ಮುಡಾ ಅವ್ಯವಹಾರಕ್ಕೆ ಮಂಡ್ಯ ಕರವೇ ಆಕ್ರೋಶ
ಮಂಡ್ಯದಲ್ಲೂ ಭೂ ಹಗರಣ: ಬಿಡಿಎ ನಿವೇಶನ ಪಡೆದಿರುವ ಸಂಸದ, ಶಾಸಕರು ನಾಚಿಕೆಯಿಲ್ಲದೇ, ನಿಯಮ ಉಲ್ಲಂಘಿಸಿ ನಿವೇಶನ ಪಡೆದಿದ್ದಾರೆ. ನಗರಸಭೆ ಉಪಾಧ್ಯಕ್ಷ ಚಿಕ್ಕಣ್ಣ ಸೇರಿದಂತೆ ಕೆಲವು ರಿಯಲ್ ಎಸ್ಟೇಟ್ ಉದ್ಯಮಿಗಳು, ಪ್ರಾಧಿಕಾರಿದ ಅಧಿಕಾರಿಗಳು ಬೇನಾಮಿ ಹೆಸರಿನಲ್ಲಿ ಹತ್ತು ಹಲವು ನಿವೇಶನಗಳನ್ನು ಪಡೆದು ಜನರ ಕಣ್ಣಿಗೆ ಮಣ್ಣೆರೆಚಿದ್ದಾರೆ. ನಿವೇಶನಕ್ಕೆ ಅರ್ಜಿ ಹಾಕಿದ್ದ ಸಾವಿರಾರು ಸಾಮಾನ್ಯ ಜನರಿಗೆ ವಂಚನೆಯಾಗಿದೆ ಎಂದು ಅವರು ಟೀಕಿಸಿದರು.
ಹಕ್ಕಿಗಾಗಿ ಹೋರಾಟ: ಮುಡಾದಲ್ಲಿ ನಿವೇಶನ ಪಡೆಯಲು ಅರ್ಜಿ ಸಲ್ಲಿಸಿರುವ ಎಲ್ಲ ಜನರು ಹಾಗೂ ಪ್ರಗತಿಪರ ಸಂಘಟನೆಗಳ ಮುಖಂಡರು ತಮ್ಮ ಹಕ್ಕು ಪಡೆಯಲು ಹೋರಾಟ ನಡೆಸುವುದು ಅನಿವಾರ್ಯವಾಗಿದ್ದು, ಈ ಸಂಬಂಧ ಚರ್ಚಿಸಲು ನ.29ರಂದು ಬೆಳಗ್ಗೆ 11.30ಕ್ಕೆ ನಗರದ ಪ್ರವಾಸಿ ಮಂದಿರಕ್ಕೆ ಆಗಮಿಸಬೇಕೆಂದು ಅವರು ಮನವಿ ಮಾಡಿದ್ದಾರೆ. ಭೂ ಹಗರಣದಿಂದ ರಾಜ್ಯದ ಜನತೆ ತಲೆತಗ್ಗಿಸುವಂತಹ ಪರಿಸ್ಥಿತಿ ಬಂದಿದ್ದು, ಕೂಡಲೇ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಸರಕಾರವನ್ನು ವಜಾಗೊಳಿಸಬೇಕು ಎಂದು ಅವರು ರಾಜ್ಯಪಾಲರನ್ನು ಆಗ್ರಹಿಸಿದ್ದಾರೆ.