ಮುಖ್ಯಮಂತ್ರಿ ಗದ್ದುಗೆ ಮೇಲೆ ಯಡಿಯೂರಪ್ಪ ಉಡದ ಪಟ್ಟು

ಇಂದು ಪುಟ್ಟಪರ್ತಿಯಲ್ಲಿ ಸಾಯಿಬಾಬಾ ಅವರ 85ನೇ ಜನ್ಮದಿನ ಸಂಭ್ರಮದಲ್ಲಿ ಭಾಗವಹಿಸಿ ಸಾಯಿಬಾಬಾ ಅವರ ಆಶೀರ್ವಾದ ಪಡೆದ ನಂತರ ವಿಶೇಷ ವಿಮಾನದಲ್ಲಿ ಪ್ರಧಾನಿ ಮನಮೋಹನ ಸಿಂಗ್ ಅವರ ಜೊತೆಯಲ್ಲಿ ದೆಹಲಿಗೆ ತೆರಳಿ, ಸಂಜೆ ಕರ್ನಾಟಕ ಭವನದಲ್ಲಿ ಪತ್ರಕರ್ತರನ್ನುದ್ದೇಶಿಸಿ ಮಾತನಾಡಿದರು. ಅವರ ಮುಖದಲ್ಲಿ ಯಾವುದೇ ಬಗೆಯ ಕಳವಳ ಕಂಡುಬರಲಿಲ್ಲ. ಪಕ್ಕದಲ್ಲೇ ಇದ್ದ ಸದಾನಂದ ಗೌಡರ ಮುಗುಳ್ನಗೆ ಮೆರೆದಾಡುತ್ತಿತ್ತು. ಅತ್ಯಂತ ಪ್ರಸನ್ನವದನರಾಗಿ ಕೆಲಕ್ಷಣ ಮಾತನಾಡಿದ ಯಡಿಯೂರಪ್ಪ ವರಿಷ್ಠರೊಡನೆ ಮಾತುಕತೆ ನಡೆಸುವುದಾಗಿ ಹೇಳಿದರು.
ದೆಹಲಿಗೆ ತೆರಳುತ್ತಿದ್ದಂತೆ ವರಿಷ್ಠರನ್ನು ನೇರವಾಗಿ ಸಂಧಿಸಿ ಮಾತುಕತೆ ನಡೆಸುವ ಗೋಜಿಗೆ ಯಡಿಯೂರಪ್ಪ ಹೋಗಿಲ್ಲ. ಲೀಲಾ ಪ್ಯಾಲೇಸಿನಲ್ಲಿ ಅರುಣ್ ಜೇಟ್ಲಿ ಅವರೊಡನೆ ರಹಸ್ಯವಾಗಿ ಮಾತುಕತೆ ನಡೆಸಿದ್ದಾರೆ. ನಂತರ ಕರ್ನಾಟಕ ಭವನಕ್ಕೆ ತೆರಳಿ ಮಾಧ್ಯಮದವರಿಗೆ ತಮ್ಮ ನಿರ್ಧಾರ ತಿಳಿಸಿದ್ದಾರೆ. ಅವರ ಈ ನಿರ್ಧಾರದೊಂದಿಗೆ ಈ ರಾಜೀನಾಮೆ ಪ್ರಕರಣ ರೋಚಕ ಘಟಕ್ಕೆ ಬಂದು ತಲುಪಿದೆ.
