ದೇವೇಗೌಡರ ನಿರ್ನಾಮ ನನ್ನ ಗುರಿ : ಯಡಿಯೂರಪ್ಪ

ಡಿನೋಟಿಫಿಕೇಷನ್ ಸೇರಿದಂತೆ ಅನೇಕ ಹಗರಣದ ಸುಳಿಯಲ್ಲಿರುವ ಸಿಲುಕಿರುವ ಸರಕಾರವನ್ನು ಬೆನ್ನು ಬಿಡದೆ ಕಾಡುತ್ತಿರುವ ದೇವೇಗೌಡ ಮತ್ತು ಎಚ್ ಡಿ ಕುಮಾರಸ್ವಾಮಿ ಅವರ ಬಗ್ಗೆ ಹುಬ್ಬಳ್ಳಿ, ಬಾಗಲಕೋಟೆ ಮತ್ತು ವಿಜಾಪುರದಲ್ಲಿ ಮಾತನಾಡಿದ ಮುಖ್ಯಮಂತ್ರಿ ಯಡಿಯೂರಪ್ಪ, ಏಕವಚನದಲ್ಲಿ ದಾಳಿ ನಡೆಸಿದರು. ಕರ್ನಾಟಕಕ್ಕೆ ಕಂಟಕವಾಗಿರುವ ಈ ಅಪ್ಪ ಮಕ್ಕಳನ್ನು ನಿರ್ನಾಮ ಮಾಡುವುದೇ ನನ್ನ ಮುಂದಿನ ಗುರಿ ಎಂದು ಅವರು ಅಧಿಕೃತ ಘೋಷಣೆ ಮಾಡಿದರು.
ಅಪ್ಪ ಮಕ್ಕಳು ರಾಜ್ಯವನ್ನು ಹೇಗೆಲ್ಲಾ ಹಾಳು ಮಾಡಿದರು ಎಂಬುದು ಇಡೀ ರಾಜ್ಯಕ್ಕೆ ಗೊತ್ತಿದೆ. ಇದೀಗ ಜನಪ್ರಿಯ ಸರಕಾರವನ್ನು ಹಿಂಬಾಗಿಲಿನ ಮೂಲಕ ಪತನಗೊಳಿಸಲು ಸಂಚು ರೂಪಿಸುತ್ತವೆ ಎಂದ ಅವರು, ಲಜ್ಜೆಗೆಟ್ಟ ಮಾಜಿ ಪಿಎಂ, ನಿನಗೆ ಏನಾದರೂ ನೈತಿಕತೆ, ಮಾನ ಮರ್ಯಾದೆ ಇದೆಯೇ ? ನೀನು ಏನೆಲ್ಲ ಮೋಸ ಮಾಡಿದೆ. 20/20 ಸರಕಾರದಲ್ಲಿ ಏನೇನೆಲ್ಲಾ ಆಟ ಆಡಿದೆ ಎಂಬುದು ಜನರಿಗೆ ಗೊತ್ತಿದೆ. ನಿನ್ನ ಆಟ ಈ ಯಡಿಯೂರಪ್ಪನ ಮುಂದೆ ನಡೆಯಲ್ಲ ಎಂದು ಗುಡುಗಿದರು.
