ಮಾಧ್ಯಮಗಳ ಏಕಪಕ್ಷೀಯ ವರದಿ ವಿರುದ್ಧ ಸಿಎಂ ಕಿಡಿ

ರಾಜ್ಯ ಗೃಹ ಮಂಡಳಿ(KHB) ಸೂರ್ಯನಗರದ ಎರಡನೇ ಹಂತದ ಬಡಾವಣೆಯಲ್ಲಿ ಅಭಿವೃದ್ಧಿಪಡಿಸಿರುವ ನಿವೇಶನಗಳನ್ನು ಲಾಟರಿ ಮೂಲಕ ಹಂಚಿಕೆ ಮಾಡುವ ಪ್ರಕ್ರಿಯೆಗೆ ಭಾನುವಾರ ಚಾಲನೆ ನೀಡಿ ಅವರು ಮಾತನಾಡಿದರು.
ವಿರೋಧಿಗಳ ವಿರುದ್ಧ ಕಿಡಿ: 'ನಾನು ಹಗಲೂ ರಾತ್ರಿ ರಾಜ್ಯದ ಅಭಿವೃದ್ಧಿ ಬಗ್ಗೆ ಚಿಂತಿಸುತ್ತಿದ್ದೇನೆ. ಆದರೆ ರಾಜ್ಯಕ್ಕೆ ಒಳ್ಳೆಯದಾದರೆ ಕಣ್ಣೀರು ಹಾಕುವ ಕೆಲ ರಾಜಕಾರಣಿಗಳು ಇದ್ದಾರೆ. ಅವರಿಗೆ ದೇವರು ಒಳ್ಳೆಯ ಬುದ್ಧಿ ಕೊಡಲಿ'. ''ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ನಂತರ ಒಮ್ಮೆ ಕೂಡ ನೆಮ್ಮದಿಯಿಂದ ಕೆಲಸ ಮಾಡಲು ಪ್ರತಿಪಕ್ಷಗಳು ಬಿಟ್ಟಿಲ್ಲ, ಹಿಂದೆ ರಾಮಕೃಷ್ಣ ಹೆಗಡೆ, ಎಸ್.ಆರ್. ಬೊಮ್ಮಾಯಿ, ಜೆ.ಎಚ್. ಪಟೇಲ್, ಎಸ್.ಎಂ.ಕೃಷ್ಣ ಅವರಿಗೆ ಕಿರುಕುಳ ನೀಡಿದವರೇ ನನಗೂ ಕಿರುಕುಳ ನೀಡುತ್ತಿದ್ದಾರೆ" ಎಂದು ಪರೋಕ್ಷವಾಗಿ ಎಚ್.ಡಿ. ದೇವೇಗೌಡರ ವಿರುದ್ಧ ವಾಗ್ದಾಳಿ ನಡೆಸಿದರು.
ನಿರಾಶ್ರಿತರಿಗೆ ಮನೆ: ಉತ್ತರ ಕರ್ನಾಟಕದಲ್ಲಿ ನೆರೆಯಿಂದ ಹಾನಿಗೀಡಾಗಿದ್ದ 300 ಊರುಗಳನ್ನು ಎತ್ತರದ ಪ್ರದೇಶಗಳಿಗೆ ಸ್ಥಳಾಂತರ ಮಾಡಲಾಗಿದೆ, 30,000 ಮನೆಗಳನ್ನು ನಿರ್ಮಿಸಲಾಗಿದೆ, ಇನ್ನು 35 ಸಾವಿರ ಮನೆಗಳನ್ನು ಶೀಘ್ರವೇ ನಿರ್ಮಿಸಲಾಗುವುದು ಎಂದರು.
ವಸತಿ ಸಚಿವ ಕಟ್ಟಾ ಸುಬ್ರಹ್ಮಣ್ಯ ನಾಯ್ಡು ಮಾತನಾಡಿ, "ರಾಜ್ಯವನ್ನು ಗುಡಿಸಲು ಮುಕ್ತ ನಾಡನ್ನಾಗಿಸಬೇಕು, ಕೊಳೆಗೇರಿಗಳಲ್ಲಿ ವಾಸಿಸುತ್ತಿರುವವರಿಗೆ ಮನೆ ನಿರ್ಮಿಸಬೇಕು, ಹೊಸ ಕೊಳೆಗೇರಿಗಳು ಹುಟ್ಟಿಕೊಳ್ಳಲು ಬಿಡಬಾರದು. ಕಡಿಮೆ ಬೆಲೆಗೆ ನಿವೇಶನಗಳನ್ನು ಒದಗಿಸಬೇಕು ಎಂಬುದು ಸಿಎಂ ಅವರ ಮಹದಾಸ" ಎಂದರು.
ರಾಜ್ಯ ಗೃಹ ಮಂಡಳಿಯ ಅಧ್ಯಕ್ಷ ಜಿ.ಟಿ. ದೇವೇಗೌಡ ಮಾತನಾಡಿ, "ಆರ್ಥಿಕವಾಗಿ ದುರ್ಬಲವಾಗಿರುವ ಕುಟುಂಬಗಳಿಗೆ ಸೂರ್ಯ ನಗರ ಎರಡನೇ ಹಂತದಲ್ಲಿ 1330 ಸೈಟುಗಳನ್ನು ಲಾಟರಿ ಎತ್ತುವ ಮೂಲಕ ಹಂಚಲಾಗಿದೆ. ಒಟ್ಟು 8,733 ವಸತಿ ನಿವೇಶನಗಳು ಹಾಗೂ 272 ಮನೆಗಳನ್ನು ಮುಂಬರುವ ದಿನಗಳಲ್ಲಿ ನೀಡಲಾಗುವುದು" ಎಂದರು.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion












Click it and Unblock the Notifications