ಸಿಎಂ ಪ್ರತಿವಾದಿಯನ್ನಾಗಿಸಲು ಹೈಕೋರ್ಟ್ ಅಸ್ತು

ಕಳೆದ ನ.12ರಂದು ವಿಚಾರಣೆ ನಡೆಸಿದ್ದ ನ್ಯಾ ಮೋಹನ್ ಶಾಂತನಗೌಡರ್, ನ್ಯಾ ಅಬ್ದುಲ್ ನಜೀರ್ ಹಾಗೂ ನ್ಯಾ ಎಎಸ್ ಬೋಪಣ್ಣ ಅವರ ಪೂರ್ಣ ಪೀಠ ಪೂರಕ ಅರ್ಜಿಗಳ ಪರಿಗಣನೆ ಕುರಿತು ಸೋಮವಾರ ಕಾಯ್ದಿಟ್ಟ ತೀರ್ಪನ್ನು ಪ್ರಕಟಿಸಿತು.
ಮೂಲ ಅರ್ಜಿಯಲ್ಲಿ ಸ್ಪೀಕರ್ ಕೆಜಿ ಬೋಪಯ್ಯ ಹಾಗೂ 2ನೇ ಅರ್ಜಿಯಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಪ್ರತಿವಾದಿಯಾಗಿಸಲು, ಹೆಚ್ಚುವರಿ 32 ಅಂಶಗಳ ಸೇರ್ಪಡೆ, ತಿದ್ದುಪಡಿ ಅರ್ಜಿ ಮತ್ತು ಐವರು ಮತದಾರರನ್ನು ಪ್ರತಿವಾದಿಯಾಗಿಸಿ ಸೇರಿಸಿದ ಎಲ್ಲ ಅರ್ಜಿಗಳನ್ನು ಹೈಕೋರ್ಟ್ ಪುರಸ್ಕರಿಸಿದೆ. ಇದರೊಂದಿಗೆ ಪಕ್ಷೇತರ ಅನರ್ಹ ಶಾಸಕರು ಈ ಪ್ರಕರಣದಲ್ಲಿ ಮೊದಲ ಕಂಟಕದಿಂದ ಭಾಗಶಃ ಪಾರಾದಂತಾಗಿದೆ. ಒಂದು ವೇಳೆ ಹೈಕೋರ್ಟ್ ಅವಕಾಶ ನಿರಾಕರಿಸಿದ್ದರೆ ಪಕ್ಷೇತರ ಶಾಸಕರ ಅರ್ಜಿ ಜೀವ ಕಳೆದುಕೊಳ್ಳುತ್ತಿತ್ತು.
ಸಮಗ್ರ ಅರ್ಜಿ ಸಲ್ಲಿಕೆ : ಮೂಲ ಅರ್ಜಿಗೆ ವೈಯಕ್ತಿಕವಾಗಿ ಸ್ಪೀಕರ್ ಕೆಜಿ ಬೋಪಯ್ಯ ಅವರನ್ನು ಪ್ರತಿವಾದಿಯಾಗಿಸಿ ಮತ್ತು ಹೆಚ್ಚುವರಿ 32 ಅಂಶಗಳನ್ನು ಅರ್ಜಿಗೆ ಸೇರ್ಪಡೆ ಮಾಡಬೇಕು. ಅದರೊಡನೆ ಮೂಲ ಅರ್ಜಿಯಲ್ಲಿ ನಾವೆಂದೂ ಬಿಜೆಪಿ ತೊರೆದಿಲ್ಲ ಎಂಬ ಅಂಶವನ್ನು ತಿದ್ದುಪಡಿ ಮಾಡಿ ನಾವೆಂದೂ ಬಿಜೆಪಿ ಸೇರಿಲ್ಲ ಎಂಬುದಾಗಿ ಮಾಡಬೇಕಿದೆ.
ಎರಡನೇ ರಿಟ್ ಅರ್ಜಿಯಲ್ಲಿ ಐವರು ಮತದಾರರು ಹಾಗೂ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಪ್ರತಿವಾದಿಯಾಗಿಸಿ ಅರ್ಜಿಯಲ್ಲಿ ಸೇರಿಸಬೇಕಿದೆ. ಇವೆಲ್ಲವನ್ನೂ ಸೇರಿಸಿ ಮಂಗಳವಾರ ಸಂಜೆಯೊಳಗೆ ಸಮಗ್ರ ಅರ್ಜಿ ಸಲ್ಲಿಸಲು ಅರ್ಜಿದಾರರ ಪರ ವಕೀಲರು ಒಪ್ಪಿಕೊಂಡಿದ್ದಾರೆ. ಸಮಗ್ರ ಅರ್ಜಿ ಸಲ್ಲಿಕೆಗೆ ಸಮಯಾವಕಾಶ ಬೇಕಾದರೆ ತೆಗೆದುಕೊಳ್ಳಿ, ಆದರೆ ಮತ್ತೆ ತಿದ್ದುಪಡಿ ಅಥವಾ ಸೇರ್ಪಡೆಗೆ ಕೋರ್ಟ್ ಅವಕಾಶ ನೀಡುವುದಿಲ್ಲ ಎಂದು ಕೋರ್ಟ್ ಎಚ್ಚರಿಸಿದೆ.
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications