ಪಕ್ಷೇತರ ಶಾಸಕರ ಅನರ್ಹತೆ ಪ್ರಕರಣ: ಇಂದು ವಿಚಾರಣೆ

ಹಿರಿಯೂರು ಶಾಸಕರ ವಿರುದ್ಧ ದೂರು ನೀಡಿದ್ದ ಮತದಾರ ಹೈಕೋರ್ಟ್ ನೋಟಿಸ್ಗೆ ಉತ್ತರ ನೀಡಿದ್ದಾರೆ. ಹಿರಿಯೂರು ಕ್ಷೇತ್ರದ ಪಕ್ಷೇತರ ಶಾಸಕ ಡಿ. ಸುಧಾಕರ್ ವಿರುದ್ಧ ಸ್ಪೀಕರ್ಗೆ ದೂರು ನೀಡಿದ್ದ ಮತದಾರ ಪ್ರಕರಣದ ನಾಲ್ಕನೆ ಪ್ರತಿವಾದಿ ಎಸ್.ಎಂ. ಬಸವರಾಜ್ ಎಂಬವರು ಹೈಕೋರ್ಟ್ ನೋಟಿಸ್ಗೆ ಗುರುವಾರ ಉತ್ತರ ನೀಡಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ನ.2ಕ್ಕೆ ವಿಚಾರಣೆ ನಡೆಸಿದ್ದ ತ್ರಿಸದಸ್ಯ ಪೀಠ, ಈ ಕುರಿತು ಹೇಳಿಕೆ ಸಲ್ಲಿಸುವಂತೆ ಸ್ಪೀಕರ್, ಮುಖ್ಯಮಂತ್ರಿ ಹಾಗೂ ಐವರು ಮತದಾರರಿಗೆ ನೋಟಿಸ್ ಜಾರಿ ಮಾಡಿತ್ತು. ನ.8ಕ್ಕೆ ನಡೆದ ವಿಚಾರಣೆಯ ಸಂದರ್ಭದಲ್ಲಿ ಕನಕಗಿರಿ ಹಾಗೂ ಹೊಸದುರ್ಗ ಕ್ಷೇತ್ರಗಳ ಮತದಾರರಿಬ್ಬರು ಸರಕಾರಕ್ಕೆ ವಿರುದ್ದವಾದ ಹೇಳಿಕೆ ಸಲ್ಲಿಸಿದ್ದರು. ಇದಕ್ಕೆ ಪ್ರತಿ ಹೇಳಿಕೆ ಸಲ್ಲಿಸಲು ಸರಕಾರ, ಸ್ಪೀಕರ್, ಸಿಎಂ ಹಾಗೂ ಮೂವರು ಮತದಾರರು ಕಾಲಾವಕಾಶ ಕೇಳಿದ್ದುದರಿಂದ ನ್ಯಾಯಪೀಠ ವಿಚಾರಣೆಯನ್ನು ನ.12ಕ್ಕೆ ಮುಂದೂಡಿತ್ತು.
ಮತದಾರನಿಂದ ಪ್ರಮಾಣಪತ್ರ: "ಯಾರದೇ ಒತ್ತಾಯಕ್ಕೆ ಮಣಿದ ನಾನು ದೂರು ನೀಡಿಲ್ಲ. ನಮ್ಮ ಕ್ಷೇತ್ರದ ಶಾಸಕ ಡಿ. ಸುಧಾಕರ್ ಬಿಜೆಪಿ ಅಭ್ಯರ್ಥಿಯಾಗಿ ಗೆಲ್ಲದಿದ್ದರೂ, ಬಿಜೆಪಿ ಶಾಸಕಾಂಗ ಸಭೆ ಸೇರಿದಂತೆ ಇತರ ಸಭೆಗಳಲ್ಲಿ ಪಾಲ್ಗೊಂಡಿದ್ದಾರೆ. ಪಕ್ಷ ಮತ್ತು ಸರಕಾರದ ವಿರುದ್ಧ ಅವರ ನಡವಳಿಕೆಯಿಂದ ಕ್ಷೇತ್ರದ ಜನತೆಗೆ ಅನ್ಯಾಯವಾಗಿದೆ. ಆದುದರಿಂದ ಅವರನ್ನು ಅನರ್ಹಗೊಳಿಸಬೇಕು ಎಂದು ನಾನು ಸ್ಪೀಕರ್ಗೆ ದೂರು ನೀಡಿದ್ದೇನೆ. ಈ ಪ್ರಕರಣದಲ್ಲಿ ಮುಖ್ಯಮಂತ್ರಿಯನ್ನು ಪ್ರತಿವಾದಿಯನ್ನಾಗಿ ಮಾಡುವ ಆವಶ್ಯಕತೆ ಇರಲಿಲ್ಲ" ಎಂದು ಬಸವರಾಜ್ ತನ್ನ ಉತ್ತರದಲ್ಲಿ ದೂರನ್ನು ಸಮರ್ಥಿಸಿಕೊಂಡಿದ್ದಾರೆ.
-
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
ಭಾರತದ ಹಡಗುಗಳಿಗೆ ಭರ್ಜರಿ ಸುದ್ದಿ ನೀಡಿದ ಇರಾನ್, ಗ್ಯಾಸ್ ಸಮಸ್ಯೆ ಇತ್ಯರ್ಥ ಸಾಧ್ಯತೆ | Operation Roaring Lion -
Swamijis: ಬಹುತೇಕ ಕಾವಿಧಾರಿ ಸ್ವಾಮೀಜಿಗಳು ಅವಿವಾಹಿತರು, ಆದರೆ ಅವರೆಲ್ಲರೂ ಬ್ರಹ್ಮಚಾರಿಗಳಲ್ಲ: ರವಿಕೃಷ್ಣ ರೆಡ್ಡಿ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ! -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion -
LPG Gas: ಗೃಹ-ವಾಣಿಜ್ಯ ಸಿಲಿಂಡರ್ ಬುಕಿಂಗ್ ಮಿತಿ, ದಾಸ್ತಾನು ನಿಯಮಗಳೇನು? ಗ್ಯಾಸ್ ದರಪಟ್ಟಿ












Click it and Unblock the Notifications