ಕಿರಣ್ ಕುಮಾರ್ ರೆಡ್ಡಿ ಆಂಧ್ರಪ್ರದೇಶದ ನೂತನ ಸಿಎಂ

ರಾಯಲಸೀಮಾ ಪ್ರಾಂತ್ಯದ ಚಿತ್ತೂರು ಜಿಲ್ಲೆಯ ತಮ್ಮ ಸ್ವಂತ ಊರಿನಿಂದ ಶಾಸಕರಾಗಿ ಆಯ್ಕೆಯಾಗಿರುವ 50 ವರ್ಷ ವಯಸ್ಸಿನ ರೆಡ್ಡಿ ಕಾಂಗ್ರೆಸ್ ವಿರುದ್ಧ ಬಂಡೆದ್ದಿರುವ ಪಕ್ಷದ ಕಡಪಾ ಲೋಕಸಭೆ ಸದಸ್ಯ ಜಗನ್ ಮೋಹನ್ ರೆಡ್ಡಿಯವರ ಸವಾಲನ್ನು ಎದುರಿಸುವ ಗುರುತರ ಹೊಣೆಗಾರಿಕೆಯನ್ನು ನಿಭಾಯಿಸಬೇಕಿದೆ. ದಿವಂಗತ ಮುಖ್ಯಮಂತ್ರಿ ರಾಜಶೇಖರ ರೆಡ್ಡಿಯವರ ಆಪ್ತ ಅನುಯಾಯಿ ಎಂದು ಭಾವಿಸಲಾಗಿರುವ ರೆಡ್ಡಿ ಮುಖ್ಯ ಸಚೇತಕರಾಗಿ ಸಹ ಕೆಲಸ ಮಾಡಿದ್ದಾರೆ.
ಪ್ರಧಾನ ಪ್ರತಿಪಕ್ಷ ತೆಲುಗುದೇಶಂ ವಿರುದ್ಧ ಹಾಗೂ ತಮ್ಮ ಕಟ್ಟಾ ವಿರೋಧಿ ಎನ್ ಚಂದ್ರಬಾಬು ನಾಯ್ಡು ಅವರ ವಿರುದ್ಧ ಸಮರ್ಥವಾಗಿ ಕರ್ತವ್ಯ ನಿರ್ವಹಿಸಿದ ಕೀರ್ತಿ ಅವರದಾಗಿದೆ. ವೈಚಿತ್ರ್ಯವೆಂದರೆ ಕಿರಣ್ ಕುಮಾರ್ ಅವರ ತಂದೆ ದಿವಂಗತ ಅಮರನಾಥರೆಡ್ಡಿ, ಚಂದ್ರಬಾಬು ನಾಯ್ಡು ಅವರ ರಾಜಕೀಯ ಗುರುವಾಗಿದ್ದರು. ಹೈದರಬಾದಿನ ನಿಜಾಂ ಕಾಲೇಜಿನಲ್ಲಿ ಪದವಿ ಪೂರೈಸಿ ನಂತರ ಕಾನೂನು ಪದವಿ ಪಡೆದರು.
ಉತ್ತಮ ಕ್ರಿಕೆಟ್ ಆಟಗಾರರಾಗಿದ್ದ ಕಿರಣ್ಕುಮಾರ್ ರೆಡ್ಡಿ, ಭಾರತ ತಂಡದ ಮಾಜಿ ನಾಯಕ ಮೊಹಮ್ಮದ್ ಅಜರುದ್ದೀನ್ರ ಜತೆ ಆಡಿದ್ದು ಹೈದರಾಬಾದ್ ರಣಜಿ ತಂಡವನ್ನೂ ಪ್ರತಿನಿಧಿಸಿದ್ದರು. ಚಿತ್ತೂರು ಜಿಲ್ಲೆಯ ವಾಯಲ್ಪಾಡುನಿಂದ 1989ರಲ್ಲಿ ಮೊದಲ ಬಾರಿ ಆಂಧ್ರಪ್ರದೇಶ ವಿಧಾನಸಭೆಗೆ ಆರಿಸಿ ಬಂದಿದ್ದರು. 1999 ಮತ್ತು 2004ರಲ್ಲೂ ಅದೇ ಕ್ಷೇತ್ರದಿಂದ ಗೆಲುವು ಸಾಧಿಸಿದ್ದರು.
2009ರಲ್ಲಿ ಕ್ಷೇತ್ರ ಪುನರ್ ವಿಂಗಡಣೆ ಕಾರಣ ಅವರು ಪೀಲೇರುನಿಂದ ಸ್ಪರ್ಧಿಸಿ ಗೆದ್ದಿದ್ದರು. ಸಚಿವರಾಗುವ ಆಸೆ ಅವರಿಗೆ ಇತ್ತಾದರೂ ಚಿತ್ತೂರು ರಾಜಕೀಯದ ಲೆಕ್ಕಾಚಾರಗಳ ಕಾರಣ ಅವರಿಗೆ ಸಚಿವ ಪದವಿ ದೊರೆಯಲಿಲ್ಲ. ಬದಲಿಗೆ ಸ್ಪೀಕರ್ ಪದವಿ ಅವರನ್ನು ಅರಸಿ ಬಂದಿತು. ಕೆ ರೋಶಯ್ಯ 2009ರ ಸೆಪ್ಟೆಂಬರ್ ನಲ್ಲಿ ಮುಖ್ಯಮಂತ್ರಿಯಾದ ನಂತರ ಮತ್ತೊಮ್ಮೆ ಅವರು ಸಚಿವ ಸ್ಥಾನದ ಆಕಾಂಕ್ಷಿಯಾಗಿದ್ದರು. ಆದರೆ ಸಂಪುಟ ವಿಸ್ತರಣೆ ನಡೆಯಲೇ ಇಲ್ಲ.
-
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ












Click it and Unblock the Notifications