ಪರಿಸರ ಸ್ನೇಹಿ ಯೋಜನೆಗಳಿಗೆ ಸಚಿವ ಸುರೇಶ್ ಚಾಲನೆ

ಸಿಎಫ್ಎಲ್ ಹಾಗೂ ಎಲ್ಇಡಿ ಬಲ್ಬ್ಗಳ ಬಳಕೆಯನ್ನು ಕಡ್ಡಾಯಗೊಳಿಸಲಾಗುವುದು. ಈಗಾಗಲೆ ಸಿಎಫ್ ಎಲ್ ಬಲ್ಬ್ ಅಳವಡಿಕೆಯನ್ನು ಯಶವಿಯಾಗಿ ಜಾರಿಗೊಳಿಸಿರುವ ಬೆಳಗಾವಿ ಮಹಾನಗರ ಪಾಲಿಕೆಯನ್ನು ಸಚಿವರು ಶ್ಲಾಘಿಸಿದರು. ಸಿಎಫ್ಎಲ್ ಹಾಗೂ ಎಲ್ ಇಡಿ ಬಲ್ಬ್ ಗಳ ಬಳಕೆಯಿಂದ ಶೇ. 50 ರಿಂದ 60 ರಷ್ಟು ವಿದ್ಯುತ್ ಉಳಿತಾಯ ಸಾಧ್ಯ. ಬಡವರಿಗೆ ಸಬ್ಸಿಡಿ ದರದಲ್ಲಿ ಸಿಎಫ್ ಎಲ್ ಬಲ್ಬ್ ವಿತರಿಸುವ ಕೇಂದ್ರದ ಯೋಜನೆಗೆ ಪೂರಕವಾಗಿ ಈ ಯೋಜನೆ ಕಾರ್ಯ ನಿರ್ವಹಿಸಲಿದೆ ಎಂದು ಸುರೇಶ್ ಕುಮಾರ್ ಹೇಳಿದರು.
ಮುಖ್ಯಮಂತ್ರಿಯವರ ಅನುದಾನ ಯೋಜನೆಯ ಎರಡನೇ ಹಂತದ ಕಾಮಗಾರಿಗಳಿಗೆ ಪ್ರತಿ ಪಾಲಿಕೆಗೆ ರೂ. 100 ಕೋಟಿ ಅನುದಾನಕ್ಕೆ 800 ಕೋಟಿ ರೂ.ಗಳ ಕ್ರಿಯಾಯೋಜನೆ ರೂಪಿಸಲಾಗುತ್ತಿದೆ ಎಂದು ಅವರು ಸ್ಪಷ್ಟಪಡಿಸಿದರು. ಪ್ರತಿ ಪಾಲಿಕೆ ವ್ಯಾಪ್ತಿಯಲ್ಲಿ ಸಂಚಾರ ನಿರ್ವಹಣೆಗೆ 2 ಕೋಟಿ ರೂ.ಗಳ ಯೋಜನೆ ರೂಪಿಸಲಾಗುವುದು ಎಂದರು.
ಹುಬ್ಬಳ್ಳಿ-ಧಾರವಾಡ, ಮಂಗಳೂರು ಹಾಗೂ ಮೈಸೂರು ಮಹಾನಗರ ಪಾಲಿಕೆಗಳ ವ್ಯಾಪ್ತಿಯಲ್ಲಿ ವಾಣಿಜ್ಯ ಸಂಕೀರ್ಣ ಹಾಗೂ ಬಹುಮಹಡಿ ವಾಹನ ನಿಲುಗಡೆ ತಾಣ ನಿರ್ಮಾಣ ಹಾಗೂ ಚರಂಡಿ ಶುದ್ಧೀಕರಣಕ್ಕೆ ಪೌರ ಕಾರ್ಮಿಕರನ್ನು ಬಳಸುವ ಬದಲಿಗೆ ಯಂತ್ರ ಬಳಸಲು ನಿರ್ಧರಿಸಲಾಗಿದೆ ಎಂದು ಸಚಿವರು ತಿಳಿಸಿದರು.
