ಮಣಿಕಾಂತ್ ಸೇರಿದಂತೆ ನಾಲ್ಕು ಮಂದಿಗೆ ಅಮ್ಮ ಪ್ರಶಸ್ತಿ

ಡಿ.ಬಿ.ರಜಿಯಾ ಅವರ ಕವಿತೆಗಳು, ಡಾ.ಲಕ್ಷ್ಮಣಕೌಂಟೆ ಅವರ ಐತಿಹಾಸಿಕ ಕಾದಂಬರಿ 'ಆಂದೋಲನ', ಬಿ.ಎನ್.ಮಲ್ಲೇಶರ 'ಬ್ರೇಕಿಂಗ್ ನ್ಯೂಸ್' ಮತ್ತು ಎ.ಆರ್.ಮಣಿಕಾಂತರ 'ಅಮ್ಮ ಹೇಳಿದ ಎಂಟು ಸುಳ್ಳುಗಳು' ಕೃತಿಗಳನ್ನು ಈ ಸಾಲಿನ ಅಮ್ಮಪ್ರಶಸ್ತಿಗೆ ಆಯ್ಕೆ ಮಾಡಲಾಗಿದ್ದು ಇದೇ ನವೆಂಬರ್ 29ರಂದು ಸೇಡಂನ ಶ್ರೀ ಪಂಚಲಿಂಗೇಶ್ವರ ದೇವಾಲಯದ ಶಾಂಭವಿ ರಂಗಮಂಟಪದಲ್ಲಿ ಜರಗುವ ಸಮಾರಂಭದಲ್ಲಿ ಅಮ್ಮಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ತಿಳಿಸಿದ್ದಾರೆ.
ದಶಮಾನೋತ್ಸವ : ಪತ್ರಕರ್ತ, ಲೇಖಕ ಮಹಿಪಾಲರೆಡ್ಡಿ ಮುನ್ನೂರ್ ಅವರು ತಮ್ಮ ಅಮ್ಮನ ನೆನಪಿಗಾಗಿ ಸ್ಥಾಪಿಸಿದ ಅಮ್ಮಪ್ರಶಸ್ತಿಗೆ ಈಗ ದಶಮಾನದ ಸಂಭ್ರಮ !
ಕಳೆದ ಹತ್ತು ವರ್ಷಗಳಿಂದ ಕನ್ನಡದ ಪ್ರತಿಭಾವಂತ ಬರಹಗಾರರು ಅಮ್ಮಪ್ರಶಸ್ತಿಗಾಗಿ ತಮ್ಮ ಕೃತಿಗಳನ್ನು ಕಳುಹಿಸುವ ಮೂಲಕ ಪ್ರಶಸ್ತಿಯನ್ನು ಗುರುತಿಸಿದ್ದಾರೆ;ಗೌರವಿಸಿದ್ದಾರೆ.
ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ಅಮ್ಮಪ್ರಶಸ್ತಿ ರಾಜ್ಯದ ಗಣನೀಯ ಪ್ರಶಸ್ತಿಗಳಲ್ಲಿ ಒಂದಾಗಬೇಕು ಎಂಬ ಪತ್ರಿಷ್ಠಾನದ ಆಶಯಕ್ಕೆ ಅನುಗುಣವಾಗಿ ನಾಡಿನ ಖ್ಯಾತ ಲೇಖಕರು, ಕವಿಗಳು, ಪ್ರಕಾಶಕರು ಮತ್ತು ಲೇಖಕರ ಅಭಿಮಾನಿ ಓದುಗರು ಸ್ಪಂದಿಸಿದ್ದು, ಇದು ಗೌರವಾನ್ವಿತ ಪ್ರಶಸ್ತಿಯಾಗಿ ಎಂಬುದಕ್ಕೆ ಸಾಕ್ಷಿ.
ಈ ಬಾರಿ ಅಮ್ಮ ಪ್ರಶಸ್ತಿಗೆ ದಶಮಾನದ ಸಂಭ್ರಮವಿರುವುದರಿಂದ ಸಾಂಕೇತಿಕವಾಗಿ ಹತ್ತು ಜನ ಸಾಹಿತ್ಯ ಸಾಧಕರನ್ನು ಸತ್ಕರಿಸಬೇಕು ಎಂಬ ಉದ್ದೇಶದಿಂದ ನಾಲ್ವರಿಗೆ ಅಮ್ಮ ಪ್ರಶಸ್ತಿ ಹಾಗು ಆರು ಜನರಿಗೆ ಅಮ್ಮ ಪ್ರಶಸ್ತಿ ದಶಮಾನೋತ್ಸವ ವಿಶೇಷ ಪುರಸ್ಕಾರ ನೀಡಲಾಗುತ್ತಿದೆ. ವಿಶೇಷ ಪುರಸ್ಕಾರ ವಿಜೇತರ ಹೆಸರುಗಳನ್ನು ಶೀಘ್ರದಲ್ಲಿಯೇ ಪ್ರಕಟಿಸಲಾಗುವುದು ಎಂದು ಪ್ರಶಸ್ತಿ ಸಂಚಾಲಕ ಪ್ರಭಾಕರ ಜೋಶಿ ತಿಳಿಸಿದ್ದಾರೆ.
-
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Prakash Raj Mother passed Away: ನಟ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ ನಿಧನ, ಚಿತ್ರರಂಗದ ಗಣ್ಯರಿಂದ ಸಂತಾಪ












Click it and Unblock the Notifications