತಿಯಲ್ಲಿ ವಾಣಿಜ್ಯ ಸಂಕೀರ್ಣ ಹಾಗೂ ಬಹುಮಹಡಿ ವಾಹನ ನಿಲುಗಡೆ ತಾಣ ನಿರ್ಮಾಣ ಹಾಗೂ ಚರಂಡಿ ಶುದ್ಧೀಕರಣಕ್ಕೆ ಪೌರ ಕಾರ್ಮಿಕರನ್ನು ಬಳಸುವ ಬದಲಿಗೆ ಯಂತ್ರ ಬಳಸಲು ನಿರ್ಧರಿಸಲಾಗಿದೆ ಎಂದು ಸಚಿವರು ತಿಳಿಸಿದರು.
ಕಿರು ಅರಣ್ಯ ಅಭಿವೃದ್ಧಿ : ಮಹಾನಗರ ಪಾಲಿಕೆ ವ್ಯಾಪ್ತಿಗಳಲ್ಲಿನ ಉದ್ಯಾನವನಗಳ ನಿರ್ಮಾಣ ಮತ್ತು ನಿರ್ವಹಣೆಯನ್ನು ಸಾರ್ವಜನಿಕರ ಅನುಕೂಲಕ್ಕಿಂತ ಗುತ್ತಿಗೆದಾರರಿಗೆ ವರದಾನವಾಗಿ ಪರಿಣಮಿಸಿದೆ. ಇದನ್ನು ತಪ್ಪಿಸಲು ಐದು ಎಕರೆಗಿಂತ ಹೆಚ್ಚು ವಿಸ್ತೀರ್ಣವುಳ್ಳ ಉದ್ಯಾನವನಗಳನ್ನು ಕಿರು ಅರಣ್ಯಗಳನ್ನಾಗಿ ರೂಪಾಂತರಿಸಲು ಪಾಲಿಕೆ ಆಡಳಿತಕ್ಕೆ ಸಲಹೆ ನೀಡಲಾಗಿದೆ ಎಂದರು.
ಆಸ್ತಿತೆರಿಗೆ ಸಂಗ್ರಹಣೆ: ಕಳೆದ ವರ್ಷಕ್ಕೆ ಹೋಲಿಸಿದರೆ ಆಸ್ತೆ ತೆರಿಗೆ ಸಂಗ್ರಹಣೆಯಲ್ಲಿ ಮಹಾನಗರ ಪಾಲಿಕೆಗಳು ಉತ್ತಮ ಪ್ರಗತಿ ಸಾಧಿಸಿವೆ. ಕಳೆದ ವರ್ಷ ಈ ಅವಧಿಯಲ್ಲಿ ಶೇ.42ರಿಂದ 50 ರಷ್ಟು ಆಸ್ತಿತೆರಿಗೆ ಸಂಗ್ರಹವಾಗಿದ್ದರೆ, ಪ್ರಸಕ್ತ ವರ್ಷ ಆ ಪ್ರಮಾಣ ಶೇ.82 ರಿಂದ 85ಕ್ಕೆ ಹೆಚ್ಚಳವಾಗಿದೆ ಎಂದು ಸುರೇಶ್ಕುಮಾರ್ ಹರ್ಷ ವ್ಯಕ್ತಪಡಿಸಿದರು.
ಡಾರ್ಮೆಂಟರಿಗಳ ನಿರ್ಮಾಣ : ಪ್ರಯಾಣಿಕರು ಹಾಗೂ ಇತರೆ ಜನ ಬಸ್ ನಿಲ್ದಾಣ, ಉದ್ಯಾನವನಗಳಲ್ಲಿ ಮಲಗುವುದನ್ನು ತಪ್ಪಿಸಲು ಪಾಲಿಕೆಗಳಿಗೆ ಶೌಚಾಲಯ ಮತ್ತು ಕುಡಿಯುವ ನೀರಿನ ವ್ಯವಸ್ಥೆಯುಳ್ಳ ಡಾರ್ಮೆಟರಿ ನಿರ್ಮಿಸಲು ಸೂಚಿಸಲಾಗಿದೆ. ಈ ಕಾರ್ಯಕ್ಕೆ ಈಗಾಗಲೇ ಮಂಗಳೂರು, ಮೈಸೂರು, ಹುಬ್ಬಳ್ಳಿ-ಧಾರವಾಡ ಹಾಗೂ ಬೆಳಗಾವಿ ಮಹಾನಗರ ಪಾಲಿಕೆ ವ್ಯಾಪ್ತಿಗಳಲ್ಲಿ ಸಮೀಕ್ಷೆ ನಡೆಸಲಾಗಿದೆ. ಮೊದಲ ಹಂತದಲ್ಲಿಸುಮಾರು 7,250 ಮಂದಿ ನಿರಾಶ್ರಿತರುಗಳನ್ನು ಗುರುತಿಸಲಾಗಿದೆ ಎಂದು ಸಚಿವ ಸುರೇಶ್ಕುಮಾರ್ ಸ್ಪಷ್ಟಡಿಸಿದರು.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications