ಬಿಜೆಪಿಯಿಂದ ಯಡಿಯೂರಪ್ಪ ಹಣೆಬರಹ ನಿರ್ಧಾರ ಇಂದು

ಮಂಗಳವಾರ ತಡರಾತ್ರಿ ಯಡಿಯೂರಪ್ಪ ಅವರೊಂದಿಗೆ ಮಾತುಕತೆ ನಡೆಸಿದ ಬಿಜೆಪಿ ವರಿಷ್ಠರು ಅವರಿಗೆ ಷರತ್ತು ಬದ್ಧ ಜೀವದಾನ ನೀಡಿದ್ದಾರೆ. ಅದರಂತೆ ಈವರೆಗೆ ಸ್ವಚ್ಛಂದವಾಗಿ ವಿಹರಿಸುತ್ತಿದ್ದ ಯಡಿಯೂರಪ್ಪ ಅವರಿಗೆ ಹಲವು ಕಠಿಣ ಕ್ರಮಗಳ ಮೂಲಕ ಮೂಗುದಾರ ತೊಡಿಸಲು ನಿರ್ಧರಿಸಿದ್ದಾರೆ. ಅವರ ಮೇಲಿನ ಭೂ ಹಗರಣಗಳ ತನಿಖೆಗೆ ಪಕ್ಷದ ಪ್ರಮುಖರನ್ನು ಒಳಗೊಂಡು ತನಿಖಾ ಸಮಿತಿ ರಚನೆಯೂ ಇದರಲ್ಲಿದೆ.
ರಾತ್ರಿ 11.30ರಿಂದ ಮಧ್ಯರಾತ್ರಿ 1.30ರ ತನಕ ಎರಡು ಗಂಟೆಗಳ ಕಾಲ ಪಕ್ಷದ ರಾಷ್ಟ್ರಾಧ್ಯಕ್ಷ ನಿತಿನ್ ಗಡ್ಕರಿ, ಹಿರಿಯ ನಾಯಕರಾದ ಅರುಣ್ ಜೈಟ್ಲಿ, ವೆಂಕಯ್ಯ ನಾಯ್ಡು ಜೊತೆ ಸುದೀರ್ಘ ಮಾತುಕತೆ ನಡೆಸಿದ ಯಡಿಯೂರಪ್ಪ ರಾಜಿ ಸೂತ್ರದ ಮೂಲಕ ಕುರ್ಚಿ ಉಳಿಸಿಕೊಂಡಿದ್ದಾರೆ.
ಒಂದು ವೇಳೆ ರಾಜೀನಾಮೆ ಪಡೆದುಕೊಂಡಿದ್ದೆ ಆದಲ್ಲಿ, ಯಡಿಯೂರಪ್ಪ ಪಕ್ಷದ ಹೈಕಮಾಂಡ್ ವಿರುದ್ಧ ತಿರುಗಿ ಬಿದ್ದು ಸೇಡು ತೀರಿಸಿಕೊಳ್ಳಬಹುದು. ಬೆಂಬಲಿಗ ಶಾಸಕರಿಂದ ರಾಜೀನಾಮೆ ಕೊಡಿಸಿ ಸರಕಾರ ಪತನಗೊಳಿಸಬಹುದು. ಚುನಾವಣೆ ಎದುರಾದಲ್ಲಿ ಸ್ವತಂತ್ರ ಪಕ್ಷ ಸ್ಥಾಪಿಸಬಹುದು. ಏಕಕಾಲದಲ್ಲಿ ಬಿಜೆಪಿ ಹಾಗೂ ಪ್ರತಿಪಕ್ಷಗಳ ವಿರುದ್ಧ ಹೋರಾಟ ಆರಂಭಿಸಬಹುದು.
ಯಡಿಯೂರಪ್ಪ ಕುರ್ಚಿ ಉಳಿಸಿಕೊಂಡರೆ ತಮ್ಮ ಮೇಲಿರುವ ಆರೋಪಗಳಿಂದ ಮುಕ್ತರಾಗಲು ಪ್ರಯತ್ನಿಸಬಹುದು. ಪ್ರತಿಪಕ್ಷಗಳ ನಾಯಕರ ಹಗರಣಗಳನ್ನು ಬಯಲಿಗೆಳೆಯಬಹುದು. ಜಿಪಂ, ತಾಪಂ ಚುನಾವಣೆಯಲ್ಲಿ ಹೆಚ್ಚು ಸ್ಥಾನ ಗಳಿಸಲು ಶ್ರಮಿಸಿ ತಮ್ಮ ಶಕ್ತಿ ಪ್ರದರ್ಶನ ಮಾಡಬಹುದು. ಹೈಕಮಾಂಡ್ ಆಶಯಕ್ಕೆ ತಕ್ಕಂತೆ ಆಡಳಿತ ನಡೆಸಬಹುದು.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications