ಯಡಿಯೂರಪ್ಪ ವಿರುದ್ಧದ ಶಿಕಾರಿಪುರ ಬಂದ್ ಯಶಸ್ವಿ

ಭ್ರಷ್ಟಾಚಾರ ತಾಂಡವವಾಡುತ್ತಿದೆ: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಭ್ರಷ್ಟಾಚಾರ, ಸ್ವಜನ ಪಕ್ಷಪಾತ, ಅಧಿಕಾರ ದುರುಪಯೋಗ ಸೇರಿದಂತೆ ಹಲವು ಪ್ರಕರಣಗಳಲ್ಲಿ ದಾಖಲೆಗಳ ಸಮೇತ ಸಿಕ್ಕಿಬಿದ್ದಿದ್ದಾರೆ. ಬಿಜೆಪಿಯ ವರಿಷ್ಠರು ಈ ಭ್ರಷ್ಟ ಮುಖ್ಯಮಂತ್ರಿಯ ವಿರುದ್ಧ ಕಟುವಾದ ಕ್ರಮ ಕೈಗೊಳ್ಳುತ್ತಾರೆಂಬ ನಿರೀಕ್ಷೆಯೂ ಸುಳ್ಳಾಗಿದೆ. ಇಡೀ ಬಿಜೆಪಿ ಪಕ್ಷ ಯಡಿಯೂರಪ್ಪರವರ ಪ್ರಕರಣಕ್ಕೆ ಸಂಬಂಧಿಸಿದಂತೆ ತಿಪ್ಪೆ ಸಾರುವುದರ ಮೂಲಕ ನೈತಿಕತೆಯನ್ನು ಕಳೆದು ಕೊಂಡಿದೆ. ಈ ಭ್ರಷ್ಟಾಚಾರದಿಂದ ಬಿಜೆಪಿಯ ಕೇಂದ್ರನಾಯಕರಿಗೂ ಪಾಲು ಸಿಕ್ಕಿರುವಂತೆ ಕಂಡುಬರುತ್ತಿದೆ ಎಂದು ಪ್ರತಿಭಟನಾನಿರತ ಕಾಂಗ್ರೆಸ್ಸಿಗರು ಆರೋಪಿಸಿದರು.
ಮುಖ್ಯಮಂತ್ರಿಗಳ ಭ್ರಷ್ಟಾಚಾರವನ್ನು ವಿರೋಧಿಸಿ ಹಾಗೂ ಬಿಜೆಪಿ ಹೈಕಮಾಂಡ್ನ ತೆವಲು ನೀತಿಯನ್ನು ಖಂಡಿಸಿ ಕೆಪಿಸಿಸಿ ಸದಸ್ಯ ಶಾಂತವೀರಪ್ಪ ಗೌಡ ಶಿಕಾರಿಪುರ ತಾಲ್ಲೂಕು ಬಂದ್ಗೆ ಕರೆ ನೀಡಿದ್ದು, ಇಂದು ಸಂಪೂರ್ಣ ತಾಲ್ಲೂಕು ಅವರ ಬೆಂಬಲಕ್ಕೆ ನಿಂತಿದೆ. ಆದರೆ, ಶಾಂತವೀರಪ್ಪ ಗೌಡರನ್ನು ಏಕಾಏಕೀ ಮನೆಯಿಂದಲೇ ಬಂಧಿಸಿ ಕುಂಸಿ ಠಾಣೆಯಲ್ಲಿ ಇಟ್ಟಿರುವುದು ಸರಿಯಲ್ಲ. ಅಧಿಕಾರಿಗಳ ಕೈ ಕಡಿಯಿರಿ ಎಂದು ಹೇಳಿಕೆ ನೀಡಿರುವ ಮುಖ್ಯಮಂತ್ರಿ ಯಡಿಯೂರಪ್ಪರವರನ್ನು ಕೂಡಲೇ ಬಂಧಿಸಬೇಕು ಎಂದು ಒತ್ತಾಯಿಸಿದರು.
ಬಿಜೆಪಿಯ ನಾಯಕರು ಕಾಂಗ್ರೆಸ್ ಪಕ್ಷದ ಬಗ್ಗೆ ಟೀಕೆ ಮಾಡುವ ಹಕ್ಕು ಕಳೆದುಕೊಂಡಿದ್ದಾರೆ. ಆರೋಪ ಕೇಳಿಬಂದ ತಕ್ಷಣ ಶಶಿತರೂರ್ ಹಾಗೂ ಅಶೋಕ್ ಚವ್ಹಾಣ್ ವಿರುದ್ಧ ಕ್ರಮ ಕೈಗೊಂಡ ಕಾಂಗ್ರೆಸ್ನಂತೆ ಬಿಜೆಪಿಯೂ ಕ್ರಮಕೈಗೊಳ್ಳಬೇಕಿತ್ತು. ಆದರೆ, ಬಿಜೆಪಿ ಎಲ್ಲವನ್ನೂ ಬಿಟ್ಟಿದೆ ಎಂದು ಪ್ರತಿಭಟನಾಕಾರರು ಟೀಕಿಸಿದರು.
ಧರ್ಮ ರಕ್ಷಣೆಯ ಗುರಿಯಾಗಬೇಕಿದ್ದ ಮಠಾಧೀಶರು ಜಾತಿಯ ವ್ಯವಸ್ಥೆಗೆ ಚಾಲನೆ ನೀಡುವುದರ ಮೂಲಕ ಜಾತಿಸಂಘರ್ಷಕ್ಕೆ ಎಡೆಮಾಡಿರುವುದು ಖಂಡನೀಯ. ಕೆಲವು ಮಠಾಧೀಶರು ಭ್ರಷ್ಟ ಯಡಿಯೂರಪ್ಪ ಪರ ನಿಂತಿರುವುದು ದುರ್ದೈವ. ಅಂಗೈ ಹುಣ್ಣಿಗೆ ಕನ್ನಡಿ ಬೇಕೆ ಎಂಬಂತೆ ಆಯೋಗವನ್ನು ರಕ್ಷಣೆ ಮಾಡಿರುವುದು ಖಂಡನೀಯ.
ಶಿಕಾರಿಪುರದಲ್ಲಿ ಈ ಭ್ರಷ್ಟ ಮುಖ್ಯಮಂತ್ರಿಯನ್ನು ಖಂಡಿಸಿ ಪ್ರತಿಭಟಿಸುತ್ತಿದ್ದ ಕಾಂಗ್ರೆಸ್ ಹಾಗೂ ಪ್ರಗತಿಪರ ಸಂಘಟನೆಯ ನಾಯಕರುಗಳನ್ನು ಕೂಡಲೇ ಬಿಡುಗಡೆ ಮಾಡಬೇಕು. ಯಡಿಯೂರಪ್ಪ ಗೂಂಡಾ ಪ್ರವೃತ್ತಿಯ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು. ಪೊಲೀಸರು ಯಡಿಯೂರಪ್ಪನ ಕೈಗೊಂಬೆಯಂತೆ ವರ್ತಿಸಬಾರದು ಎಂದು ಆಕ್ರೋಶ ವ್ಯಕ್ತಪಡಿಸಿದರು.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications