Get Updates
Get notified of breaking news, exclusive insights, and must-see stories!

ರೋಸಯ್ಯ ಕರ್ನಾಟಕ ರಾಜ್ಯಪಾಲ?

Rosaiah Karnataka's Governor?
ಬೆಂಗಳೂರು, ನ. 25 : ನಿನ್ನೆ ತಾನೇ ಆಂಧ್ರಪ್ರದೇಶ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಮಾಜಿ ಮುಖ್ಯಮಂತ್ರಿ ರೋಸಯ್ಯ ಅವರು ಕರ್ನಾಟಕದ ರಾಜ್ಯಪಾಲರಾಗಿ ನೇಮಕಗೊಳ್ಳುವ ಸಾಧ್ಯತೆ ಹೆಚ್ಚಾಗಿದೆ. ಇದೊಂದು ಪೂರ್ವ ನಿಯೋಜಿತ ಬೆಳವಣಿಗೆ ಎಂದು ಕಾಂಗ್ರೆಸ್ ವಲಯ ಹೇಳುತ್ತದೆ.

ಕರ್ನಾಟಕದ ಪ್ರಸಕ್ತ ರಾಜ್ಯಪಾಲರಾಗಿರುವ ಎಚ್ ಆರ್ ಭಾರದ್ವಾಜ್ ಅವರು ಇತ್ತೀಚೆಗೆ ದೆಹಲಿಯಲ್ಲಿ ರೋಶಯ್ಯ ಅವರನ್ನು ಭೇಟಿ ಮಾಡಿ ಚರ್ಚಿಸಿದ್ದಾರೆ. ಈ ಬಗ್ಗೆ ಇಬ್ಬರೂ ಕಾಂಗ್ರೆಸ್ ವರಿಷ್ಠರಾದ ಸೋನಿಯಾ ಗಾಂಧಿ ಅವರೊಂದಿಗೆ ಮಾತುಕತೆ ನಡೆಸಿದ್ದಾರೆ. ಕರ್ನಾಟಕದ ಬಿಜೆಪಿ ಸರಕಾರದೊಂದಿಗೆ ಭಾರದ್ವಾಜ್ ಅವರು ವರ್ತಿಸುತ್ತಿರುವ ರೀತಿಯಿಂದ ವರಿಷ್ಠರು ಅಸಮಾಧಾನಗೊಂಡಿದ್ದಾರೆ.

ಇತ್ತೀಚಿನ ನಡೆದ ಬಂಡಾಯ ಶಾಸಕರ ವಿಷಯದಲ್ಲಿ ರಾಜ್ಯಪಾಲ ಎಚ್ ಆರ್ ಭಾರದ್ವಾಜ್ ನಡೆದುಕೊಂಡ ರೀತಿ ಸ್ವತಃ ಕಾಂಗ್ರೆಸ್‌ಗೆ ಮುಜುಗರ ತಂದಿತ್ತು. ಇದರಿಂದ ತಕ್ಷಣ ಅವರನ್ನು ಬದಲಾವಣೆ ಮಾಡುವ ಹಂತಕ್ಕೆ ಬಂದಿತ್ತು. ಆದರೆ, ಇನ್ನೊಂದು ಸುತ್ತಿನ ಮುಖಭಂಗಕ್ಕೆ ಈಡಾಗುವುದು ಬೇಡ ಎಂಬ ಕಾರಣದಿಂದ ಇಲ್ಲಿಯವರೆಗೂ ಅವರನ್ನೇ ಮುಂದುವರಿಸಿಕೊಂಡು ಬಂದಿದೆ. ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿರುವ ರೋಶಯ್ಯ ಅವರನ್ನು ಈ ಜಾಗಕ್ಕೆ ತರುವ ನಿಟ್ಟಿನಲ್ಲಿ ಹೈಕಮಾಂಡ್ ಚಿಂತನೆ ನಡೆಸಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+