ಇಂದು ಕೊಡಗಿನಲ್ಲಿ ಹುತ್ತರಿ ಆಚರಣೆ ಸಂಭ್ರಮ

ಈ ಬಾರಿ ಮಳೆಯ ಕಾರಣ ಹಬ್ಬ ಆಚರಣೆ ಮಂಕಾದಂತೆ ಕಂಡು ಬರುತ್ತಿದೆ. ಕಾಫಿ, ಗದ್ದೆ ಕೊಯ್ಲು ಕೆಲಸಕ್ಕೂ ಮಳೆ ಅಡಚಣೆ ಮಾಡಿದೆ ಅಲ್ಲದೆ, ಲಕ್ಷಾಂತರ ರೂಪಾಯಿಯ ನಷ್ಟವೂ ಸಂಭವಿಸಿದೆ. ಇನ್ನೊಂದೆಡೆ ತಡವಾಗಿ ಆರಂಭವಾದ ಮುಂಗಾರು ಮಳೆಯ ಕಾರಣ ನೀರಿನ ಕೊರತೆಯಿಂದ ಕೆಲವರು ಗದ್ದೆ ನಾಟಿ ಮಾಡಿಲ್ಲ. ಇನ್ನು ಕೆಲವರು ಭತ್ತದ ಕೃಷಿಯ ಬದಲಿಗೆ ಶುಂಠಿ ಬೆಳೆದಿದ್ದಾರೆ. ಆದರೂ ಕದಿರು ಕೊಯ್ಯುವ ಮೂಲಕ ಹುತ್ತರಿ ಹಬ್ಬ ಆಚರಣೆ ಸಂಪ್ರದಾಯವಾಗಿರುವುದರಿಂದ ಕೆಲವರು ಚಿಕ್ಕ ಚಿಕ್ಕ ಗದ್ದೆಯಲ್ಲಿ ನಾಟಿ ನೆಟ್ಟಿದ್ದರೆ, ಇನ್ನು ಗದ್ದೆಯಿಲ್ಲದವರು ತಮ್ಮ ಮನೆಯ ಮುಂದಿನ ಕಾಂಪೌಂಡ್ನಲ್ಲಿಯೇ ಭತ್ತ ಬೆಳೆಸಿ ಕದಿರು ಕೊಯ್ಯುವ ಸಂಪ್ರದಾಯದೊಂದಿಗೆ ಹುತ್ತರಿ ಆಚರಿಸುತ್ತಿದ್ದಾರೆ.
ಒಂದೆಡೆ ಕುಟುಂಬದವರು ಕೂಡಿ ಕದಿರು ಕೊಯ್ದರೆ, ಮತ್ತೊಂದೆಡೆ ದೇವಸ್ಥಾನಗಳಲ್ಲಿ ಕದಿರು ಕೊಯ್ದು ವಿತರಿಸಲಾಗುತ್ತಿದೆ. ಕದಿರು ತೆಗೆಯುವ ಗದ್ದೆಯಲ್ಲಿ ಮಾವಿನ ತೋರಣ ಕಟ್ಟಿ, ಬಾಳೆ ಕಟ್ಟಿ, ಹೂವಿನಿಂದ ಅಲಂಕರಿಸಲಾಗಿದ್ದು, ರಾತ್ರಿ ಕುಟುಂಬದ ಮುಖ್ಯಸ್ಥ ಕದಿರು ಕೊಯ್ದು ಪೊಲಿ.. ಪೊಲಿ.. ದೇವಾ ಎನ್ನುತ್ತಾ ಕೊಂಡೊಯ್ಯುವ ಮೂಲಕ ಧಾನ್ಯ ಲಕ್ಷ್ಮಿಯನ್ನು ಮನೆಗೆ ತುಂಬಿಸಿಕೊಳ್ಳುವುದರೊಂದಿಗೆ ಸದಾ ಕಾಲ ಮನೆಯಲ್ಲಿ ಧವಸ ಧಾನ್ಯ ತುಂಬಿರುವಂತೆ ತಾಯಿ ಕಾವೇರಮ್ಮ ಹಾಗೂ ಪಾಡಿ ಇಗ್ಗುತ್ತಪ್ಪನಲ್ಲಿ ಪ್ರಾರ್ಥಿಸಿಕೊಳ್ಳಲಾಗುತ್ತದೆ.
