ಸಾಗರದ ಉಮಾ ಮಹೇಶ್ವರಿ ದೇಗುಲದಲ್ಲಿ ದೀಪೋತ್ಸವ

ಜ್ಞಾನ ಮತ್ತು ವೈರಾಗ್ಯ ಎಲ್ಲಿ ಇರುತ್ತದೆಯೋ ಅಲ್ಲಿ ನಿಜವಾದ ಭಕ್ತಿ ಇರುತ್ತದೆ. ಬೇರೆಯವರಿಗೆ ಪ್ರದರ್ಶಿಸಲು ನಮ್ಮ ಪೂಜೆ ಪುನಸ್ಕಾರಗಳು ಎಂದಿಗೂ ಸಲ್ಲದು. ಇಂದು ವೈಯಕ್ತಿಕ ಬೆಳವಣಿಗೆಯ ಬಗ್ಗೆಯೇ ಮನುಷ್ಯ ಪ್ರಯತ್ನಗಳು ನಡೆಯುತ್ತವೆ ಹೊರತು ಗುಂಪಾಗಿ ಬದುಕುವುದನ್ನು ಮರೆತಿದ್ದೇವೆ. ಪ್ರಾಚೀನ ಉಮಾಮಹೇಶ್ವರ ದೇವಾಲಯದ ಜೀರ್ಣೋದ್ಧಾರಕ್ಕಾಗಿ ಇಲ್ಲಿಯ ಗ್ರಾಮಸ್ಥರು ಗುಂಪಾಗಿ ಕಾರ್ಯನಿರ್ವಹಿಸುತ್ತಿರುವುದು, ಪೂಜೆಯ ಜೊತೆಯಲ್ಲಿ ರೈತ ಕುಟುಂಬಗಳಿಗೆ ಕಂಬಳಿ ನೀಡುತ್ತಿರುವುದು ಶ್ಲಾಘನೀಯ ಎಂದರು.
ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಸಾಗರದ ತಹಶೀಲ್ದಾರ್ ಯೋಗೀಶ್ವರ್ ಮಾತನಾಡಿ, ತಾಯಿಯ ಋಣ, ಭೂಮಿಯ ಋಣ ತೀರಿಸಲು ಸಾಧ್ಯವಿಲ್ಲ. ಆಧುನಿಕತೆಯ ಜಾಡಿನಲ್ಲಿ ಜಾಗತಿಕ ತಾಪಮಾನ ಎಲ್ಲರಲ್ಲೂ ಸುಡುತ್ತಿದೆ. ದೇವರು ಧರ್ಮ ಎಂದರೆ ಪೂಜೆಯ ಜೊತೆಯಲ್ಲಿ ಸತ್ಯದ ಪ್ರತಿಪಾದನೆ ಎಂದರ್ಥ. ನಮ್ಮ ಪರಿಸರವನ್ನು ನಾವೇ ಹಾಳುಮಾಡುತ್ತಿದ್ದೇವೆ. ಜನರಲ್ಲಿ ಜಾಗೃತಿ ಮೂಡಿಸುವ ಭಾಷಣಗಳಿಗಿಂತ ನಮ್ಮನ್ನು ನಾವು ತಿದ್ದಿಕೊಳ್ಳಬೇಕು. ಪ್ರಾಚೀನ ದೇವಾಲಯಗಳು ನಮ್ಮ ಸಂಸ್ಕೃತಿಯ ಪ್ರತೀಕ. ಅವುಗಳನ್ನು ಉಳಿಸಿಕೊಳ್ಳುವಲ್ಲಿ ಪ್ರಯತ್ನಗಳು ಆಗಬೇಕು. ಅಂಹತ ಒಂದು ಪ್ರಯತ್ನ ಹೊಸಗುಂದದಲ್ಲಿ ನಡೆದಿದೆ ಎಂದರು.
ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಶ್ರೀ ಉಮಾಮಹೇಶ್ವರ ಸೇವಾ ಟ್ರಸ್ಟಿನ ಮುಖ್ಯಸ್ಥ ಸಿ.ಎಂ.ಎನ್.ಶಾಸ್ತ್ರಿ ಮಾತನಾಡಿ, ಕಾರ್ತಿಕ ಮಾಸದಲ್ಲಿ ದೀಪ ಹಚ್ಚುವುದು ಕತ್ತಲಿನಿಂದ ಬೆಳಕಿಗೆ ಬರುವ ಸಂಕೇತ. ಜ್ಯೋತಿ ಜ್ಞಾನದ ಸಂಕೇತ. ದೇವಾಲಯದ ಜೀರ್ಣೋದ್ಧಾರದ ಕಾರ್ಯದಲ್ಲಿ ಸಾಧು-ಸಂತರು, ದಾರ್ಶನಿಕರು, ಚುನಾಯಿತ ಪ್ರತಿನಿಧಿಗಳು, ಗ್ರಾಮಸ್ಥರು ಹೆಚ್ಚಿನ ಸಲಹೆ ಸಹಕಾರ ನೀಡಬೇಕು ಎಂದು ಅವರು ಮುಂದಿನ ಯೋಜನೆಗಳ ಕುರಿತಂತೆ ಮಾಹಿತಿ ನೀಡಿದರು.
ವೇದಿಕೆಯಲ್ಲಿ ಹೊಸೂರು ಗ್ರಾಮ ಪಂಚಾಯ್ತಿ ಅಧ್ಯಕ್ಷೆ ಘನಶೀಲ, ಉಪಾಧ್ಯಕ್ಷ ಲೋಕೇಶ್, ಸಂಸ್ಥೆಯ ಕೋವಿ ಪುಟ್ಟಪ್ಪ, ಹೆಡತ್ರಿ ಬಸವರಾಜಪ್ಪಗೌಡ, ಚಕ್ರಕೋಡಿ ಸುಬ್ಬರಾವ್, ಶೋಭಾಶಾಸ್ತ್ರಿ, ಇನ್ನಿತರರು ಉಪಸ್ಥಿತರಿದ್ದರು. ಶೀಲಾ ಸಿ.ರಾವ್ ಪ್ರಾರ್ಥಿಸಿದರು. ಜ್ಯೋತಿ ಮುರಳೀಧರ್ ನಿರ್ವಹಿಸಿದರು. ನಂತರ ಹೆಸರಾಂತ ಶಿಳ್ಳೆ ವಾದಕ ಸಿ.ಎನ್.ಮಾಧವಭಟ್ ಮತ್ತು ಸಂಗಡಿಗರಿಂದ ಸಂಗೀತ ಕಾರ್ಯಕ್ರಮ ಏರ್ಪಡಿಸಲಾಗಿತ್ತು.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ












Click it and Unblock the Notifications