ಸುದರ್ಶನ್ ಹೇಳಿಕೆ ಬಹುದೊಡ್ಡ ತಪ್ಪು : ಜೋಶಿ

ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡು ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಸೋನಿಯಾ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿರುವುದು ತಪ್ಪು. ಇದರ ಹಿಂದೆ ಸಂಘ ಪರಿವಾರವಾಗಲಿ ಮತ್ತು ಬಿಜೆಪಿಯ ಪಾತ್ರವಾಗಲಿ ಇಲ್ಲ ಎಂದು ಸ್ಪಷ್ಟಪಡಿಸಿದರು. ಕಾಂಗ್ರೆಸ್ ನಾಯಕರು ಮತ್ತು ಕಾರ್ಯಕರ್ತರು ಪ್ರತಿಭಟನೆಯನ್ನು ನಿಲ್ಲಿಸಿ ಸುದರ್ಶನ್ ಹೇಳಿಕೆಯನ್ನು ಕ್ಷಮಿಸಬೇಕು. ದೇಶದ ಹಿತಾಸಕ್ತಿಗೆ ಪ್ರತಿಭಟನೆ ಒಳ್ಳೆಯದಲ್ಲ ಎಂದು ಅವರು ಹೇಳಿದರು.
ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡಿದ್ದ ಸುದರ್ಶನ್, ಸೋನಿಯಾ ಗಾಂಧಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದರು. ಸೋನಿಯಾ ಗಾಂಧಿ ಅವರು ಅಮೆರಿಕದ ಸಿಐಎ ಏಜೆಂಟ್ ಆಗಿದ್ದು, ಮಾಜಿ ಪ್ರಧಾನಮಂತ್ರಿ ರಾಜೀವ ಗಾಂಧಿ, ಇಂದಿರಾ ಗಾಂಧಿ ಅವರ ಕೊಲೆಗೆ ಸಂಚು ರೂಪಿಸಿದ್ದರು ಎಂದು ಹೇಳಿಕೆ ನೀಡಿದ್ದು ಭಾರಿ ವಿವಾದಕ್ಕೆ ಕಾರಣವಾಗಿತ್ತು. ಕಾಂಗ್ರೆಸ್ ಕಾರ್ಯಕರ್ತರು ದೇಶಾದ್ಯಂತ ವ್ಯಾಪಕ ಪ್ರತಿಭಟನೆ ವ್ಯಕ್ತವಾಗಿತ್ತು.












Click it and Unblock the Notifications