ಹುತ್ತರಿ ಹಬ್ಬದ ಆಚರಣೆಗೆ ಸಂಬಂಧಿಸಿದಂತೆ ಈಗಾಗಲೇ ಪಾಡಿ ಇಗ್ಗುತ್ತಪ್ಪ ಸನ್ನಿಧಿಯಲ್ಲಿ ಅಮ್ಮಂಗಾಲ ಜ್ಯೋತಿಷ್ಯರು, ದೇವತಕ್ಕರು, ನಾಡ ಮುಖ್ಯಸ್ಥರು ಸೇರಿ ಸಮಯ ನಿಗದಿಪಡಿಸಿದ್ದು ಅದರಂತೆ ಮೊದಲಿಗೆ ಪಾಡಿ ಇಗ್ಗುತ್ತಪ್ಪ ಸನ್ನಿಧಾನದಲ್ಲಿ ರಾತ್ರಿ 7.45ಕ್ಕೆ ನೆರೆಕಟ್ಟುವ ಕಾರ್ಯಕ್ರಮ ನಡೆಯಲಿದ್ದು ಬಳಿಕ 8.45ಕ್ಕೆ ಗದ್ದೆಯಿಂದ ಕದಿರು ತೆಗೆಯಲಾಗುವುದು. ಇದಾದ ನಂತರ 9.45ಕ್ಕೆ ತೀರ್ಥಪ್ರಸಾದ ಹಾಗೂ ಕದಿರು ವಿತರಣೆ ನಡೆಯಲಿದೆ. ಇನ್ನು ಜಿಲ್ಲೆಯ ಜನತೆಗೆ ಹಬ್ಬ ಆಚರಣೆಗೆ ಸಮಯ ನಿಗದಿಯಾಗಿರುವಂತೆ ರಾತ್ರಿ 8ಕ್ಕೆ ನೆರೆ ಕಟ್ಟುವಂತೆಯೂ, 9ಕ್ಕೆ ಗದ್ದೆಯಿಂದ ಕದಿರು ತೆಗೆಯಲು, 10ಕ್ಕೆ ಪ್ರಸಾದ (ಭೋಜನ) ಸ್ವೀಕಾರ ಮಾಡುವಂತೆ ಸೂಚಿಸಲಾಗಿದೆ. ಅದರಂತೆ ಹುತ್ತರಿ ಹಬ್ಬಾಚರಣೆಗೆ ಜನತೆ ಮುಂದಾಗಿದ್ದಾರೆ.
ಈ ನಡುವೆ ಹಬ್ಬವನ್ನು ಕೊಡಗಿನಲ್ಲಿ ಮಾತ್ರವಲ್ಲದೆ, ಕೊಡವರು ಎಲ್ಲೆಲ್ಲಿ ನೆಲೆಸಿದ್ದಾರೆಯೋ ಅಲ್ಲೆಲ್ಲಾ ಹಬ್ಬವನ್ನು ಆಚರಿಸಲಾಗುತ್ತಿದೆ. ಬೆಂಗಳೂರು ಮತ್ತು ಮೈಸೂರಿನಲ್ಲಿ ಕೊಡವ ಸಮಾಜಗಳ ಮೂಲಕ ಹುತ್ತರಿ ಆಚರಣೆ ನಡೆಯುತ್ತಿದೆ.
-
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ -
Kannada: ಕರ್ನಾಟಕದಲ್ಲಿರುವ ಬ್ಯಾಂಕ್ಗಳಲ್ಲಿ ಸ್ಪಷ್ಟ ಕನ್ನಡ; ತುಳು, ಕೊಂಕಣಿ ಭಾಷೆಯ ಕಲರವ ಈಗ ಉಳಿದಿಲ್ಲ: ಕವಿರಾಜ್












Click it and Unblock the Notifications