ರಾಜಕಾರಣಿಗಳು 60ವಯಸ್ಸಿಗೆ ನಿವೃತ್ತಿಯಾಗಲಿ

ದೊಡ್ಡವರೆಲ್ಲಾ ಜಾಣರಲ್ಲ: ಹಿರಿಯರಿದ್ದರೆ ಹಳೆಯದ್ದನ್ನೇ ಮಾಡುತ್ತಾರೆ ವಿನಹಃ ಹೊಸತನಕ್ಕೆ ಅವಕಾಶ ನೀಡುವುದಿಲ್ಲ. ಯುವ ಜನತೆ ದೇಶದ ಅಧಿಕಾರದ ಚುಕ್ಕಾಣಿ ಹಿಡಿದರೆ ಆಡಳಿತ ವ್ಯವಸ್ಥೆಯಲ್ಲಿ ಕ್ರಾಂತಿಕಾರಿ ಬದಲಾವಣೆ ತರಲು ಸಾಧ್ಯ. ಯಾವಾಗಲೂ ಹಳೆ ನೀರು ಹೋಗಿ ಹೊಸ ನೀರು ಬರಬೇಕು. ರಾಜಕಾರಣದಲ್ಲಿ 60ವಯಸ್ಸಿನ ಖಡ್ಡಾಯ ನಿವೃತ್ತಿ ಯೋಜನೆ ಜಾರಿ ಮಾಡುವ ನಿಟ್ಟಿನಲ್ಲಿ ಯುವಜನತೆ ಹೋರಾಟ ಮಾಡಬೇಕು. ಇದು ದೇಶದಲ್ಲಿ ಹೊಸ ಕ್ರಾಂತಿಗೆ ಮುನ್ನುಡಿ ಯಾಗುತ್ತದೆ ಎಂದು ಚಂಪಾ ಕರೆಕೊಟ್ಟರು.
ವಿಶ್ವವಿದ್ಯಾಲಯಗಳು ಹಗರಣಗಳ ತಾಣ: ಜ್ಞಾನ ದೇಗುಲಗಳಾಗಬೇಕಿದ್ದ ವಿಶ್ವವಿದ್ಯಾಲಯಗಳು ಹಗರಣಗಳ ತಾಣಗಳಾಗುತ್ತಿವೆ" ಎಂದು ಕನ್ನಡ ಸಾಹಿತ್ಯ ಪರಿಷತ್ ಮಾಜಿ ಅಧ್ಯಕ್ಷ ಹಾಗೂ ಹಿರಿಯ ಸಾಹಿತಿ ಪ್ರೊ.ಚಂದ್ರಶೇಖರ್ ಪಾಟೀಲ ವಿಷಾದ ವ್ಯಕ್ತಪಡಿಸಿದ್ದಾರೆ. ವಿಶ್ವವಿದ್ಯಾಲಯಗಳಲ್ಲಿ 'ಉಪಕುಲಪತಿ" ನೇಮಕಾತಿಯಿಂದ ಹಿಡಿದು 'ಡಿ" ಗ್ರೂಪ್ನೌಕರರ ನೇಮಕಾತಿವರೆಗೂ ಭ್ರಷ್ಟಾಚಾರ ತಾಂಡವವಾಡುತ್ತಿದೆ. ಹಗರಣಗಳಿಗಾಗಿ ವಿಧಾನಸೌಧಕ್ಕೆ ಹೋಗಬೇಕಿಲ್ಲ. ವಿಶ್ವವಿದ್ಯಾಲಯಗಳ ಎಲ್ಲ ಹಂತಗಳಲ್ಲೂ ಭ್ರಷ್ಟಾಚಾರವು ಹೆಚ್ಚಿನ ಪ್ರಮಾಣದಲ್ಲಿ ನಡೆಯುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಹಗರಣಗಳಿಗಾಗಿ ವಿಧಾನಸೌಧಕ್ಕೆ ಹೋಗಬೇಕಿಲ್ಲ. ವಿಶ್ವವಿದ್ಯಾಲಯಗಳ ಎಲ್ಲ ಹಂತಗಳಲ್ಲೂ ಭ್ರಷ್ಟಾಚಾರವು ಹೆಚ್ಚಿನ ಪ್ರಮಾಣದಲ್ಲಿ ನಡೆಯುತ್ತಿದೆ. ಯುವ ಪೀಳಿಗೆ ಮತ್ತು ವಿದ್ಯಾರ್ಥಿಗಳಿಗೆ ಮಾದರಿಯಾಗುತ್ತಿದ್ದ ಶಿಕ್ಷಣ, ಧಾರ್ಮಿಕ ಮತ್ತು ಸಾಹಿತ್ಯ ಕ್ಷೇತ್ರದಲ್ಲಿ ಇಂದು ಪ್ರೋತ್ಸಾಹ ಮತ್ತು ಮಾರ್ಗದರ್ಶನ ನೀಡಬಲ್ಲವರು ಯಾರೂ ಇಲ್ಲದಂತಾಗಿರುವುದು ಖೇದಕರ ಎಂದು ಅವರು ತಿಳಿಸಿದರು.
ಮಠಾಧೀಶರ ಕಾಲಿಡಿದರೆ ಸರ್ಕಾರ ಬಚಾವ್ : ನಾಡಿನ ಭ್ರಷ್ಟ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಮ್ಮ ಖುರ್ಚಿ ಉಳಿಸಿಕೊಳ್ಳಲು ಶ್ರೀಮಂತ ಸ್ವಾಮೀಜಿಗಳಿಗೆ ಕೋಟ್ಯಂತರ ರೂ.ಗಳನ್ನು ನೀಡುತ್ತಿದ್ದಾರೆ. ಆದರೆ, ಸ್ವಾಮೀಜಿಗಳು ಜನರ ತೆರಿಗೆ ಹಣವನ್ನು ಸಂಕೋಚ ಮತ್ತು ನಾಚಿಕೆಗಳನ್ನು ಬಿಟ್ಟು ತೆಗೆದುಕೊಳ್ಳುತ್ತಿರುವುದು ಆಶ್ಚರ್ಯ. ಇಂಥ ಸ್ವಾಮೀಜಿಗಳಿಂದ ಯುವಪೀಳಿಗೆ ಏನನ್ನೂ ಕಲಿಯುವ ಅಗತ್ಯವಿಲ್ಲ ಎಂದು ಟೀಕಿಸಿದರು.
ರಾಜ್ಯದಲ್ಲಿ ಇಂದು ಕೋಮುವಾದಿ, ಭ್ರಷ್ಟಾಚಾರ ಮತ್ತು ಕುಟುಂಬ ರಾಜಕಾರಣದ ಸರಕಾರ ಅಸ್ತಿತ್ವದಲ್ಲಿರಲು ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ಧಾರ್ಮಿಕ ವಲಯವೆ ಕಾರಣ. ಬ್ರಾಹ್ಮಣ, ಲಿಂಗಾಯುತ ಮತ್ತು ವೀರಶೈವ ಸಮುದಾಯದವರು ಕೋಮುವಾದಿ ಬಿಜೆಪಿ ಸರಕಾರಕ್ಕೆ ಬೆಂಬಲವಾಗಿ ನಿಂತಿದ್ದಾರೆ ಎಂದು ಚಂಪಾ ಕಿಡಿಕಾರಿದರು.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications