ಭೂ-ಹಗರಣ : ಲೋಕಾಯುಕ್ತಕ್ಕೆ ಜೆಡಿಎಸ್ ದೂರು

ಪಕ್ಷದ ವಕ್ತಾರ ವೈಎಸ್ ವಿ ದತ್ತ ಹಾಗೂ ಎಂಸಿ ನಾಣಯ್ಯ ಗುರುವಾರ ಸಾಯಂಕಾಲ ಲೋಕಾಯುಕ್ತ ಕಚೇರಿಗೆ ತೆರಳಿ, ದೂರು ನೀಡಿದ್ದಾರೆ. ಮುಖ್ಯಮಂತ್ರಿ ಯಡಿಯೂರಪ್ಪ, ಅವರ ಪುತ್ರ ಬಿಎಸ್ ರಾಘವೇಂದ್ರ, ಬಿಡಿಎ ಹಾಗೂ ಸಿಎಂ ಕಚೇರಿಯ ಅಧಿಕಾರಿಗಳನ್ನು ಪ್ರತಿವಾದಿಯಾಗಿ ಮಾಡಲಾಗಿದೆ. ಅಧಿಕಾರ ದುರುಪಯೋಗ, ಸ್ವಜನ ಪಕ್ಷಪಾತದಿಂದ ಮುಖ್ಯಮಂತ್ರಿ ರಾಜ್ಯದ ಬೊಕ್ಕಸಕ್ಕೆ ಸುಮಾರು ಐದು ಸಾವಿರ ಕೋಟಿ ರೂ.ಗೂ ಅಧಿಕ ನಷ್ಟ ಮಾಡಿದ್ದಾರೆ ಎಂದು ಜೆಡಿಎಸ್ ಪ್ರತಿಪಾದಿಸಿದೆ.
ರಾಚೇನಹಳ್ಳಿ, ನಾಗರಬಾವಿಯಲ್ಲಿ ಸಿಎಂ ಮಕ್ಕಳಾದ ರಾಘವೇಂದ್ರ, ವಿಜಯೇಂದ್ರ ಒಡೆತನಕ್ಕೆ ಸೇರಿದ ಕಂಪನಿಗಳಲ್ಲಿ ಷೇರು ಹೂಡಿಕೆ ಮಾಡಿದವರಿಗೆ ಅಕ್ರಮವಾಗಿ ಭೂಮಿ ಮಂಜೂರು ಸೇರಿದಂತೆ 8 ಪ್ರಕರಣಗಳಿಗೆ ಸಂಬಂಧಿಸಿದಂತೆ ದೂರು ನೀಡಲಾಗಿದೆ. ಜೆಡಿಎಸ್ ವಕ್ತಾರ ವೈಎಸ್ ವಿ ದತ್ತ ಸುದ್ದಿಗಾರರ ಜತೆ ಮಾತನಾಡಿ, ಸುಮಾರು 580 ಪುಟಗಳ ದಾಖಲೆಯನ್ನು ಲೋಕಾಯುಕ್ತರಿಗೆ ಸಲ್ಲಿಸಿದ ದೂರಿನ ಜತೆ ಲಗತ್ತಿಸಲಾಗಿದೆ.
ಪೂರಕ ಮಾಹಿತಿ ಒದಗಿಸಲು ಕಾಲಾವಕಾಶ ಕೇಳಲಾಗಿದೆ. ಬಿಜೆಪಿ ಸರಕಾರ ರಾಜ್ಯವನ್ನು ಕೊಳ್ಳೆ ಹೊಡೆಯುತ್ತಿದ್ದು, ತಡೆಯದಿದ್ದರೆ ಜನತೆ ನಮ್ಮನ್ನು ಕ್ಷಮಿಸುವುದಿಲ್ಲ. ಮುಖ್ಯಮಂತ್ರಿಯೇ ಹಗರಣದ ರೂವಾರಿ ಆಗಿರುವುದರಿಂದ, ಸ್ವಯಂಪ್ರೇರಿತ ತನಿಖೆ ನಡೆಸಲು ಲೋಕಾಯುಕ್ತರಿಗೆ ಸಾಧ್ಯವಿಲ್ಲ.ಈ ಕಾನೂನು ತೊಡಕನ್ನು ನಿವಾರಿಸಲು ದೂರು ನೀಡಿದ್ದೇವೆ ಎಂದರು.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications