ಏರ್ ಲೈನ್ಸ್ ಆರಂಭಿಸಲು ಲಂಚ ಕೇಳಿದ್ರು : ಟಾಟಾ

1995ರಲ್ಲಿ ಏರ್ ಲೈನ್ಸ್ ಕ್ಷೇತ್ರಕ್ಕೆ ಕಾಲಿರಿಸುವ ಉದ್ದೇಶ ಹೊಂದಿದ್ದರೂ ಅಂದಿನ ಕೇಂದ್ರ ಸಚಿವರು 15 ಕೋಟಿ ರೂ. ಲಂಚ ಕೇಳಿದ್ದರಿಂದ ಹಿಂದೆ ಸರಿಯಬೇಕಾಯಿತು ಎಂದು ಬಾಂಬ್ ಎಸೆದಿದ್ದಾರೆ. ಜೆಆರ್ಡಿ ಟಾಟಾ 1930ರಲ್ಲಿ ಏರ್ಲೈನ್ಸ್ ಆರಂಭಿಸಿದ್ದರು. ಆದರೆ 1950ರಲ್ಲಿ ಇದನ್ನು ಸರಕಾರ ತನ್ನ ಸ್ವಾಧೀನಕ್ಕೆ ತೆಗೆದುಕೊಂಡು ಸರಕಾರಿ ಸ್ವಾಮ್ಯದ ಏರ್ ಇಂಡಿಯಾ ಸಂಸ್ಥೆಯನ್ನಾಗಿ ಪರಿವರ್ತಿಸಿತು. ಈ ಕೇಂದ್ರ ಸಚಿವರು ಯಾರು ಎಂದು ಟಾಟಾ ಬಾಯಿ ಬಿಡದಿದ್ದರೂ, ಕರ್ನಾಟಕದ ಕೇಂದ್ರ ಮಾಜಿ ಸಚಿವ ಸಿಎಂ ಇಬ್ರಾಹಿಂ ಪ್ರತಿಕ್ರಿಯೆ ನೀಡಿ, ಕೂಡಲೇ ಕೇಂದ್ರ ಸಚಿವರ ಹೆಸರನ್ನು ಬಹಿರಂಗಪಡಿಸಬೇಕೆಂದು ಆಗ್ರಹಿಸಿದ್ದಾರೆ.
ಡೆಹ್ರಾಡೂನ್ನಲ್ಲಿ ಮಾತನಾಡಿದ ರತನ್ ಟಾಟಾ, 1995ರಲ್ಲಿ ಅನುಭವಿಸಿದ ಯಾತನೆಯನ್ನು ವಿವರಿಸಿದ್ದಾರೆ. ಟಾಟಾ ಸಂಸ್ಥೆ 1930ರ ದಶಕದಲ್ಲೇ ಏರ್ಲೈನ್ಸ್ ಆರಂಭಿಸಿ ಅದನ್ನು ಸರಕಾರಕ್ಕೆ ಬಿಟ್ಟುಕೊಟ್ಟಿತ್ತು. 1995ರಲ್ಲಿ ಮತ್ತೆ ಏರ್ಲೈನ್ಸ್ ಕ್ಷೇತ್ರಕ್ಕೆ ಜಿಗಿಯುವ ನಿಟ್ಟಿನಲ್ಲಿ ಪ್ರಯತ್ನ ಪಟ್ಟಾಗ ಕೇಂದ್ರ ಸಚಿವರೊಬ್ಬರು 15 ಕೋಟಿ ರೂ. ಲಂಚ ಕೇಳಿದ್ದರು. ಇದನ್ನು ನೀಡಲು ನಿರಾಕರಿಸಿದಾಗ, ಉದ್ಯಮಿಯೊಬ್ಬರು ಅಸಮಾಧಾನ ವ್ಯಕ್ತಪಡಿಸಿದ್ದರು ಎಂದು ಟಾಟಾ ವಿವರಿಸಿದ್ದಾರೆ.
ಆದರೆ ಲಂಚ ನೀಡುವುದು ಅಸಹ್ಯಕರ ಎಂದು ಭಾವಿಸಿದ್ದರಿಂದ ಹಾಗೂ ತಮ್ಮ ಆತ್ಮಕ್ಕೆ ವಿರುದ್ಧವಾಗಿ ತಪ್ಪು ಹೆಜ್ಜೆ ಇಡಬಾರದೆಂಬ ಉದ್ದೇಶದಿಂದ ಲಂಚ ನೀಡಲಿಲ್ಲ ಎಂದು ಟಾಟಾ ಹೇಳಿದ್ದಾರೆ. ಈ ಸಂಬಂಧ ಮೂವರು ಪ್ರಧಾನ ಮಂತ್ರಿಗಳನ್ನೂ ಭೇಟಿ ಮಾಡಿ ಚರ್ಚಿಸಿದ್ದೆವು. ಆದರೆ ಸರಕಾರದ ಮಟ್ಟದ ಮೂರನೇ ವ್ಯಕ್ತಿಯೊಬ್ಬರ ಅಡ್ಡಗಾಲಿನಿಂದ ಎಲ್ಲ ಪ್ರಯತ್ನ ವ್ಯರ್ಥವಾಯಿತು ಎಂದು ನೆನಪಿನಂಗಳದಿಂದ ಹಲವು ಮಾಹಿತಿ ಬಿಚ್ಚಿಟ್ಟಿದ್ದಾರೆ.
-
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಇಂಡೋನೇಷ್ಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ: ಏಷ್ಯಾ ರಾಷ್ಟ್ರಗಳಲ್ಲಿ ಸುನಾಮಿ ಆತಂಕ, ಭಾರತದ ಮೇಲಾಗುವ ಪರಿಣಾಮವೇನು? -
Bengaluru House Rent: ಬೆಂಗಳೂರಿನ ಪ್ರೈಮ್ ಏರಿಯಾದಲ್ಲೂ ನಾನ್ವೆಜ್ ಪ್ರಿಯರಿಗೆ ಮನೆ ಸಿಗ್ತಿಲ್ಲ, ಸೋಷಿಯಲ್ ಮೀಡಿಯಾ ಚರ್ಚೆ -
Prakash Raj: ನಾಸ್ತಿಕನಾದರೂ ತಾಯಿಯ ನಂಬಿಕೆಗೆ ಗೌರವ ಕೊಟ್ಟು; ಕ್ರೈಸ್ತ ಧರ್ಮದ ಸಂಪ್ರದಾಯ ಪಾಲನೆ: ನಟ ಪ್ರಕಾಶ್ ರಾಜ್ -
Education: CBSE 9 ಮತ್ತು 10ನೇ ತರಗತಿಯ ಹೊಸ ಪಠ್ಯಕ್ರಮ ಇಂದು ಬಿಡುಗಡೆ -
ಮುಂದಿನ 2 ರಿಂದ 3 ವಾರಗಳಲ್ಲಿ ಇರಾನ್ ಮೇಲೆ ಅತ್ಯಂತ ಭೀಕರ ದಾಳಿ: ಟ್ರಂಪ್ ಎಚ್ಚರಿಕೆ -
ವಿದ್ಯಾರ್ಥಿಗಳ ಮೊಬೈಲ್ ಗೀಳಿಗೆ ಬ್ರೇಕ್: ಹೊಸ 'ಡಿಜಿಟಲ್ ನೀತಿ' ಪ್ರಕಟಿಸಿದ ಆರೋಗ್ಯ ಇಲಾಖೆ -
Raghav Chadha: ಸಂಸದ ರಾಘವ್ ಚಡ್ಡಾಗೆ ಶಾಕ್ ಕೊಟ್ಟ ಎಎಪಿ, ಬಿಜೆಪಿ ಸೇರಲಿದ್ದಾರೆಯೇ ಸ್ಟಾರ್ ರಾಜಕಾರಣಿ -
Nuwan Thushara: ಆರ್ಸಿಬಿಗಾಗಿ ಶ್ರೀಲಂಕಾ ಕ್ರಿಕೆಟ್ ಮಂಡಳಿಯ ವಿರುದ್ಧವೇ ತಿರುಗಿ ಬಿದ್ದ ಸ್ಟಾರ್ ಆಟಗಾರ ನುವಾನ್ ತುಷಾರ












Click it and Unblock the Notifications