ಕರ್ನಾಟಕ ಸಿಎಂ ಮಾನ ಸಂಸತ್ತಿನಲ್ಲಿ ಹರಾಜು

Parliament adjourned 2G and land scam
ನವದೆಹಲಿ, ನ.18: ಅಕ್ರಮವಾಗಿ ಭೂ ಕಬಳಿಕೆ, ಡಿನೋಟಿಫೈ ಹಗರಣದಲ್ಲಿ ಸಿಲುಕಿ ವಿಲವಿಲ ಎನ್ನುತ್ತಿರುವ ರಾಜ್ಯ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ನೇತೃತ್ವದ ಕರ್ನಾಟಕದ ಬಿಜೆಪಿ ಸರಕಾರವನ್ನು ವಜಾಗೊಳಿಸಬೇಕು ಎಂದು ಲೋಕಸಭೆಯಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಸಂಸದರು ಒಕ್ಕೊರಲಲ್ಲಿ ಆರ್ಭಟಿಸಿದ್ದಾರೆ. ದೇಶ ಕಂಡ ಅತ್ಯಂತ ಭ್ರಷ್ಟ ಸಿಎಂ ಎಂದರೆ ಅದು ಯಡಿಯೂರಪ್ಪ, ಕರ್ನಾಟಕವನ್ನು ಉಳಿಸಿ ಎಂದು ಸಂಸದರು ಕೇಂದ್ರ ಸರ್ಕಾರವನ್ನು ಆಗ್ರಹಿಸಿದ್ದಾರೆ.

ಇಂದು ಲೋಕಸಭೆ ಕಲಾಪ ಆರಂಭವಾಗುತ್ತಿದ್ದಂತೆ ಬಿಜೆಪಿ, ಎಡಪಕ್ಷಗಳು, ಎಐಎಡಿಎಂಕೆ, ಸಮಾಜವಾದಿ ಪಕ್ಷ ಮತ್ತು ಬಹುಜನ ಸಮಾಜ ಪಕ್ಷಗಳು 2ಜಿ ತರಂಗಾಂತರ ಹಂಚಿಕೆ ಹಗರಣವನ್ನು ಜಂಟಿ ಸದನ ಸಮಿತಿ ತನಿಖೆಗೆ ಒಪ್ಪಿಸಬೇಕು ಎಂದು ತಮ್ಮ ಆಗ್ರಹಿಸತೊಡಗಿದವು. ಆದರೆ, ಇದಕ್ಕೆ ವಿರುದ್ಧವಾಗಿ ಕಾಂಗ್ರೆಸ್ ಸಂಸದರು ಬಿಜೆಪಿ ವಿರೋಧಿ ಹೇಳಿಕೆಗಳುಳ್ಳ ಫಲಕಗಳನ್ನು ಹಿಡಿದು ಪ್ರತಿಭಟಿಸತೊಡಗಿದರು.

'ಭೂ ಹಗರಣದಲ್ಲಿ ಸಿಲುಕಿರುವ ಕರ್ನಾಟಕ ಸರಕಾರವನ್ನು ವಜಾಗೊಳಿಸಿ', "ಭ್ರಷ್ಟರಿಂದ ಕರ್ನಾಟಕವನ್ನು ರಕ್ಷಿಸಿ" 'ಭ್ರಷ್ಟ ಮುಖ್ಯಮಂತ್ರಿ ಯಡಿಯೂರಪ್ಪ ರಾಜೀನಾಮೆ ನೀಡಲಿ', ಮುಖ್ಯಮಂತ್ರಿಯವರು ಸ್ವಜನ ಪಕ್ಷಪಾತ ಮಾಡುತ್ತಿದ್ದಾರೆ. ಅವರು ತಕ್ಷಣವೇ ರಾಜೀನಾಮೆ ನೀಡಬೇಕು ಎಂಬ ಹೇಳಿಕೆಗಳುಳ್ಳ ಫಲಕ ಪತ್ರಗಳನ್ನು ಹಿಡಿದ ಕಾಂಗ್ರೆಸ್ ಸಂಸದರು ಕರ್ನಾಟಕ ಬಿಜೆಪಿ ವಿರುದ್ಧ ಘೋಷಣೆಗಳನ್ನು ಕೂಗಿದರು.

ಆಡಳಿತ ಪಕ್ಷ ಮತ್ತು ಪ್ರತಿಪಕ್ಷಗಳ ಸದಸ್ಯರು ಪರಸ್ಪರ ಆರೋಪ ಪ್ರತ್ಯಾರೋಪಗಳಲ್ಲಿ ತೊಡಗಿದ್ದರಿಂದ ಸದನದಲ್ಲಿ ಕೋಲಾಹಲ ಉಂಟಾಯಿತು. ಸ್ಪೀಕರ್ ಮೀರಾಕುಮಾರ್ ಅವರ ಮಾತು ಸಂಸದರ ಕಿವಿಗೆ ತಲುಪಲೇ ಇಲ್ಲ. ನಂತರ ಕಲಾಪವನ್ನು ಅನಿವಾರ್ಯವಾಗಿ ಮೀರಾಕುಮಾರ್ ಅವರು ಮುಂದೂಡಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+