ಕರ್ನಾಟಕದ ಮಾನ ಹರಾಜು : ಎಸ್ಸೆಂ ಕೃಷ್ಣ

ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಒಂದು ಕಾಲದಲ್ಲಿ ಕರ್ನಾಟಕ ಮತ್ತು ಬೆಂಗಳೂರು ಅಂದರೆ ದೇಶದಲ್ಲಿ ಅಷ್ಟೇ ಅಲ್ಲ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಗೌರವ ಹೊಂದಿರುವ ರಾಜ್ಯವಾಗಿತ್ತು. ಆದರೆ, ಬಿಜೆಪಿ ಅಧಿಕಾರಿಕ್ಕೆ ಬಂದ ನಂತರ ಡಿನೋಟಿಫಿಕೇಷನ್ ಮತ್ತು ಗಣಿ ಲೂಟಿ ಹಾಗೂ ಭ್ರಷ್ಟಾಚಾರದಲ್ಲಿ ನಂಬರ್ 1 ಸ್ಥಾನ ಗಳಿಸುವ ಮೂಲಕ ಕರ್ನಾಟಕದ ಮರ್ಯಾದೆಯನ್ನು ಹರಾಜಿಗಿಟ್ಟಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.
ರಾಜ್ಯದಲ್ಲಿ ಇದೀಗ ಭ್ರಷ್ಟಾಚಾರ ಮುಗಿಲುಮುಟ್ಟಿದೆ. ಮುಖ್ಯಮಂತ್ರಿಯಿಂದ ಆರಂಭವಾಗಿರುವ ಲಂಚತನ ಎಲ್ಲಾ ಕ್ಷೇತ್ರದಲ್ಲೂ ಹೆಚ್ಚಾಗಿದೆ. ಈ ಎಲ್ಲ ಸಾಧನೆಗೆ ಬಿಜೆಪಿ ಸರಕಾರ ಹಾಗೂ ಮುಖ್ಯಮಂತ್ರಿ ಯಡಿಯೂರಪ್ಪ ಕಾರಣ ಎಂದು ಕೃಷ್ಣ ಕಿಡಿಕಾರಿದರು. ನನ್ನ ಅವಧಿಯಲ್ಲಿ ನಡೆದಿರುವ ಡಿನೋಟಿಫಿಕೇಷನ್ ಸಂಬಂಧಿಸಿದಂತೆ ನ್ಯಾಯಾಂಗ ತನಿಖೆಗೆ ವಹಿಸಿದರೆ ಅದನ್ನು ಸ್ವಾಗತಿಸುವುದಾಗಿ ಕೃಷ್ಣ ಸ್ಪಷ್ಟಪಡಿಸಿದರು.












Click it and Unblock the Notifications