ಧರ್ಮಸ್ಥಳ: ಡಿ.1ರಿಂದ ಲಕ್ಷದೀಪೋತ್ಸವ ಸಂಭ್ರಮ

ಬಳ್ಳಾರಿಯ ಬಿಷಪ್ ಹೆನ್ರಿ ಡಿಸೋಜಾ, ಮೈಸೂರಿನ ಶೇಖ್ ಜಬೀಹುಲ್ಲಾ ಮತ್ತು ನಿವೃತ್ತ ಪ್ರಾಂಶುಪಾಲ ಪಿ. ಅನಂತರಾಜ ಇಂದ್ರ ಉಪನ್ಯಾಸ ನೀಡಲಿದ್ದಾರೆ. ರಾತ್ರಿ 9 ಗಂಟೆಯಿಂದ ಚೆನ್ನೈನ ಶೀಲಾ ಉನ್ನಿಕೃಷ್ಣನ್ ಮತ್ತು ಬಳಗದವರಿಂದ ನೃತ್ಯ ನಾಟಕ ಪ್ರದರ್ಶನವಿದೆ.
ಡಿ.5 ರಂದು ನಡೆಯುವ ಸಾಹಿತ್ಯ ಸಮ್ಮೇಳನವನ್ನು ಕಾನೂನು ಸಚಿವ ಎಸ್. ಸುರೇಶ್ ಕುಮಾರ್ ಉದ್ಘಾಟಿಸಲಿದ್ದಾರೆ. ನಾಡೋಜ ಡಾ. ಹಂಪ ನಾಗರಾಜಯ್ಯ ಅಧ್ಯಕ್ಷತೆ ವಹಿಸಲಿದ್ದಾರೆ. ಮೈಸೂರಿನ ಡಾ. ಎನ್.ಎಸ್. ತಾರಾನಾಥ್, ಬೆಂಗಳೂರಿನ ಎಂ.ಎಸ್. ನರಸಿಂಹಮೂರ್ತಿ ಮತ್ತು ನೇಮಿಚಂದ್ರ ಉಪನ್ಯಾಸ ನೀಡಲಿದ್ದಾರೆ.
ಬಳಿಕ ಮುಂಬೈನ ಜಯಶ್ರೀ ಹಾಗೂ ಪಂಡಿತ್ ರೋಣು ಮಜುಮ್ದಾರ್ ಅವರಿಂದ ಸಂಗೀತ ಜುಗಲ್ಬಂದಿ ಕಾರ್ಯಕ್ರಮ ನಡೆಯಲಿದೆ.ರಾತ್ರಿ 12 ಗಂಟೆಯಿಂದ ಶ್ರೀ ಮಂಜುನಾಥ ಸ್ವಾಮಿಯ ಲಕ್ಷದೀಪೋತ್ಸವ ನಡೆಯಲಿದೆ. ಡಿ. 6ರಂದು ಸಂಜೆ ಹೇಮಾವತಿ ವಿ, ಹೆಗ್ಗಡೆ ಮಾರ್ಗದರ್ಶನ ದಲ್ಲಿ ಭಗವಾನ್ ಶ್ರೀ ಚಂದ್ರನಾಥ ಸ್ವಾಮಿಯ ಸಮವಸರಣ ಪೂಜೆ ನಡೆಯಲಿದೆ. ರಾಜ್ಯ ಮಟ್ಟದ ವಸ್ತು ಪ್ರದರ್ಶನ ಹಾಗೂ ಪ್ರತಿದಿನ ಮನೋರಂಜನಾ ಕಾರ್ಯಕ್ರಮ ಆಯೋಜಿಸಲಾಗಿದೆ.












Click it and Unblock the Notifications