ರಾಜ್ಯ ಮತ್ತು ಕೇಂದ್ರದ ವಿರೋಧ ಪಕ್ಷಗಳು ಮಾತ್ರವಲ್ಲ ಅನೇಕ ಬಿಜೆಪಿಯ ಶಾಸಕರು ಯಡಿಯೂರಪ್ಪನವರ ತಲೆದಂಡಕ್ಕೆ ಚಕ್ಕಳಮಕ್ಕಳ ಹಾಕಿ ಕುಳಿತಿದ್ದಾರೆ. ಅವರನ್ನು ಕೆಳಗಿಳಿಸಲು ಅರವನ್ನೇ ಬೆಂಬಲಿಸಿದವರು ಎಲ್ಲಾ ಪ್ರಯತ್ನಗಳನ್ನು ನಡೆಸಿದ್ದಾರೆ. ಆದರೆ, ಯಡಿಯೂರಪ್ಪನವರು ಕೆಲವೇ ಕೆಲವು ನಿಷ್ಠರ ಬೆಂಬಲದೊಂದಿಗೆ ನಿಂತಿದ್ದು, ಮುಖ್ಯಮಂತ್ರಿ ಆದರೆ ನಾನೊಬ್ಬನೇ ಆಗಿರಬೇಕು, ಬೇರೆ ಯಾರಿಗೂ ಅವಕಾಶವಿಲ್ಲ ಎಂದು ಹಠಹಿಡಿದು ಕುಳಿತಿದ್ದಾರೆ. ನಿಷ್ಠ ಶಾಸಕರು ಇಂದು ಮೊದಲೇ ದೆಹಲಿಗೆ ತೆರಳಿ ಯಡಿಯೂರಪ್ಪ ಪರ ಲಾಬಿ ನಡೆಸಿದ್ದು ಅವರ ನೆರವಿಗೆ ಬಂದಂತಿದೆ. ಕರ್ನಾಟಕದಲ್ಲಿ ಕೂಡ ವೀರಶೈವ ಮಠಾಧಿಪತಿಗಳು ಯಡಿಯೂರಪ್ಪನವರನ್ನು ಯಾಕೆ ಕೆಳಗಿಳಿಸಬೇಕು ಎಂದು ಪ್ರತ್ಯಕ್ಷವಾಗಿಯೇ ಪ್ರಶ್ನೆಗಳನ್ನು ಕೇಳುತ್ತಿದ್ದಾರೆ.
ಜೊತೆಗೆ ಕೇಂದ್ರ ಬಿಜೆಪಿ ನಾಯಕರಲ್ಲಿಯೂ ಭಿನ್ನಾಭಿಪ್ರಾಯಗಳಿವೆ. ಯಡಿಯೂರಪ್ಪ ಅವರು ಭಾಗಿಯಾಗಿದ್ದಾರೆನ್ನಲಾದ ಭ್ರಷ್ಟಾಚಾರ ಮತ್ತು ರಾಜೀನಾಮೆಗೆ ಸಂಬಂಧಿಸಿದಂತೆ ಗಟ್ಟಿ ನಿರ್ಧಾರ ತೆಗೆದುಕೊಳ್ಳಲು ವಿಫಲರಾಗಿರುವುದು ಮೇಲು ನೋಟಕ್ಕೆ ಕಂಡುಬಂದಿದೆ. ಮೊದಲು ಬೆಳಿಗ್ಗೆ 11 ಗಂಟೆಗೆ ರಾಜೀನಾಮೆ ನೀಡಲು ಗಡುವು ನೀಡಿದ್ದರು. ನಂತರ, ಅವರು ಬಂದ ನಂತರ ಚರ್ಚಿಸಿ ನಿರ್ಧಾರ ತೆಗೆದುಕೊಳ್ಳುವ ನಿರ್ಣಯಕ್ಕೆ ಬಂದಿತು. ಒಟ್ಟಾರೆಯಾಗಿ ಯಡಿಯೂರಪ್ಪನವರು ಬಿಜೆಪಿ ವರಿಷ್ಠರಿಗೆ ಬಿಸಿತುಪ್ಪವಾಗಿ ಪರಿಣಮಿಸಿದ್ದಾರೆ.
ತನಿಖೆಗೆ ಆಯೋಗ : ಅತ್ತ ದೆಹಲಿಯಲ್ಲಿ ರಾಜಕೀಯ ನಾಟಕ ನಡೆದಿರುವ ಹಂತದಲ್ಲಿ, ನವೆಂಬರ್ 1, 1995ರಿಂದ ಇಲ್ಲಿಯವರೆಗೆ ಬಿಡಿಎ, ಕೆಐಎಡಿಬಿ ಭೂಹಗರಣ, ಡಿನೋಡಿಫಿಕೇಷನ್, ಕೆಎಚ್ ಬಿಗಳಲ್ಲಿ ನಡೆದಿರುವ ಎಲ್ಲಾ ಹಗರಣಗಳ ನ್ಯಾಯಾಂಗ ತನಿಖೆಗೆಂದು ಕರ್ನಾಟಕ ಹೈಕೋರ್ಟ್ ನ ನಿವೃತ್ತ ನ್ಯಾಯಮೂರ್ತಿ ಬಿ ಪದ್ಮರಾಜ್ ಅವರ ನೇತೃತ್ವದ ಆಯೋಗವನ್ನು ರಚಿಸಿ ಸುತ್ತೋಲೆ ಹೊರಡಿಸಿದೆ. ಒಂದು ವರ್ಷದೊಳಗೆ ವರದಿಯನ್ನು ಆಯೋಗ ನೀಡಲಿದೆ.
-
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ












Click it and Unblock the Notifications