ಒಳಗೊಂದು ಹೊರಗೊಂದು ಆಟ ಆಡ್ತಿಯಾ? ನಮ್ಮ ಸಂಸದರನ್ನು ಕರೆದು ಕಾಂಗ್ರೆಸ್ ನಾಶ ಮಾಡಬೇಕು, ನಮಗೆ ಬೆಂಬಲ ಕೊಡಿ ಅಂತ ಕೇಳೋದು. ನಾಯಕತ್ವ ಬದಲಾಯಿಸೋಣ ನಮಗೆ ಬೆಂಬಲ ಕೊಡಿ ಅಂತ ಕಾಂಗ್ರೆಸ್ ಮುಂದೆ ಅಂಗಲಾಚುವುದು. ನಾಚಿಕೆ ಆಗುವುದಿಲ್ಲವೇ ನಿನಗೆ ಎಂದು ದೇವೇಗೌಡರನ್ನು ನೇರವಾಗಿ ಹೆಸರಿಸಿ ದಾಳಿ ನಡೆಸಿದರು. ಕಾಂಗ್ರೆಸ್ ಹೈಕಮಾಂಡ್ ಮುಖಕ್ಕೆ ಮಂಗಳಾರತಿ ಮಾಡಿದೆ. ಆದರೂ ನಿನ್ನ ಕೆಟ್ಟ ಬುದ್ಧಿಯನ್ನು ಬಿಡುತ್ತಿಲ್ಲ. ಈ ಯಡಿಯೂರಪ್ಪ ಇನ್ನು ಮುಂದೆ ಸುಮ್ಮನೆ ಕೂರಲ್ಲ. ನಿನ್ನದಾಗುತ್ತೂ ನನ್ನದಾಗುತ್ತೂ ನೋಡೋಣ ಎಂದು ಸವಾಲು ಹಾಕಿದರು.
ದೇವೇಗೌಡರ ಪ್ರತಿಕ್ರಿಯೆ : ಯಡಿಯೂರಪ್ಪ ಅವರಿಗೆ ತಲೆ ಕೆಟ್ಟಿದೆಯಾ? ಮತಿಭ್ರಮಣೆ ಆಗಿರುವಂತೆ ಮಾತನಾಡುತ್ತಿದ್ದಾರೆ. 50 ವರ್ಷ ರಾಜಕೀಯ ಮಾಡಿದ್ದೇನೆ. ಇಂತಹ ಅನೇಕ ಮಂದಿಯನ್ನು ನೋಡಿರುವೆ. ನನ್ನನ್ನು ನೋಡಿಕೊಳ್ಳುವುದಾಗಿ ಯಡಿಯೂರಪ್ಪ ಹೇಳಿದ್ದಾರೆ. ಹೀಗೆ ಹೇಳಿದ ಅನೇಕರು ಮೂಲೆ ಏನೇನಾಗಿದ್ದಾರೆ ಎನ್ನುವುದನ್ನು ನಾನು ಹೇಳಬೇಕಿಲ್ಲ. ಹಗರಣದಲ್ಲಿ ಸಿಲುಕಿರುವ ಮುಖ್ಯಮಂತ್ರಿ ಕೆಳಗಿಳಿಸುವುದು ನಮ್ಮ ಏಕೈಕ ಗುರಿ ಎಂದು ಹೇಳಿದ್ದಾರೆ.
ಕುಮಾರಸ್ವಾಮಿ ಪ್ರತಿಕ್ರಿಯೆ : ನಮ್ಮ ಹೋರಾಟ ಮುಖ್ಯಮಂತ್ರಿ ವಿರುದ್ಧವೇ ಹೊರತು ಯಡಿಯೂರಪ್ಪ ಅವರ ವಿರುದ್ಧ ಅಲ್ಲ. ಮುಖ್ಯಮಂತ್ರಿ ಅನೇಕ ಹಗರಣದಲ್ಲಿ ಪಾಲ್ಗೊಂಡಿದ್ದಾರೆ. ಈ ಪ್ರಕರಣ ತಾರ್ಕಿಕ ಅಂತ್ಯ ಕಾಣುವವರೆಗೂ ನಾವು ವಿರಮಿಸುವುದಿಲ್ಲ. ದೇವೇಗೌಡ ಕುಟುಂಬದ ಬಗ್ಗೆ ಇಲ್ಲಸಲ್ಲದ ಮಾತುಗಳನ್ನು ಆಡಿದ್ದಾರೆ. ಇಂತಹ ಜನರನ್ನು ನಾವು ಬಹಳ ಜನರನ್ನು ನೋಡಿದ್ದೇವೆ. ಇದಕ್ಕೆ ಸೊಪ್ಪ ಹಾಕುವ ಜಾಯಮಾನ ನಮ್ಮದಲ್ಲ ಎಂದು ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications