ಚಲಿಸುತ್ತಿದ್ದ ಬಸ್ ಮೇಲೆ ಉರುಳಿದ ಭಾರೀ ಮರ

ಮೆಜೆಸ್ಟಿಕ್ ನಿಂದ ನೀಲಸಂದ್ರಕ್ಕೆ ತೆರಳುತ್ತಿದ್ದ ಕೆಎ 01 ಎಫ್ಎ 1676 ನಂಬರ್ ಇದ್ದ ರೂಟ್ ನಂ.146 ಬಸ್ ಮೇಲೆ ಮರ ಉರುಳಿ ಭಾರೀ ಆವಾಂತರ ಸೃಷ್ಟಿಸಿದೆ. ಸ್ಥಳದಲ್ಲಿ ವಾಹನ ಸಂಚಾರ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ.
ಬಸ್ಸಿನ ಹಿಂಭಾಗದಲ್ಲಿ ಮರ ಬಿದ್ದಿದ್ದರಿಂದ ಹಿಂಭಾಗದಲ್ಲಿರುವವರು ಗಾಯಗೊಂಡಿದ್ದಾರೆ. ಕೂಡಲೆ ಅಗ್ನಿಶಾಮಕ ದಳದ ಸಿಬ್ಬಂದಿಗಳು ಸ್ಥಳಕ್ಕೆ ಧಾವಿಸಿ ನಾಲ್ವರನ್ನು ಪ್ರಾಣಾಪಾಯದಿಂದ ಕಾಪಾಡಿದ್ದಾರೆ. ಅವರಲ್ಲಿ ಮೂವರಿಗೆ ತೀವ್ರವಾಗಿ ಗಾಯವಾಗಿದ್ದು ಅವರನ್ನು ಬೌರಿಂಗ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳೀಯರು ಕೂಡ ರಕ್ಷಣೆಗೆ ಧಾವಿಸಿ ಮುಂಭಾಗದಲ್ಲಿ ಕುಳಿತವರನ್ನು ಹೊರಕ್ಕೆ ತರಲು ಸಹಾಯ ಮಾಡಿದ್ದಾರೆ. ಬಸ್ಸಿನಲ್ಲಿ ಒಟ್ಟು 34 ಜನ ಪ್ರಯಾಣಿಸುತ್ತಿದ್ದರು.
ಸ್ಥಳದಲ್ಲಿ ಭಾರೀ ವಾಹನ ದಟ್ಟಣೆ ಉಂಟಾಗಿದೆ. ಕಳೆದ ಮೂರ್ನಾಲ್ಕು ದಿನಗಳಿಂದ ಸುರಿಯುತ್ತಿರುವ ಜಿಟಿಜಿಟಿ ಮಳೆ ಇಂದು ಕೂಡ ಮುಂದುವರಿದಿರುವುದರಿಂದ ಮತ್ತು ಅಪಾರ ಸಂಖ್ಯೆಯಲ್ಲಿ ಸಾರ್ವಜನಿಕರು ನೆರೆದಿರುವುದರಿಂದ ವಾಹನ ಸಂಚಾರ ಸುಗಮಗೊಳಿಸಲು ಪೊಲೀಸರು ಹರಸಾಹಸಪಡುತ್ತಿದ್ದಾರೆ.
ಮಳೆಯಾಗುತ್ತಿರುವುದರಿಂದ ಮರದ ಕೆಳಗಿನ ಮಣ್ಣು ಸಡಿಲಾಗಿ ಬೇರುಸಮೇತ ಮರ ಉರುಳಿದೆ ಎಂದು ಶಾಂತಿನಗರದ ಶಾಸಕ ಹ್ಯಾರಿಸ್ ಹೇಳಿದ್ದಾರೆ. ಇಂಥ ಅಪಾಯ ಇತರ ಪ್ರದೇಶದಲ್ಲಿಯೂ ಸಂಭವಿಸುವ ಸಾಧ್ಯತೆಯಿರುವುದರಿಂದ ಕೂಡಲೆ ಸರಕಾರ ಮರಗಳು ಬೀಳದಂತೆ ಕಾಂಕ್ರೀಟ್ ಹಾಕಿ ಮರಗಳನ್ನು ಮತ್ತು ಜನರನ್ನು ಕಾಪಾಡಬೇಕೆಂದು ಕೋರಿದ್ದಾರೆ.
-
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ -
Kannada: ಕರ್ನಾಟಕದಲ್ಲಿರುವ ಬ್ಯಾಂಕ್ಗಳಲ್ಲಿ ಸ್ಪಷ್ಟ ಕನ್ನಡ; ತುಳು, ಕೊಂಕಣಿ ಭಾಷೆಯ ಕಲರವ ಈಗ ಉಳಿದಿಲ್ಲ: ಕವಿರಾಜ್












Click it and Unblock the Notifications