ಮುಖ್ಯಮಂತ್ರಿ ಗದ್ದುಗೆ ಮೇಲೆ ಯಡಿಯೂರಪ್ಪ ಉಡದ ಪಟ್ಟು

ಇಂದು ಪುಟ್ಟಪರ್ತಿಯಲ್ಲಿ ಸಾಯಿಬಾಬಾ ಅವರ 85ನೇ ಜನ್ಮದಿನ ಸಂಭ್ರಮದಲ್ಲಿ ಭಾಗವಹಿಸಿ ಸಾಯಿಬಾಬಾ ಅವರ ಆಶೀರ್ವಾದ ಪಡೆದ ನಂತರ ವಿಶೇಷ ವಿಮಾನದಲ್ಲಿ ಪ್ರಧಾನಿ ಮನಮೋಹನ ಸಿಂಗ್ ಅವರ ಜೊತೆಯಲ್ಲಿ ದೆಹಲಿಗೆ ತೆರಳಿ, ಸಂಜೆ ಕರ್ನಾಟಕ ಭವನದಲ್ಲಿ ಪತ್ರಕರ್ತರನ್ನುದ್ದೇಶಿಸಿ ಮಾತನಾಡಿದರು. ಅವರ ಮುಖದಲ್ಲಿ ಯಾವುದೇ ಬಗೆಯ ಕಳವಳ ಕಂಡುಬರಲಿಲ್ಲ. ಪಕ್ಕದಲ್ಲೇ ಇದ್ದ ಸದಾನಂದ ಗೌಡರ ಮುಗುಳ್ನಗೆ ಮೆರೆದಾಡುತ್ತಿತ್ತು. ಅತ್ಯಂತ ಪ್ರಸನ್ನವದನರಾಗಿ ಕೆಲಕ್ಷಣ ಮಾತನಾಡಿದ ಯಡಿಯೂರಪ್ಪ ವರಿಷ್ಠರೊಡನೆ ಮಾತುಕತೆ ನಡೆಸುವುದಾಗಿ ಹೇಳಿದರು.
ದೆಹಲಿಗೆ ತೆರಳುತ್ತಿದ್ದಂತೆ ವರಿಷ್ಠರನ್ನು ನೇರವಾಗಿ ಸಂಧಿಸಿ ಮಾತುಕತೆ ನಡೆಸುವ ಗೋಜಿಗೆ ಯಡಿಯೂರಪ್ಪ ಹೋಗಿಲ್ಲ. ಲೀಲಾ ಪ್ಯಾಲೇಸಿನಲ್ಲಿ ಅರುಣ್ ಜೇಟ್ಲಿ ಅವರೊಡನೆ ರಹಸ್ಯವಾಗಿ ಮಾತುಕತೆ ನಡೆಸಿದ್ದಾರೆ. ನಂತರ ಕರ್ನಾಟಕ ಭವನಕ್ಕೆ ತೆರಳಿ ಮಾಧ್ಯಮದವರಿಗೆ ತಮ್ಮ ನಿರ್ಧಾರ ತಿಳಿಸಿದ್ದಾರೆ. ಅವರ ಈ ನಿರ್ಧಾರದೊಂದಿಗೆ ಈ ರಾಜೀನಾಮೆ ಪ್ರಕರಣ ರೋಚಕ ಘಟಕ್ಕೆ ಬಂದು ತಲುಪಿದೆ.
