ಬೆಳಗಾವಿ ವೈದ್ಯನಿಂದ ತಂದೆಯ ದೇಹ ಛೇದನ!

ಬೈಲಹೊಂಗದ ದಿ.ಡಾ.ಬಿ.ಎಸ್.ರಾಮಣ್ಣ ತಮ್ಮ ದೇಹವನ್ನು ವೈದ್ಯಕೀಯ ಅಧ್ಯಯನಕ್ಕೆಂದು ದಾನ ಮಾಡಿದ್ದರು. ಈಗ ಅವರ ದೇಹವನ್ನು ಅವರ ಮಗ ಡಾ.ಮಹಾಂತೇಶ್ ಛೇದನ ಮಾಡಲಿದ್ದಾರೆ. ವೈದ್ಯ ಮತ್ತು ವೈದ್ಯಕೀಯ ವಿದ್ಯಾರ್ಥಿಗಳಿಗೆ ಶರೀರ ರಚನೆಯ ಬಗ್ಗೆ ಪಾಠ ಮಾಡಲಿದ್ದಾರೆ ಡಾ.ಮಹಾಂತೇಶ್.
ಬೆಳಗಾವಿಯ ಕೆಎಲ್ಇ ಸಂಸ್ಥೆಯ ಬಿ.ಎಂ.ಕಂಕಣವಾಡಿ ಆಯುರ್ವೇದ ಮಹಾವಿದ್ಯಾಲಯದಲ್ಲಿ ಡಾ.ಮಹಾಂತೇಶ್ ಸಹ ಪ್ರಾಧ್ಯಾಪಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವೈದ್ಯ ಮತ್ತು ವೈದ್ಯಕೀಯ ವಿದ್ಯಾರ್ಥಿಗಳಿಗೆ ಮಾನವ ಶರೀರದ ಪರಿಚಯ ಇರಬೇಕು ಎಂದು ಅವರ ತಂದೆ ಡಾ.ರಾಮಣ್ಣ ಪ್ರತಿಪಾದಿಸುತ್ತಿದ್ದರು.
ಅದನ್ನು ಸಾಕಾರಗೊಳಿಸುವ ನಿಟ್ಟಿನಲ್ಲಿ ಅವರ ಮಗನಿಂದಲೇ ಡಾ.ರಾಮಣ್ಣ ಅವರ ದೇಹಕ್ಕೆ ವೈದ್ಯಕೀಯ ಸ್ಪರ್ಶ ಸಿಗಲಿದೆ. ತಂದೆಯ ದೇಹವನ್ನೇ ಛೇದಿಸುವುದು ಕಷ್ಟದ ಕೆಲಸ. ಹಾಗಿದ್ದೂ ತಮ್ಮ ಎಲ್ಲಾ ಮಾನಸಿಕ ಹೊಯ್ದಾಟಗಳಿಂದ ಹೊರಬಂದಿರುವ ಮಹಾಂತೇಶ್ ತಂದೆಯ ದೇಹವನ್ನು ಛೇದಿಸಲು ಸಿದ್ಧವಾಗಿದ್ದಾರೆ.
ಶನಿವಾರ (ನ.13) ಮಧ್ಯಾಹ್ನ 3.15ಕ್ಕೆ ಡಾ.ರಾಮಣ್ಣ ಅವರ ದೇಹ ಛೇದನ ನಡೆಯಲಿದೆ.ಈ ಸಂದರ್ಭದಲ್ಲಿ ಮಹಾಂತೇಶ್ ಅವರ ತಾಯಿ, ಪತ್ನಿ ಉಪಸ್ಥಿತರಿರುತ್ತಾರೆ. ದೇಹದಾನ ಮತ್ತು ಛೇದನ ವೈದ್ಯ ವಿಜ್ಞಾನಕ್ಕೆ ಹೊಸದಲ್ಲ. ಆದರೆ ಸ್ವತಃ ಮಗನೇ ತಂದೆಯ ದೇಹ ಛೇದನ ಮಾಡುತ್ತಿರುವುದು ಜಗತ್ತಿನಲ್ಲೇ ಪ್ರಥಮ.
ನೇರ ಪ್ರಸಾರ: ಮಹಾಂತೇಶ್ ಅವರು ತಂದೆಯ ದೇಹವನ್ನು ಛೇದಿಸಿ ಪಾಠ ಮಾಡುವ ದೃಶ್ಯವನ್ನು ನೇರ ಪ್ರಸಾರ ಮಾಡಲು ನಾನಾ ಭಾಷೆಯ ಮಾಧ್ಯಮ ಪ್ರತಿನಿಧಿಗಳು ಬಿ.ಎಂ.ಕಂಕಣವಾಡಿ ಆಯುರ್ವೇದ ಮಹಾವಿದ್ಯಾಲಯದಲ್ಲಿ ಬೀಡುಬಿಟ್ಟಿದ್ದಾರೆ. ಬಿಬಿಸಿ ತನ್ನ ಪ್ರತಿನಿಧಿಯನ್ನು ಕಳುಹಿಸಿಕೊಟ್ಟಿದೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications