ಭೂಹಗರಣ ತನಿಖೆಗೆ ವಹಿಸಲು ಸಿದ್ಧ : ಯಡಿಯೂರಪ್ಪ

ಮುಖ್ಯಮಂತ್ರಿ ಮಕ್ಕಳು ಕೈಗಾರಿಕೋದ್ಯಮಿಗಳು ಆಗಬಾರದೆ ಎಂದು ಪ್ರಶ್ನಿಸಿರುವ ಅವರು, ಕಾನೂನು ಚೌಕಟ್ಟಿನೊಳಗೆ ಕೈಗಾರಿಕೆ ಹಾಗೂ ಆಸ್ಪತ್ರೆ ಸ್ಥಾಪನೆಗಾಗಿ ಕೆಐಎಡಿಬಿಯು ತಮ್ಮ ಮಕ್ಕಳಿಗೆ ಭೂಮಿ ಮಂಜೂರು ಮಾಡಿದೆ. ಇದರಲ್ಲಿ ಯಾವುದೇ ಅಕ್ರಮ ನಡೆಸಿಲ್ಲ ಎಂದು ಸುದ್ದಿಗೋಷ್ಠಿಯಲ್ಲಿ ಸೋಮವಾರ ಸ್ಪಷ್ಟಪಡಿಸಿದರು.
ಕಾಂಗ್ರೆಸ್ ಮತ್ತು ಜೆಡಿಎಸ್ ಅಧಿಕಾರಾವಧಿಯಲ್ಲೂ ಹಲವು ಪ್ರಭಾವಿ ರಾಜಕಾರಣಿಗಳು ಕೆಐಎಡಿಬಿಯಿಂದ ಭೂಮಿ ಮಂಜೂರು ಮಾಡಿಸಿಕೊಂಡಿದ್ದಾರೆ. ಅದೇ ಮಾದರಿಯಲ್ಲೇ ತಮ್ಮ ಮಕ್ಕಳೂ ಕೈಗಾರಿಕೆಗಾಗಿ ಭೂಮಿ ಪಡೆದಿದ್ದಾರೆ ಎಂದು ಅವರು ಹೇಳಿದರು. ಫ್ಲೂಯಿಡ್ ಪವರ್ ಟೆಕ್ನಾಲಜೀಸ್ ಕಂಪನಿಯ ಏಳು ಮಂದಿ ಪಾಲುದಾರರಲ್ಲಿ ನನ್ನ ಪುತ್ರ ರಾಘವೇಂದ್ರ ಇದ್ದಾನೆ. ಕಂಪನಿ ಕೋರಿಕೆ ಮೇರೆಗೆ ಜಿಗಣಿ ಕೈಗಾರಿಕೆ ಪ್ರದೇಶದಲ್ಲಿ ಎರಡು ಎಕರೆ ಭೂಮಿ ಮಂಜೂರು ಮಾಡಿಕೊಡಲಾಗಿದೆ.
ಇನ್ನು ಪುತ್ರಿ ಉಮಾದೇವಿ, ನಾನು ಡಿಸಿಎಂ ಆಗುವ ಮುನ್ನವೇ ಬಿಪಿಒ ಕಂಪನಿ ಆರಂಭಿಸಿದ್ದಳು. ಎಂಕಾಂ ಪದವೀಧರೆಯಾಗಿರುವ ಆಕೆ ಬಿಪಿಎಲ್ ಕಂಪನಿ ಯಲ್ಲಿ 12 ವರ್ಷ ಕೆಲಸ ಮಾಡಿದ ಅನುಭವದ ಮೇಲೆ ಸ್ವಂತ ಬಿಸಿನೆಸ್ ಆರಂಭಿಸಿದ್ದಾಳೆ. ಕೆಐಎಡಿಬಿಗೆ ಅರ್ಜಿ ಹಾಕಿಕೊಂಡು, ಹಾರೋಹಳ್ಳಿ ಬಳಿ ಎರಡು ಎಕರೆ ಭೂಮಿ ಮಂಜೂರು ಮಾಡಿಸಿಕೊಂಡಿದ್ದಾಳೆ.
ಇನ್ನು ಶಿವಮೊಗ್ಗದಲ್ಲಿ ನಮ್ಮದೇ ಒಡೆತನದ ಜಮೀನಿನಲ್ಲಿ ಆಸ್ಪತ್ರೆ ಆರಂಭಿಸಿದ್ದೇವೆ. ಇದರ ಪಕ್ಕದಲ್ಲಿ ಇನ್ನೂ ಜಾಗದ ಅಗತ್ಯ ಇದ್ದಿದ್ದರಿಂದ 5.34 ಎಕರೆ ಭೂಮಿಯನ್ನು ಕೆಐಎಡಿಬಿಯಿಂದ ಮಂಜೂರು ಮಾಡಿಸಿಕೊಳ್ಳಲಾಗಿದೆ. ರೈತರಿಂದ ಬಲವಂತವಾಗಿ ಭೂಮಿ ಸ್ವಾಧೀನಪಡಿಸಿಕೊಂಡಿಲ್ಲ ಎಂದು ಸಮಜಾಯಿಷಿ ನೀಡಿದರು.
-
"ಕೆಡಿ" ಸಿನಿಮಾದ ಹಾಡು ಅಶ್ಲೀಲವಾಗಿದ್ರೆ ಕೂಡಲೇ ಎಲ್ಲ ಕಡೆ ತೆರವು ಮಾಡಿ: ಸೆನ್ಸಾರ್ ಮಂಡಳಿಗೆ ಕೇಂದ್ರ ಸರ್ಕಾರ ಸೂಚನೆ -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು -
ಸರಕು ಖಾಲಿಯಾಯ್ತಾ ಪ್ರೇಮ್, ಇಡೀ ದೇಶದ ಮುಂದೆ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದಿರಿ: ಸೆರಗ ಸರ್ಸೆ ಹಾಡಿಗೆ ವಿರೋಧ -
Bengaluru Second Airport: ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಡಿ.ಕೆ.ಶಿವಕುಮಾರ್ -
Nora Fatehi: ಸರ್ಸೆ ನಿನ್ನ ಸೆರಗ ಹಾಡು ವಿವಾದ: ಹೇಳಿದ್ದೊಂದು- ಮಾಡಿದ್ದು ಇನ್ನೊಂದು, ನನ್ನ ನಂಬಿ ಪ್ಲೀಸ್ -
SSLC ವಿದ್ಯಾರ್ಥಿಗಳ ಗಮನಕ್ಕೆ: ಮಾರ್ಚ್ 18ಕ್ಕೆ ಪ್ರಥಮ ಭಾಷೆ ಕನ್ನಡ ಪರೀಕ್ಷೆ; ಪಾಸಾಗಲು ಈ ಪ್ರಮುಖ ಅಂಶಗಳನ್ನು ಗಮನಿಸಿ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
ಟೀಂ ಇಂಡಿಯಾಗೆ ನನ್ನದೊಂದು ಸಲಾಂ, ಐಪಿಎಲ್ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಪಂಜಾಬ್ ಕಿಂಗ್ಸ್ ಕೋಚ್ ರಿಕಿ ಪಾಂಟಿಂಗ್ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Prem: ಅಂದು ಮೇಲುಕೋಟೆ ಹುಡುಗಿ, ಇಂದು ಸೆರಗ ಸರ್ಸೆ: ವಿವಾದಕ್ಕೆ ಕಾರಣವಾದ ಪ್ರೇಮ್ ಸಿನಿಮಾ ಹಾಡುಗಳು












Click it and Unblock the Notifications