ನನ್ನನ್ನು ಬೆಂಬಲಿಸಿದ ಮಠಾಧೀಶರಿಗೆ ಚಿರಋಣಿ

ಎಚ್ ಎಎಲ್ ಏರ್ ಪೋರ್ಟ್ ನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಯಡಿಯೂರಪ್ಪ, ನನ್ನನ್ನು ಮುಖ್ಯಮಂತ್ರಿ ಪದವಿಯಿಂದ ಇಳಿಸಬಾರದು ಎಂದು ನಾಡಿನ ಅನೇಕ ಮಠಾಧೀಶರು ಬೆಂಬಲ ವ್ಯಕ್ತಪಡಿಸಿದ್ದಕ್ಕೆ ಅವರಿಗೆ ನಾನು ಚಿರಋಣಿಯಾಗಿದ್ದೇನೆ. ಮಠಾಧೀಶರು ಹಾಗೂ ಪಕ್ಷದ ವರಿಷ್ಠರ ಆಶೀರ್ವಾದದಿಂದ ನಾನು ಮತ್ತೆ ಮುಖ್ಯಮಂತ್ರಿಯಾಗಿ ಬೆಂಗಳೂರಿಗೆ ಹಿಂತಿರುಗಿರುವೆ ಎಂದು ಸಂಭ್ರಮದಿಂದ ಹೇಳಿಕೊಂಡರು.
ಪ್ರತಿಪಕ್ಷಗಳು ವಿನಾಕಾರಣ ಸುಳ್ಳು ಆಪಾದನೆ ಮಾಡುವ ಗೊಂದಲ ಸೃಷ್ಟಿಸಿವೆ. ಸರಕಾರ ಉರುಳಿಸುವ ಕೆಲಸಕ್ಕೆ ಕೈಹಾಕದೆ, ಸರಕಾರ ಮಾಡುತ್ತಿರುವ ಅಭಿವೃದ್ಧಿ ಕೆಲಸ ಕಾರ್ಯಗಳಿಗೆ ಸಹಕಾರ ನೀಡಿ. ಈ ಯಡಿಯೂರಪ್ಪ ವಿರುದ್ಧ ತೊಡೆ ತಟ್ಟುವುದಾದರೆ, ಮುಂಬರುವ ಜಿಪಂ, ತಾಪಂ ಚುನಾವಣೆಯಲ್ಲಿ ನಿಮ್ಮ ಶಕ್ತಿ ತೋರಿಸಿ ಎಂದು ಯಡಿಯೂರಪ್ಪ ಪ್ರತಿಪಕ್ಷಗಳಿಗೆ ಸವಾಲು ಹಾಕಿದರು.
ದೇಶದ ಪ್ರತಿಷ್ಠಿತ ಪತ್ರಿಕೆಯಾದ ಇಂಡಿಯಾ ಟುಡೇ ಮಾಡಿದ ಸರ್ವೆಯೊಂದರಲ್ಲಿ ಕರ್ನಾಟಕ ಹಣಕಾಸು ಸ್ಥಿತಿ ಸುಭದ್ರವಾಗಿದ್ದು, ಏಳನೇ ಸ್ಥಾನದಲ್ಲಿದೆ ಎಂದು ಹೇಳಿದೆ, ವಿನಾಕಾರಣ ಆರೋಪ ಮಾಡುತ್ತಿರುವ ಪ್ರತಿಪಕ್ಷಗಳು ಉತ್ತರಿಸುತ್ತವೆಯೇ ಎಂದು ಪ್ರಶ್ನಿಸಿದ ಅವರು, ಮುಖ್ಯವಾಗಿ ಜೆಡಿಎಸ್ ನಾಯಕರು ಇದನ್ನು ಅರ್ಥ ಮಾಡಿಕೊಳ್ಳಬೇಕು ಎಂದು ಯಡಿಯೂರಪ್ಪ ಹೇಳಿದರು.
ಯಡಿಯೂರಪ್ಪ ಅವರಿಗೆ ಜೀವದಾನ ನೀಡಿರುವ ಬಿಜೆಪಿ ಹೈಕಮಾಂಡ್, ಕೆಲ ಷರತ್ತು ವಿಧಿಸಿದೆ. ಮುಖ್ಯವಾಗಿ ಪಾರದರ್ಶಕ ಆಡಳಿತ ನೀಡಬೇಕು, ಪಕ್ಷದ ಎಲ್ಲ ನಾಯಕರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು. ಕುಟುಂಬ ಸದಸ್ಯರನ್ನು ಆಡಳಿತದಿಂದ ದೂರ ಇಡಬೇಕು ಎಂದು ಸ್ಪಷ್ಟವಾಗಿ ಹೇಳಿದೆ. ಇದೆಲ್ಲಕ್ಕೂ ಒಪ್ಪಿಕೊಂಡಿರುವ ಯಡಿಯೂರಪ್ಪ ಮುಂದಿನ ದಿನಗಳಲ್ಲಿ ಎಂತಹ ಆಡಳಿತ ನೀಡುವರು ಎನ್ನುವುದು ಕಾಲ ಉತ್ತರಿಸಬೇಕಿದೆ.
ಯಡಿಯೂರಪ್ಪ ಅವರ ಕುರ್ಚಿ ಯುದ್ಧ ಮುಗಿಯಿತು ಎನ್ನುವಷ್ಟರಲ್ಲಿ ಮತ್ತೆ ಬಳ್ಳಾರಿ ರೆಡ್ಡಿಗಳು ಕ್ಯಾತೆ ತೆಗೆದಿದ್ದಾರೆ. ಸಮಾರಂಭವೊಂದರಲ್ಲಿ ಮಾತನಾಡಿದ ಜನಾರ್ದನರೆಡ್ಡಿ, ಸ್ವಾಮೀಜಿಗಳಿಗೆ ರಾಜಕೀಯ ಏಕೆ ಬೇಕು? ಒಬ್ಬ ಮನುಷ್ಯ ವಿರುದ್ಧ ಬೀದಿಗಿಳಿದು ಹೋರಾಟ ಮಾಡುವುದು ಧರ್ಮವೇ ಎಂದು ಪ್ರಶ್ನಿಸಿದ್ದಾರೆ. ಒಟ್ಟಿನಲ್ಲಿ ಇನ್ನೊಂದು ರಂಪಾಟ ಬಿಜೆಪಿಯಲ್ಲಿ ಶುರುವಾಗಲಿದೆ ಎಂಬ ಸೂಚನೆಯನ್ನು ಇಂದು ರೆಡ್ಡಿ ನೀಡಿದ್ದಾರೆ.
-
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger












Click it and Unblock the Notifications