ಕಿರು ಅರಣ್ಯ ಅಭಿವೃದ್ಧಿ : ಮಹಾನಗರ ಪಾಲಿಕೆ ವ್ಯಾಪ್ತಿಗಳಲ್ಲಿನ ಉದ್ಯಾನವನಗಳ ನಿರ್ಮಾಣ ಮತ್ತು ನಿರ್ವಹಣೆಯನ್ನು ಸಾರ್ವಜನಿಕರ ಅನುಕೂಲಕ್ಕಿಂತ ಗುತ್ತಿಗೆದಾರರಿಗೆ ವರದಾನವಾಗಿ ಪರಿಣಮಿಸಿದೆ. ಇದನ್ನು ತಪ್ಪಿಸಲು ಐದು ಎಕರೆಗಿಂತ ಹೆಚ್ಚು ವಿಸ್ತೀರ್ಣವುಳ್ಳ ಉದ್ಯಾನವನಗಳನ್ನು ಕಿರು ಅರಣ್ಯಗಳನ್ನಾಗಿ ರೂಪಾಂತರಿಸಲು ಪಾಲಿಕೆ ಆಡಳಿತಕ್ಕೆ ಸಲಹೆ ನೀಡಲಾಗಿದೆ ಎಂದರು.
ಆಸ್ತಿತೆರಿಗೆ ಸಂಗ್ರಹಣೆ: ಕಳೆದ ವರ್ಷಕ್ಕೆ ಹೋಲಿಸಿದರೆ ಆಸ್ತೆ ತೆರಿಗೆ ಸಂಗ್ರಹಣೆಯಲ್ಲಿ ಮಹಾನಗರ ಪಾಲಿಕೆಗಳು ಉತ್ತಮ ಪ್ರಗತಿ ಸಾಧಿಸಿವೆ. ಕಳೆದ ವರ್ಷ ಈ ಅವಧಿಯಲ್ಲಿ ಶೇ.42ರಿಂದ 50 ರಷ್ಟು ಆಸ್ತಿತೆರಿಗೆ ಸಂಗ್ರಹವಾಗಿದ್ದರೆ, ಪ್ರಸಕ್ತ ವರ್ಷ ಆ ಪ್ರಮಾಣ ಶೇ.82 ರಿಂದ 85ಕ್ಕೆ ಹೆಚ್ಚಳವಾಗಿದೆ ಎಂದು ಸುರೇಶ್ಕುಮಾರ್ ಹರ್ಷ ವ್ಯಕ್ತಪಡಿಸಿದರು.
ಡಾರ್ಮೆಂಟರಿಗಳ ನಿರ್ಮಾಣ : ಪ್ರಯಾಣಿಕರು ಹಾಗೂ ಇತರೆ ಜನ ಬಸ್ ನಿಲ್ದಾಣ, ಉದ್ಯಾನವನಗಳಲ್ಲಿ ಮಲಗುವುದನ್ನು ತಪ್ಪಿಸಲು ಪಾಲಿಕೆಗಳಿಗೆ ಶೌಚಾಲಯ ಮತ್ತು ಕುಡಿಯುವ ನೀರಿನ ವ್ಯವಸ್ಥೆಯುಳ್ಳ ಡಾರ್ಮೆಟರಿ ನಿರ್ಮಿಸಲು ಸೂಚಿಸಲಾಗಿದೆ. ಈ ಕಾರ್ಯಕ್ಕೆ ಈಗಾಗಲೇ ಮಂಗಳೂರು, ಮೈಸೂರು, ಹುಬ್ಬಳ್ಳಿ-ಧಾರವಾಡ ಹಾಗೂ ಬೆಳಗಾವಿ ಮಹಾನಗರ ಪಾಲಿಕೆ ವ್ಯಾಪ್ತಿಗಳಲ್ಲಿ ಸಮೀಕ್ಷೆ ನಡೆಸಲಾಗಿದೆ. ಮೊದಲ ಹಂತದಲ್ಲಿಸುಮಾರು 7,250 ಮಂದಿ ನಿರಾಶ್ರಿತರುಗಳನ್ನು ಗುರುತಿಸಲಾಗಿದೆ ಎಂದು ಸಚಿವ ಸುರೇಶ್ಕುಮಾರ್ ಸ್ಪಷ್ಟಡಿಸಿದರು.
-
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger












Click it and Unblock the Notifications