ರಾಜ್ಯ ಮತ್ತು ಕೇಂದ್ರದ ವಿರೋಧ ಪಕ್ಷಗಳು ಮಾತ್ರವಲ್ಲ ಅನೇಕ ಬಿಜೆಪಿಯ ಶಾಸಕರು ಯಡಿಯೂರಪ್ಪನವರ ತಲೆದಂಡಕ್ಕೆ ಚಕ್ಕಳಮಕ್ಕಳ ಹಾಕಿ ಕುಳಿತಿದ್ದಾರೆ. ಅವರನ್ನು ಕೆಳಗಿಳಿಸಲು ಅರವನ್ನೇ ಬೆಂಬಲಿಸಿದವರು ಎಲ್ಲಾ ಪ್ರಯತ್ನಗಳನ್ನು ನಡೆಸಿದ್ದಾರೆ. ಆದರೆ, ಯಡಿಯೂರಪ್ಪನವರು ಕೆಲವೇ ಕೆಲವು ನಿಷ್ಠರ ಬೆಂಬಲದೊಂದಿಗೆ ನಿಂತಿದ್ದು, ಮುಖ್ಯಮಂತ್ರಿ ಆದರೆ ನಾನೊಬ್ಬನೇ ಆಗಿರಬೇಕು, ಬೇರೆ ಯಾರಿಗೂ ಅವಕಾಶವಿಲ್ಲ ಎಂದು ಹಠಹಿಡಿದು ಕುಳಿತಿದ್ದಾರೆ. ನಿಷ್ಠ ಶಾಸಕರು ಇಂದು ಮೊದಲೇ ದೆಹಲಿಗೆ ತೆರಳಿ ಯಡಿಯೂರಪ್ಪ ಪರ ಲಾಬಿ ನಡೆಸಿದ್ದು ಅವರ ನೆರವಿಗೆ ಬಂದಂತಿದೆ. ಕರ್ನಾಟಕದಲ್ಲಿ ಕೂಡ ವೀರಶೈವ ಮಠಾಧಿಪತಿಗಳು ಯಡಿಯೂರಪ್ಪನವರನ್ನು ಯಾಕೆ ಕೆಳಗಿಳಿಸಬೇಕು ಎಂದು ಪ್ರತ್ಯಕ್ಷವಾಗಿಯೇ ಪ್ರಶ್ನೆಗಳನ್ನು ಕೇಳುತ್ತಿದ್ದಾರೆ.
ಜೊತೆಗೆ ಕೇಂದ್ರ ಬಿಜೆಪಿ ನಾಯಕರಲ್ಲಿಯೂ ಭಿನ್ನಾಭಿಪ್ರಾಯಗಳಿವೆ. ಯಡಿಯೂರಪ್ಪ ಅವರು ಭಾಗಿಯಾಗಿದ್ದಾರೆನ್ನಲಾದ ಭ್ರಷ್ಟಾಚಾರ ಮತ್ತು ರಾಜೀನಾಮೆಗೆ ಸಂಬಂಧಿಸಿದಂತೆ ಗಟ್ಟಿ ನಿರ್ಧಾರ ತೆಗೆದುಕೊಳ್ಳಲು ವಿಫಲರಾಗಿರುವುದು ಮೇಲು ನೋಟಕ್ಕೆ ಕಂಡುಬಂದಿದೆ. ಮೊದಲು ಬೆಳಿಗ್ಗೆ 11 ಗಂಟೆಗೆ ರಾಜೀನಾಮೆ ನೀಡಲು ಗಡುವು ನೀಡಿದ್ದರು. ನಂತರ, ಅವರು ಬಂದ ನಂತರ ಚರ್ಚಿಸಿ ನಿರ್ಧಾರ ತೆಗೆದುಕೊಳ್ಳುವ ನಿರ್ಣಯಕ್ಕೆ ಬಂದಿತು. ಒಟ್ಟಾರೆಯಾಗಿ ಯಡಿಯೂರಪ್ಪನವರು ಬಿಜೆಪಿ ವರಿಷ್ಠರಿಗೆ ಬಿಸಿತುಪ್ಪವಾಗಿ ಪರಿಣಮಿಸಿದ್ದಾರೆ.
ತನಿಖೆಗೆ ಆಯೋಗ : ಅತ್ತ ದೆಹಲಿಯಲ್ಲಿ ರಾಜಕೀಯ ನಾಟಕ ನಡೆದಿರುವ ಹಂತದಲ್ಲಿ, ನವೆಂಬರ್ 1, 1995ರಿಂದ ಇಲ್ಲಿಯವರೆಗೆ ಬಿಡಿಎ, ಕೆಐಎಡಿಬಿ ಭೂಹಗರಣ, ಡಿನೋಡಿಫಿಕೇಷನ್, ಕೆಎಚ್ ಬಿಗಳಲ್ಲಿ ನಡೆದಿರುವ ಎಲ್ಲಾ ಹಗರಣಗಳ ನ್ಯಾಯಾಂಗ ತನಿಖೆಗೆಂದು ಕರ್ನಾಟಕ ಹೈಕೋರ್ಟ್ ನ ನಿವೃತ್ತ ನ್ಯಾಯಮೂರ್ತಿ ಬಿ ಪದ್ಮರಾಜ್ ಅವರ ನೇತೃತ್ವದ ಆಯೋಗವನ್ನು ರಚಿಸಿ ಸುತ್ತೋಲೆ ಹೊರಡಿಸಿದೆ. ಒಂದು ವರ್ಷದೊಳಗೆ ವರದಿಯನ್ನು ಆಯೋಗ ನೀಡಲಿದೆ.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications