ಕೆಎಲ್ಇ ಜಾಗತಿಕ ಮಟ್ಟದ ಶಿಕ್ಷಣ ಸಂಸ್ಥೆ : ಖೇರ್

ಇಲ್ಲಿನ ಲಿಂಗರಾಜ ಕಾಲೇಜ್ ಮೈದಾನದಲ್ಲಿ ಸೋಮವಾರ ನಡೆದ ಕೆಎಲ್ಇ ಸಂಸ್ಥೆಯ 95ನೇ ಸಂಸ್ಥಾಪನೆ ದಿನ ಮತ್ತು ತಮ್ಮ ಆಡಳಿತದ 25 ವರ್ಷಗಳನ್ನು ಪೂರೈಸಿದ ಸಂಸ್ಥೆಯ ಕಾರ್ಯಾಧ್ಯಕ್ಷ ಡಾ ಪ್ರಭಾಕರ ಕೋರೆಯವರ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದರು. ಜೀವನದಲ್ಲಿ ಆಶಾವಾದ ಇದ್ದರೆ ಏನನ್ನಾದರೂ ಸಾಧಿಸಲು ಸಾಧ್ಯವಾಗುತ್ತದೆ. ಅದಕ್ಕೆ ಈ ಸಂಸ್ಥೆ ಕಟ್ಟಿ ಬೆಳೆಸಿದವರೇ ಸಾಕ್ಷಿ ಎಂದರು.
ಶಬ್ದಕ್ಕಿಂತ ಮೌನವೇ ಶ್ರೇಷ್ಠ. ಪ್ರಚಾರಕ್ಕಿಂತ ಕೆಲಸ ದೊಡ್ಡದು. ಕೆಎಲ್ಇ ಸಂಸ್ಥೆ ಮೌನವಾಗಿದ್ದುಕೊಂಡು ವಿಶ್ವ ಶೈಕ್ಷಣಿಕ ನಕ್ಷೆಯಲ್ಲಿ ಹೆಜ್ಜೆ ಗುರುತು ಮೂಡಿಸಿದೆ. ಕೋರೆಯವರು ಜೀವಿತಾವಧಿಯ ದೊಡ್ಡ ಸಾಧನೆ ಮಾಡಿದ್ದಾರೆ. ಉತ್ತಮ ಕೆಲಸಗಳು ಯಾವತ್ತೂ ಗಮನ ಸೆಳೆಯುತ್ತವೆ. ಹೀಗಾಗಿ ಕೆಎಲ್ಇ ಎಲ್ಲರ ಬಾಯಲ್ಲಿ ಇದೆ ಎಂದು ನುಡಿದರು.
ಸಾಮಾನ್ಯ ಕುಟುಂಬದಿಂದ ಬಂದ ನಾನು, ಪ್ರಾಮಾಣಿಕತೆ, ಕಠಿಣ ಪರಿಶ್ರಮದಿಂದ ಇಲ್ಲಿಯವರೆಗೆ ದುಡಿದಿದ್ದೇನೆ. ಅನೇಕ ತೊಂದರೆ- ತಾಪತ್ರಯಗಳನ್ನು ಎದುರಿಸಿದ್ದೇನೆ. ಯುವ ಜನಾಂಗಕ್ಕೆ ಸರಳ ಜೀವನ ಹಿಡಿಸಲಿಕ್ಕಿಲ್ಲ. ಜೀವನದಲ್ಲಿ ಸರಳತೆಯನ್ನು ಅಳವಡಿಸಿಕೊಂಡಿದ್ದರಿಂದಲೇ ನಾನು ಈ ಮಟ್ಟಕ್ಕೆ ಬೆಳೆದೆ ಎಂದು ತಿಳಿಸಿದರು.
ಜಾಗತಿಕ ಮಾಧ್ಯಮಗಳು ಇಂದು ನಕಾರಾತಕ ವರದಿಗಳಿಗೇ ಹೆಚ್ಚಿನ ಮಹತ್ವ ನೀಡುತ್ತಿವೆ. ನಿತ್ಯದ ಸುದ್ದಿಗಳು ಭ್ರಷ್ಟಾಚಾರ, ದುರ್ಘಟನೆಗಳ ಸುತ್ತವೇ ಇರುತ್ತವೆ. ಅವುಗಳನ್ನೇ ಪ್ರಮುಖವಾಗಿ ಪ್ರಚುರಪಡಿಸಲಾಗುತ್ತಿದ್ದು, ಸಕಾರಾತ್ಮಕ ಸಂಗತಿಗಳನ್ನು ಮರೆಯಲಾಗುತ್ತಿದೆ. ಇದು ಸಾಮಾಜಿಕವಾಗಿ ಆರೋಗ್ಯಕರವಲ್ಲ. ಎಲ್ಲವನ್ನೂ ವಾಣಿಜ್ಯ ದೃಷ್ಟಿಯಿಂದಲೇ ನೋಡಬಾರದು ಎಂದು ಸಲಹೆ ಮಾಡಿದರು.
-
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
ಬೆಂಗಳೂರಿನಲ್ಲಿ ನಡೆಯುವ ಆರ್ಸಿಬಿ-ಎಸ್ಆರ್ಎಚ್ ಉದ್ಘಾಟನಾ ಪಂದ್ಯದ ಟಿಕೆಟ್ ಬುಕ್ ಮಾಡುವುದ್ಹೇಗೆ? ಇಲ್ಲಿದೆ ಮಾಹಿತಿ -
Summer Drinks: ಎಳನೀರು ಅಥವಾ ಕಬ್ಬಿನ ರಸ – ಬೇಸಿಗೆಯಲ್ಲಿ ಯಾವುದು ಉತ್ತಮ? -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ












Click it and Unblock the Notifications