ತ್ವರಿತ ಅಲರ್ಟ್ ಗಳಿಗಾಗಿ
For Daily Alerts
ದೇವಾಲಯ ತೆರವು ವಿರೋಧಿಸಿ ಭಜರಂಗದಳ ಪ್ರತಿಭಟನೆ
ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಭಜರಂಗದಳದ ರಾಜ್ಯ ಸಹ ಸಂಚಾಲಕ ಮಂಜುನಾಥ, ಇತರ ಜಿಲ್ಲೆಗಳಲ್ಲಿ ದೇವಾಲಯಗಳ ತೆರವುಗೊಳಿಸುವುದನ್ನು ನಿಲ್ಲಿಸಿ ಪರ್ಯಾಯ ವ್ಯವಸ್ಥೆ ಕಲ್ಪಿಸಲು ಅಲ್ಲಿನ ಜಿಲ್ಲಾಡಳಿತ ತೀರ್ಮಾನಿಸಿದೆ. ಆದರೆ, ಮಂಡ್ಯ ಜಿಲ್ಲಾಧಿಕಾರಿಗಳು ನ್ಯಾಯಾಲಯದ ಆದೇಶದಂತೆ ದೇವಾಲಯಗಳನ್ನು ತೆರವುಗೊಳಿಸಲು ಮುಂದಾಗಿದ್ದು, ಕೂಡಲೇ ತಮ್ಮ ನಿರ್ಧಾರವನ್ನು ಬದಲಾಯಿಸಿಕೊಳ್ಳಬೇಕು ಎಂದು ಅವರು ಆಗ್ರಹಿಸಿದ್ದಾರೆ.
ಅಕ್ರಮ ಧಾರ್ಮಿಕ ಕೇಂದ್ರಗಳನ್ನು ತೆರವುಗೊಳಿಸಿ ಅಥವಾ ಸ್ಥಳಾಂತರಿಸಿ ಎಂದು ನ್ಯಾಯಾಲಯ ಹೇಳಿರುವುದನ್ನು ಜಿಲ್ಲಾಧಿಕಾರಿಗಳು ಸರಿಯಾಗಿ ಅರ್ಥೈಸಿಕೊಳ್ಳದೆ ದೇವಾಲಯಗಳನ್ನು ತೆರವುಗೊಳಿಸಲು ಮುಂದಾಗಿದ್ದಾರೆ ಎಂದು ಅವರು ದೂರಿದರು. ನೂರಾರು ವರ್ಷಗಳ ಇತಿಹಾಸವಿರುವ ದೇವಾಲಯಗಳಿವೆ. ಅಂತಹ ದೇವಾಲಯಗಳನ್ನು ಏಕಾಏಕಿ ತೆರವುಗೊಳಿಸಿದರೆ ಭಕ್ತರ ಭಾವನೆಗಳಿಗೆ ನೋವು ಉಂಟಾಗುತ್ತದೆ. ಆದ್ದರಿಂದ ತೆರವು ಕಾರ್ಯ ಸ್ಥಗಿತಗೊಳಿಸಬೇಕು ಎಂದು ಅವರು ಒತ್ತಾಯಿಸಿದರು.
Comments
Story first published: Friday, November 12, 2010, 11:49 [IST]